18
May

ರಾಷ್ಟ್ರೀಯ ಅಧ್ಯಕ್ಷ ಎಂ.ಕೆ.ಫೈಝಿ ತೀವ್ರವಾಗಿ ಖಂಡಿಸಿದ್ದಾರೆ. ವಿದ್ಯುತ್ ಕ್ಷೇತ್ರವನ್ನು ಸಂಪೂರ್ಣವಾಗಿ ಖಾಸಗೀಕರಣಗೊಳಿಸುವ ಉದ್ದೇಶ ಹೊಂದಿರುವ ಈ ಮಸೂದೆ ಈ ದೇಶದ ಜನರಿಗೆ ದೊಡ್ಡ ಸವಾಲಾಗಲಿದೆ ಎಂದು ಅವರು ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ. ದೇಶವು ಸಂಪೂರ್ಣ ಲಾಕ್‌ಡೌನ್ ಪರಿಸ್ಥಿತಿಯಲ್ಲಿರುವಾಗ, ಆಕ್ಷೇಪಣೆಗಳನ್ನು ಸಲ್ಲಿಸಲು ಕೇವಲ ಮೂರು ವಾರಗಳ ಕಾಲಾವಕಾಶ ನೀಡುವ ಮೂಲಕ ಮಸೂದೆಯನ್ನು ಜಾರಿಗೆ ತರಲು ಸರ್ಕಾರ ತರಾತುರಿಯಲ್ಲಿದೆ ಎಂದು ಅವರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮಸೂದೆ ಜಾರಿಗೆ ಬರುತ್ತಿರುವಂತೆಯೇ ವಿದ್ಯುತ್ ದರ ತೀವ್ರ ಪ್ರಮಾಣದಲ್ಲಿ ಹೆಚ್ಚಾಗಲಿದೆ. ಆರ್ಥಿಕ ಬಿಕ್ಕಟ್ಟಿನಿಂದಾಗಿ ಈಗಾಗಲೇ ತೀವ್ರ ಸಂಕಷ್ಟದಲ್ಲಿರುವ ಜನರನ್ನು ಈ ವಿದ್ಯುತ್ ದರ ಏರಿಕೆ ಮತ್ತಷ್ಟು ಬಡತನಕ್ಕೆ ತಳ್ಳಲಿದೆ. ಒಂದೋ ಸಬ್ಸಿಡಿ ರದ್ದುಗೊಳಿಸಲಾಗುತ್ತದೆ ಅಥವಾ ಸಬ್ಸಿಡಿಯನ್ನು ರಾಜ್ಯ ಸರ್ಕಾರಗಳ ಮೇಲೆ ಹೊರಿಸಲಾಗುತ್ತದೆ. ಒಂದು ವೇಳೆ ರಾಜ್ಯ ಸರ್ಕಾರಗಳು ಗ್ರಾಹಕರಿಗೆ ಸಬ್ಸಿಡಿ ನೀಡಿದರೆ ರಾಜ್ಯ ಸರ್ಕಾರಗಳ ಬೊಕ್ಕಸಕ್ಕೆ ಹೆಚ್ಚುವರಿ ಹೊರೆಯಾಗುತ್ತದೆ ಎಂದು ಅವರು ಹೇಳಿದ್ದಾರೆ. ಅಂತಿಮವಾಗಿ, ಈ ತಿದ್ದುಪಡಿಯು ಕಾರ್ಪೊರೇಟ್ ವರ್ಗಕ್ಕೆ ಅನುಕೂಲ ಮಾಡಿಕೊಡಲಿದೆ. ಈ ಉದ್ದೇಶವನ್ನು ಪೂರೈಸಲು ಮೋದಿ ಸರ್ಕಾರವು ಮಸೂದೆಯನ್ನು ಅಂಗೀಕರಿಸಲು ಆತುರದಲ್ಲಿದೆ. ಕಾರ್ಪೊರೇಟ್ ಹಿತಾಸಕ್ತಿಗಳನ್ನು ರಕ್ಷಿಸಲು ಕೇಂದ್ರ ಸರ್ಕಾರದ ಈ ಪ್ರಯತ್ನವು ದೇಶದ ಗ್ರಾಹಕರ ಮೇಲೆ, ವಿಶೇಷವಾಗಿ ರೈತರು ಮತ್ತು ಬಡವರ ಮೇಲೆ ದುಷ್ಪರಿಣಾಮ ಬೀರಲಿದೆ. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಾಗಿನಿಂದಲೂ ವಿದ್ಯುತ್ ಕ್ಷೇತ್ರವನ್ನು ಖಾಸಗೀಕರಣಗೊಳಿಸಲು ಹಲವಾರು ಪ್ರಯತ್ನಗಳು ನಡೆದಿವೆ. ಈ ಲಾಕ್‌ಡೌನ್ ಅದನ್ನು ಪೂರ್ಣಗೊಳಿಸಲು ಉತ್ತಮ ಅವಕಾಶವೆಂದು ಸರ್ಕಾರ ಭಾವಿಸಿದೆ, ಎಂದು ಫೈಝಿ ಅಭಿಪ್ರಾಯಿಸಿದ್ದಾರೆ. ಈ ಕಾಯ್ದೆಗೆ ತಿದ್ದುಪಡಿ ತರುವ ಕ್ರಮದಿಂದ ಕೇಂದ್ರ ಸರ್ಕಾರ ತಕ್ಷಣ ಹಿಂದೆ ಸರಿಯಬೇಕು. ಸಂವಿಧಾನದ ಸಮವರ್ತಿ ಪಟ್ಟಿಯಡಿಯಲ್ಲಿ ಬರುವ ವಿದ್ಯುತ್ ಸರಬರಾಜಿನ ಮೇಲಿನ ರಾಜ್ಯ ಸರ್ಕಾರಗಳ ನಿಯಂತ್ರಣವನ್ನು ತೆಗೆದುಹಾಕುವ ಈ ಮಸೂದೆಯನ್ನು ಬಲವಾಗಿ ವಿರೋಧಿಸಲು ಬಿಜೆಪಿಯೇತರ ಪಕ್ಷಗಳು ಮುಂದೆ ಬರಬೇಕೆಂದು ಅವರು ಕರೆ ನೀಡಿದ್ದಾರೆ

Leave A Comment