ಸರಕಾರ ಮೂರು ತಿಂಗಳ ವಿದ್ಯುತ್ ಶುಲ್ಕವನ್ನು ಮನ್ನಾ ಮಾಡಲಿ ಎಸ್ಡಿಪಿಐ

ಕಳೆದ ಒಂದುವರೆ ತಿಂಗಳಿಗಿಂತಲೂ ಹೆಚ್ಚು ಕಾಲ ರಾಜ್ಯಾದ್ಯಂತ ಲಾಕ್ ಡೌನ್ ನಿಂದಾಗಿ ಜನತೆ ಯಾವುದೇ ಆರ್ಥಿಕ ಸಂಪಾದನೆ ಇಲ್ಲದೆ ತೀರಾ ಕಷ್ಟಕರ ಪರಿಸ್ಥಿತಿಯಲ್ಲಿರುವುದನ್ನು ಸರಕಾರ ಚೆನ್ನಾಗಿ ಅರಿತಿದೆ. ಕಾರ್ಮಿಕರು, ರೈತರು ಹಾಗೂ ಮಧ್ಯಮ ವರ್ಗದ ಜನತೆ ಅತ್ಯಂತ ಹೆಚ್ಚಿನ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಇಂತಹ ಸಮಯದಲ್ಲಿ ಕರ್ನಾಟಕ ರಾಜ್ಯ ಸರಕಾರ ಮಾರ್ಚ್ ಏಪ್ರಿಲ್ ಮತ್ತು ಮೇ ತಿಂಗಳುಗಳ ವಿದ್ಯುಚ್ಛಕ್ತಿ ಶುಲ್ಕವನ್ನು ಸಂಪೂರ್ಣ ಮನ್ನಾ ಮಾಡಬೇಕೆಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಸಮಿತಿ ಆಗ್ರಹಿಸುತ್ತದೆ ಲಾಕ್ ಡೌನ್ ತೆರವುಗೊಂಡ ನಂತರವೂ ಜನರ ಆರ್ಥಿಕತೆ ಒಂದು ಹದಕ್ಕೆ ಬರಲು ಸಾಕಷ್ಟು ಸಮಯ ಹಿಡಿಯುವುದರಿಂದ ಯಾವ ಕಾರಣಕ್ಕೂ ಈ ಮೂರು ತಿಂಗಳಿನ ವಿದ್ಯುಚ್ಛಕ್ತಿ ಶುಲ್ಕವನ್ನು ಸರಕಾರ ವಸೂಲಿ ಮಾಡಬಾರದು. ವಸೂಲಿ ಮಾಡಿದರೆ ಅದು ಜನತೆಯ ಮೇಲೆ ಸರಕಾರ ಹೇರುವ ಬಹುದೊಡ್ಡ ಅನ್ಯಾಯವಾಗಿದೆ ಎಂದು ಎಸ್ಡಿಪಿಐ ರಾಜ್ಯಾಧ್ಯಕ್ಷ ಇಲ್ಯಾಸ್ ಮುಹಮ್ಮದ್ ತುಂಬೆ ಸರಕಾರವನ್ನು ಎಚ್ಚರಿಸಿದ್ದಾರೆ.

admin

Recent Posts

ಸ್ವಾತಂತ್ರ್ಯ ಪ್ರಯುಕ್ತ ಸಭಾ ಕಾರ್ಯಕ್ರಮ

INDEPENDENCE DAY CELEBRATION 15.08.2025 | ಮಧ್ಯಾನ : 3:00 | ಡೈಮಂಡ್ ಹಾಲ್ ಹತ್ತಿರ ರೈಲ್ವೆ ಸ್ಟೇಷನ್ ರೋಡ್‌…

3 days ago

ಸ್ವಾತಂತ್ರ್ಯವನ್ನು ರಕ್ಷಿಸೋಣ, ರಾಷ್ಟ್ರವನ್ನು ಉಳಿಸೋಣ

Let's Protect the Freedom, Save the Nation آئیے آزادی کی حفاظت کرین ملک کو بچائیں…

3 days ago

79 Happy Independence Day

Let's Protect The Freedom, Save The Nation "Let us remember the sacrifices that brought us…

3 days ago

79 ಸ್ವಾತಂತ್ರ್ಯ ದಿನಾಚರಣೆಯ ಶುಭಾಶಯಗಳು

"ಸ್ವಾತಂತ್ರ್ಯವನ್ನು ರಕ್ಷಿಸೋಣ, ದೇಶವನ್ನು ಉಳಿಸೋಣ" ಈ ಸ್ವಾತಂತ್ರ್ಯ ದಿನದಂದು, ನಮ್ಮ ಸ್ವಾತಂತ್ರ್ಯ ಹೋರಾಟಗಾರರಿಗೆ ಮತ್ತು ಸತ್ಯವನ್ನು ಮಾತನಾಡಲು ಧೈರ್ಯ ಮಾಡಿದ…

3 days ago