ಸರ್ಕಾರಿ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಡುಗೆಯವರು ಹಾಗೂ ಅಡುಗೆ ಸಹಾಯಕಿಯರಿಗೆ ತಕ್ಷಣ ಐದು ತಿಂಗಳ ಗೌರವ ಧನ ನೀಡುವಂತೆ ಆಗ್ರಹಿಸಿ.

ಈ ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಕರ್ನಾಟಕ ರಾಜ್ಯಾದ್ಯಂತ ಇರುವ 54 ಸಾವಿರ ಶಾಲೆಗಳಲ್ಲಿ ಅಕ್ಷರ ದಾಸೋಹ ಯೋಜನೆಯಡಿಯಲ್ಲಿ ಒಟ್ಟು 1.70 ಲಕ್ಷ ಮಂದಿ ಅಡುಗೆಯರು ಹಾಗೂ ಅಡುಗೆ ಸಹಾಯಕಿಯರಾಗಿ ತಮ್ಮ ಕರ್ತವ್ಯ ನಿರ್ವಹಿಸುತ್ತಿರುವುದು ಸರಿಯಷ್ಟೆ. ಹೀಗೆ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿ ವರ್ಗದವರಿಗೆ ಸರ್ಕಾರ ಕಳೆದ ಐದು ತಿಂಗಳಿಂದ ಗೌರವ ಧನ ನೀಡದೆ ಇರುವುದು ಅತ್ಯಂತ ಖೇದಕರ. ಈಗಾಗಲೇ ಲಾಕ್ ಡೌನ್ ನಿಂದಾಗಿ ಇತರೆ ಬೇರೆ ಕೆಲಸ ಸಹ ಸಿಗದೆ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಅಡುಗೆ ಸಿಬ್ಬಂದಿ ವರ್ಗದವರಿಗೆ ಸರ್ಕಾರ ಸಹ ಗೌರವ ಧನ ನೀಡದೆ ಇರುವುದರಿಂದ ಅವರ ಜೀವನ ಅಸ್ತವ್ಯಸ್ತವಾಗಿದೆ.

ಪ್ರಸ್ತುತ ಸರ್ಕಾರಿ ಶಾಲೆಗಳಲ್ಲಿ ಡಿ. ಗ್ರೂಪ್ ನೌಕರರ ಸಂಖ್ಯೆ ಕಡಿಮೆ ಇದ್ದು, ಕೆಲವು ಶಾಲೆಗಳಲ್ಲಿ ಡಿ. ಗ್ರೂಪ್ ನೌಕರರು ಇಲ್ಲ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಅಡುಗೆಯವರು ಹಾಗೂ ಅಡುಗೆ ಸಹಾಯಕಿಯರಿಗೆ ತಮ್ಮ ಅಡುಗೆ ಕೆಲಸದ ಜೊತೆ ಜೊತೆಯಲ್ಲೇ ಶಾಲೆಯ ಸ್ವಚ್ಛತೆ ಮತ್ತು ಇತರೆ ಕೆಲಸ ಸಹ ಮಾಡುತ್ತಿರುವುದು ಸರ್ವೇ ಸಾಮಾನ್ಯವಾಗಿದೆ. ಹೀಗೆ ಶಾಲೆಗಳಲ್ಲಿ ಪ್ರಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವ ಅಡುಗೆ ಸಿಬ್ಬಂದಿ ವರ್ಗದವರಿಗೆ ಸರ್ಕಾರ ಅವರ ಸೇವೆಗೆ ತಕ್ಕ ಪ್ರತಿಫಲ ನೀಡ ಬೇಕಾಗಿರುವುದರಿಂದ ಈ ಕೂಡಲೇ ಕಳೆದ ಐದು ತಿಂಗಳ ಗೌರವ ಧನವನ್ನು ಏಕಕಾಲಕ್ಕೆ ಪಾವತಿಸಿಸ ಬೇಕು ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಜಿಲ್ಲಾ ಸಮಿತಿ ಆಗ್ರಹಿಸುತ್ತದೆ.

admin

Recent Posts

ಎಂಸಿಸಿ ಚುನಾವಣಾ ಸಂಬಂಧಿಸಿ SDPI ಮೈಸೂರು ಜಿಲ್ಲಾ ನಾಯಕರೊಂದಿಗೆ ಚುನಾವಣೆ ಪೂರ್ವ ತಯಾರಿ ಸಭೆ

ಮೈಸೂರು, ಜುಲೈ 12: ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಮೈಸೂರು ಜಿಲ್ಲಾ ಕಾರ್ಯದರ್ಶಿ ಮಂಡಳಿ ಹಾಗೂ ವಿಧಾನಸಭಾ…

13 hours ago

ಬಾಗಲಕೋಟೆ ಜಿಲ್ಲೆಯ ಮುಧೋಳ ನಗರಕ್ಕೆ SDPI ಕರ್ನಾಟಕ ಮುಖಂಡರ ಭೇಟಿ

ಬಾಗಲಕೋಟೆ ಜಿಲ್ಲೆ ಮುಧೋಳ ನಗರಕ್ಕೆ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್‌ ಮೈಸೂರು, ರಾಜ್ಯ ಪ್ರಧಾನ ಕಾರ್ಯದರ್ಶಿ ಮುಜಾಹಿದ್ ಪಾಷಾ, ರಾಜ್ಯ ಕಾರ್ಯದರ್ಶಿಗಳಾದ…

2 days ago

ನ್ಯಾಯವ್ಯವಸ್ಥೆಯ ಮೇಲೆ ಆಕ್ರಮಣ: ಎಸ್‌ಜಿ ತುಷಾರ್ ಮೆಹ್ತಾ ಅವರ ಹೇಳಿಕೆಗೆ ಬಿಎಂ ಕಾಂಬ್ಳೆ ಖಡಕ್ ಪ್ರತಿಕ್ರಿಯೆ

2025ರ ಜುಲೈ 9ರಂದು 2020ರ ದೆಹಲಿ ಹಿಂಸಾಚಾರದ "ವಿಸ್ತೃತ ಸೂತ್ರಧಾರೆ" ಪ್ರಕರಣದ ವಿಚಾರಣೆಯಲ್ಲಿ, ದೆಹಲಿ ಹೈಕೋರ್ಟ್‌ ಎದುರು ಕೇಂದ್ರ ಸರಕಾರದ…

2 days ago

ಪತ್ರಿಕಾ ವರದಿ (Newspaper Coverage):

ಪತ್ರಿಕಾ ವರದಿ (Newspaper Coverage): ಗಂಗಾವತಿ, ಜುಲೈ 8:ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಪಕ್ಷದ ಜಿಲ್ಲಾಸಮಿತಿಯ ವಿಶೇಷ…

4 days ago