ಸರ್ಕಾರದ ನಿರ್ಲಕ್ಷ್ಯದಿಂದ ಉತ್ತರ ಪ್ರದೇಶದಲ್ಲಿ ಅಪಘಾತದಿಂದ 24 ವಲಸೆ ಕಾರ್ಮಿಕರ ಸಾವು: ಎಸ್‌ಡಿಪಿಐ

ನವದೆಹಲಿ, ೧೭ ಮೇ ೨೦೨೦: ಉತ್ತರ ಪ್ರದೇಶದ ರಾಜಧಾನಿ ಲಕ್ನೋದಿಂದ 209 ಕಿ.ಮೀ ದೂರದಲ್ಲಿರುವ ಔರೈಯಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ೨೪ ವಲಸೆ ಕಾರ್ಮಿಕರು ಸಾವು, ಸರ್ಕಾರದ ನಿರಾಸಕ್ತಿ ಮತ್ತು ನಿರ್ಲಕ್ಷ್ಯದಿಂದಾಗಿ ಉಂಟಾದ ನರಹತ್ಯೆಯಾಗಿದೆ ಎಂದು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಶಾಫಿ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಈ ರೀತಿಯ ಪ್ರಕರಣಗಳಲ್ಲಿ, ಆರೋಪಿಗಳು ಉನ್ನತ ಸರ್ಕಾರಿ ಹುದ್ದೆಗಳಲ್ಲಿ ಆಕ್ರಮಿಸಿಕೊಂಡಿರುವುದರಿಂದ ಅಪರಾಧಿಗಳನ್ನು ಕಾನೂನಿನ ಮುಂದೆ ತರಲಾಗುವುದಿಲ್ಲ. ಈ ಅಪಘಾತವು ಮೋದಿ ಸರ್ಕಾರದ ಯೋಜಿತವಲ್ಲದ ಲಾಕ್‌ಡೌನ್‌ನಿಂದ ಉಂಟಾದ ಮಾನವೀಯ ಬಿಕ್ಕಟ್ಟಿನ ಫಲಿತಾಂಶವಾಗಿದೆ ಎಂದು ಅವರು ಟೀಕಿಸಿದ್ದಾರೆ. ವಲಸೆ ಕಾರ್ಮಿಕರು, ಸಮಾಜದ ಅತ್ಯಂತ ಬಡವರು ಆಡಳಿತಗಾರರ ಈ ಬಲವಂತದ ‘ಡೆತ್-ಮಾರ್ಚ್’ಗೆ ಬಲಿಯಾಗುತ್ತಿದ್ದಾರೆ. ಬಿಸಿಲು, ಹಸಿವು, ಬಾಯಾರಿಕೆ ಮತ್ತು ಬಳಲಿಕೆಯೊಂದಿಗೆ ಸಾವಿರಾರು ಕಿಲೋಮೀಟರ್ ನಡೆದುಕೊಂಡು ಅವರು ತಮ್ಮ ಮನೆಗಳಿಗೆ ಹೋಗುತ್ತಿದ್ದಾರೆ. ಸರಿಯಾದ ಪೂರ್ವ ತಯಾರಿ ಇಲ್ಲದೆ ಘೋಷಿಸಲಾದ ಲಾಕ್‌ಡೌನ್‌ನಿಂದಾಗಿ ಕಾರ್ಮಿಕರು ತಮ್ಮ ಮನೆಗಳಿಗೆ ಹೋಗಲು ಸಾಧ್ಯವಾಗದೆ, ಅವರನ್ನು ಅನಿವಾರ್ಯವಾಗಿ ನಡೆದುಕೊಂಡು ಹೋಗುವಂತೆ ಮಾಡಿ ರಸ್ತೆಗಳು ಮತ್ತು ರೈಲ್ವೆ ಹಳಿಗಳಲ್ಲಿ ಅವರನ್ನು ಕೊಲ್ಲಲಾಗುತ್ತಿದೆ. ಕೇಂದ್ರ ಮತ್ತು ಕೆಲವು ರಾಜ್ಯಗಳ ಸಂವೇದನಾರಹಿತ ಸರ್ಕಾರಗಳು ಈ ಬಡ ಜನರ ಸಾವನ್ನು ಆನಂದಿಸುತ್ತಿವೆ ಎಂದು ಅವರು ಹೇಳಿದ್ದಾರೆ.
ಕೋವಿಡ್ -೧೯ ಸೋಂಕು ಹಿಂದುತ್ವ ಬಲಪಂಥೀಯರ ಬೂಟಾಟಿಕೆಯನ್ನು ಸಂಪೂರ್ಣವಾಗಿ ಬಹಿರಂಗಪಡಿಸಿದೆ. ಬಿಜೆಪಿಯೇತರ ರಾಜ್ಯ ಸರ್ಕಾರಗಳು, ಎನ್‌ಜಿಒಗಳು ಮತ್ತು ಸ್ವಯಂಸೇವಾ ಸಂಸ್ಥೆಗಳು ಈ ಸಂಕಷ್ಟದಲ್ಲಿರುವ ಕಾರ್ಮಿಕರಿಗೆ ಸಹಾಯ ಮಾಡುವಲ್ಲಿ ಮುಂಚೂಣಿಯಲ್ಲಿದ್ದರೆ, ಬಿಜೆಪಿ ಸರ್ಕಾರಗಳು ಕಾರ್ಮಿಕರಿಗೆ ಸಹಾಯ ಮಾಡುವವರನ್ನು ತಪ್ಪಿತಸ್ಥರೆಂದು ಪರಿಗಣಿಸುತ್ತಿವೆ. ಈ ಕಾರ್ಮಿಕರಿಗೆ ಆಹಾರ ಮತ್ತು ಆಶ್ರಯ ನೀಡುವುದನ್ನು ಉತ್ತರ ಪ್ರದೇಶ ಸರ್ಕಾರ ಅಪರಾಧವೆಂದು ಘೋಷಿಸಿದೆ.
ಈ ವಲಸೆ-ಕಾರ್ಮಿಕರ ಬಿಕ್ಕಟ್ಟು ಭಾರತದ ಕೊರೊನಾವೈರಸ್ ಲಾಕ್‌ಡೌನ್‌ಗೆ ಅವಮಾನವಾಗಿದೆ. ೩೦೦ಕ್ಕೂ ಹೆಚ್ಚು ಕಾರ್ಮಿಕರು ಈಗಾಗಲೇ ಸಾವನ್ನಪ್ಪಿದ್ದು, ಅವರ ಸಾವುಗಳು ವೈರಸ್‌ಗೆ ಸಂಬAಧಿಸಿಲ್ಲ. ವಲಸೆ ಕಾರ್ಮಿಕರಿಗೆ ಸರಿಯಾದ ಸಾರಿಗೆ ವ್ಯವಸ್ಥೆ ಒದಗಿಸಿ ಅವರು ತಮ್ಮ ಮನೆಗೆ ಸುರಕ್ಷಿತವಾಗಿ ತಲುಪುವಂತೆ ನೋಡಿಕೊಳ್ಳಲು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂದು ಶಾಫಿ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.

admin

Recent Posts

ಜಿಲ್ಲಾ ಪ್ರತಿನಿಧಿ ಸಭೆDISTRICT REPRESENTATIVE COUNCIL

Hearty Welcome MUJAHID PASHAState General Secretary RIYAZ KADAMBUState Secretary SALEEM AHMEDDistrict President DR. SHAIK TABREZDistrict…

56 minutes ago

WORLD ENVIRONMENT DAY

ವಿಶ್ವ ಪರಿಸರ ದಿನಾಚರಣೆ 05 JUNE ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ! ಇಂದು ನಾವು ನೆಡುವ ಒಂದು ಸಣ್ಣಗಿಡ, ನಾಳಿನ…

1 day ago

SDPI ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ಸದಸ್ಯರು, ಪುತ್ತೂರಿನ ಹಿರಿಯ ಉದ್ಯಮಿ, ಸಮಾಜಸೇವಕರು ಹಾಗೂ ವಿವಿಧ ಧಾರ್ಮಿಕ ಮತ್ತು ಸಾಮಾಜಿಕ ಸಂಘಟನೆಗಳಲ್ಲಿ ಮಹತ್ವದ ಜವಾಬ್ದಾರಿಗಳನ್ನು ನಿರ್ವಹಿಸಿದ್ದ ಸಾಗರ್ ಇಬ್ರಾಹಿಂ ಹಾಜಿ ಅವರ ನಿಧನದ ಸುದ್ದಿ ಅತ್ಯಂತ ದುಃಖವನ್ನುಂಟು ಮಾಡಿದೆ.ಅವರು ಸಮಾಜದ ಅಭಿವೃದ್ಧಿ, ಧಾರ್ಮಿಕ ಸೇವೆ ಹಾಗೂ ಜನಸಾಮಾನ್ಯರ ಕಲ್ಯಾಣಕ್ಕಾಗಿ ಸಲ್ಲಿಸಿದ ಕೊಡುಗೆಗಳು ಸದಾ ಸ್ಮರಣೀಯವಾಗಿರಲಿವೆ. ಅವರ ಅಗಲಿಕೆಯಿಂದ ಕುಟುಂಬಕ್ಕೆ ಮಾತ್ರವಲ್ಲ, ಪುತ್ತೂರು ಭಾಗದ ಸಮುದಾಯಕ್ಕೂ ಮತ್ತು SDPI ಪಕ್ಷಕ್ಕೂ ತುಂಬಲಾರದ ನಷ್ಟ ಉಂಟಾಗಿದೆ.ಅಲ್ಲಾಹು ತಆಲಾ ಮರ್ಹೂಮ್ ಸಾಗರ್ ಇಬ್ರಾಹಿಂ ಹಾಜಿಯವರ ಸಕಲ ಸತ್ಕರ್ಮಗಳನ್ನು ಸ್ವೀಕರಿಸಿ, ಅವರಿಗೆ ಜನ್ನತುಲ್ ಫಿರ್ದೌಸ್ ಅನುಗ್ರಹಿಸಲಿ. ಅವರ ಕುಟುಂಬಸ್ಥರು, ಬಂಧುಬಳಗ ಮತ್ತು ಅಭಿಮಾನಿಗಳಿಗೆ ಈ ದುಃಖವನ್ನು ಸಹಿಸುವ ಶಕ್ತಿ ಮತ್ತು ತಾಳ್ಮೆಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.

~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು, SDPI ಕರ್ನಾಟಕ SDPIKarnataka #Mangalore

1 day ago

ಜಿಲ್ಲಾ ಪ್ರತಿನಿಧಿ ಸಭೆ

DRC DISTRICT REPRESENTATIVE COUNCIL Heartly Welcome ABDUL HANNANState Vice President MAULANA AKRAMState Secretary ABDUL RAHEEM…

7 days ago

HAPPY Eid Al-Adha

Wishing you a beautiful and blessed Eid. Warm Wishes on Eid ul Adha May the…

1 week ago