ಸರ್ಕಾರಿ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಡುಗೆಯವರು ಹಾಗೂ ಅಡುಗೆ ಸಹಾಯಕಿಯರಿಗೆ ತಕ್ಷಣ ಐದು ತಿಂಗಳ ಗೌರವ ಧನ ನೀಡುವಂತೆ ಆಗ್ರಹಿಸಿ.

ಈ ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಕರ್ನಾಟಕ ರಾಜ್ಯಾದ್ಯಂತ ಇರುವ 54 ಸಾವಿರ ಶಾಲೆಗಳಲ್ಲಿ ಅಕ್ಷರ ದಾಸೋಹ ಯೋಜನೆಯಡಿಯಲ್ಲಿ ಒಟ್ಟು 1.70 ಲಕ್ಷ ಮಂದಿ ಅಡುಗೆಯರು ಹಾಗೂ ಅಡುಗೆ ಸಹಾಯಕಿಯರಾಗಿ ತಮ್ಮ ಕರ್ತವ್ಯ ನಿರ್ವಹಿಸುತ್ತಿರುವುದು ಸರಿಯಷ್ಟೆ. ಹೀಗೆ ಸೇವೆ ಸಲ್ಲಿಸುತ್ತಿರುವ ಸಿಬ್ಬಂದಿ ವರ್ಗದವರಿಗೆ ಸರ್ಕಾರ ಕಳೆದ ಐದು ತಿಂಗಳಿಂದ ಗೌರವ ಧನ ನೀಡದೆ ಇರುವುದು ಅತ್ಯಂತ ಖೇದಕರ. ಈಗಾಗಲೇ ಲಾಕ್ ಡೌನ್ ನಿಂದಾಗಿ ಇತರೆ ಬೇರೆ ಕೆಲಸ ಸಹ ಸಿಗದೆ ತೀವ್ರ ಸಂಕಷ್ಟಕ್ಕೆ ಸಿಲುಕಿರುವ ಅಡುಗೆ ಸಿಬ್ಬಂದಿ ವರ್ಗದವರಿಗೆ ಸರ್ಕಾರ ಸಹ ಗೌರವ ಧನ ನೀಡದೆ ಇರುವುದರಿಂದ ಅವರ ಜೀವನ ಅಸ್ತವ್ಯಸ್ತವಾಗಿದೆ.

ಪ್ರಸ್ತುತ ಸರ್ಕಾರಿ ಶಾಲೆಗಳಲ್ಲಿ ಡಿ. ಗ್ರೂಪ್ ನೌಕರರ ಸಂಖ್ಯೆ ಕಡಿಮೆ ಇದ್ದು, ಕೆಲವು ಶಾಲೆಗಳಲ್ಲಿ ಡಿ. ಗ್ರೂಪ್ ನೌಕರರು ಇಲ್ಲ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಅಡುಗೆಯವರು ಹಾಗೂ ಅಡುಗೆ ಸಹಾಯಕಿಯರಿಗೆ ತಮ್ಮ ಅಡುಗೆ ಕೆಲಸದ ಜೊತೆ ಜೊತೆಯಲ್ಲೇ ಶಾಲೆಯ ಸ್ವಚ್ಛತೆ ಮತ್ತು ಇತರೆ ಕೆಲಸ ಸಹ ಮಾಡುತ್ತಿರುವುದು ಸರ್ವೇ ಸಾಮಾನ್ಯವಾಗಿದೆ. ಹೀಗೆ ಶಾಲೆಗಳಲ್ಲಿ ಪ್ರಮಾಣಿಕವಾಗಿ ಸೇವೆ ಸಲ್ಲಿಸುತ್ತಿರುವ ಅಡುಗೆ ಸಿಬ್ಬಂದಿ ವರ್ಗದವರಿಗೆ ಸರ್ಕಾರ ಅವರ ಸೇವೆಗೆ ತಕ್ಕ ಪ್ರತಿಫಲ ನೀಡ ಬೇಕಾಗಿರುವುದರಿಂದ ಈ ಕೂಡಲೇ ಕಳೆದ ಐದು ತಿಂಗಳ ಗೌರವ ಧನವನ್ನು ಏಕಕಾಲಕ್ಕೆ ಪಾವತಿಸಿಸ ಬೇಕು ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಜಿಲ್ಲಾ ಸಮಿತಿ ಆಗ್ರಹಿಸುತ್ತದೆ.

admin

Recent Posts

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

6 days ago

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

2 weeks ago

ಸಂತಾಪಗಳು

ಶ್ರೀಮತಿ ಚೆನ್ನಮ್ಮ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ ಎಚ್. ಡಿ. ದೇವೇಗೌಡ ಅವರ ಧರ್ಮಪತ್ನಿ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ…

2 weeks ago

Condolences

Smt. Chennamma Ji wife of former Prime Minister Shri H.D. Deve Gowda Ji. Deeply pained…

2 weeks ago