ವೃದಾಪ್ಯ, ವಿಧವೆ, ಅಂಗವಿಕಲ ವೇತನ, ಮನಸ್ವಿನಿ, ಮೈತ್ರಿ, ಸಂಧ್ಯಾ ಸುರಕ್ಷ ಹೀಗೆ ಅನೇಕ ಯೋಜನೆಯಡಿಯಲ್ಲಿ ಆರ್ಥಿಕ ಸಹಾಯ ಪಡೆಯುತ್ತಿರುವ ಪಿಂಚಣಿದಾರರಿಗೆ ಕಳೆದ 7-8 ತಿಂಗಳಿಂದ ಪಿಂಚಣಿ ಹಣ ಸಂದಾಯವಾಗಿಲ್ಲದ ಕಾರಣ ಪಿಂಚಣಿದಾರರ ಜೀವನ ಅಸ್ತವ್ಯಸ್ತವಾಗಿದೆ. ಒಂದು ಮಾಹಿತಿ ಪ್ರಕಾರ ರಾಜ್ಯದಲ್ಲಿ ಸುಮಾರು 3.50 ಲಕ್ಷಕ್ಕೂ ಹೆಚ್ಚು ಪಿಂಚಣಿದಾರರಿಗೆ ಮಾಸಿಕ ಪಿಂಚಣಿ ಸ್ಥಗಿತಗೊಂಡಿದೆ. ಪಿಂಚಣಿ ಪಡೆಯಲು ನಾಡ ಕಛೇರಿ, ತಾಲೂಕು ಕಛೇರಿ, ಸುತ್ತಾಡುವುದು. ಸಂಬಂಧ ಪಟ್ಟ ಅಧಿಕಾರಿಗಳನ್ನು ಗೋಗರೆಯುವುದು ಹೀಗೆ ಪ್ರತಿ ದಿವಸ ಬಡಪಾಯಿ ಪಿಂಚಣಿದಾರರು ಕಛೇರಿಯಿಂದ ಕಛೇರಿಗೆ ಅಲೆದಾಡುವ ಪರಿಸ್ಥಿತಿ ಸರ್ವೆ ಸಾಮಾನ್ಯವಾಗಿದೆ. ಇನ್ನು ಕೆಲವು ಕಡೆ ತಂತ್ರಾಂಶ ಅಪ್ ಡೇಟ್ ಆಗದೆ ದೂರ ದೂರದಿಂದ ಬಂದಂತಹ ಪಿಂಚಣಿದಾರರ ಕೆಲಸವೂ ಕಛೇರಿಗಳಲ್ಲಿ ಆಗದೆ ಬಹಳ ನಿರಾಶೆದೊಂದಿಗೆ ತಾಲೂಕು ಕೇಂದ್ರದಿಂದ ತಮ್ಮ ಹಳ್ಳಿಗಳಿಗೆ ಹೋಗಲು ಸಾರಿಗೆ ವೆಚ್ಚ ಭರಿಸಲು ಸಾಲ ಮಾಡಿದ್ದು, ಪ್ರಸ್ತುತ ಪಿಂಚಣಿದಾರರು ಸಾಲಗಾರರಾಗಿ ಪರಿವರ್ತನೆಯಾಗಿದ್ದಾರೆ. ಪಿಂಚಣಿ ಹಣ ದೊರಕದೆ ಪಿಂಚಣಿದಾರರು ತಮ್ಮ ಜೀವನ ನಡೆಸುವುದು ಅಸಾಧ್ಯ ಎಂಬ ವಿಷಯ ಕಹಿಸತ್ಯವಾಗಿದೆ. ಈ ಸಮಸ್ಯೆಯನ್ನು ಸರ್ಕಾರ ಗಂಭೀರವಾಗಿ ಪರಿಗಣಿಸ ಬೇಕು. ಇದರ ಜೊತೆ ಜೊತೆಯಲ್ಲೇ ಈಗಾಗಲೇ ಪಿಂಚಣಿ ಪಾವತಿಸುವ ಕುರಿತು ಸರ್ಕಾರ ಆದೇಶ ಪತ್ರ ನೀಡಿ 2-3 ವರ್ಷ ಆಗಿದ್ದರು ಸಹ ಒಂದು ಬಾರಿಯೂ ಪಿಂಚಣಿ ನೀಡದಿರುವ ಪ್ರಕರಣಗಳು ಸಹ ವಿವಿಧ ಜಿಲ್ಲೆಗಳಲ್ಲಿ ಕಂಡು ಬಂದಿವೆ. ಹಾಗಾಗಿ ಪಿಂಚಣಿಗೆ ಸಂಬಂಧಿಸಿದ ಎರಡು ಸಮಸ್ಯೆಗೆ ಸರ್ಕಾರ ತಕ್ಷಣ ಸ್ಪಂದಿಸುತ್ತ, ಬಾಕಿ ಇರುವ ಪಿಂಚಣಿ ಹಣ ನೀಡುವ ಜೊತೆಯಲ್ಲೇ ನೂತನವಾಗಿ ಪಿಂಚಣಿ ಆದೇಶ ಪತ್ರ ನೀಡಿರುವ ಪಲಾನುಭವಿಗಳಿಗೂ ಯಾವಾಗ ಆದೇಶ ಪತ್ರ ನೀಡಿದ್ದಾರೆ ಅಲ್ಲಿಂದ ಇಲ್ಲಿಯವರೆಗೂ ಏಕಕಾಲಕ್ಕೆ ಒಂದೇ ಕಂತಿನಲ್ಲಿ ಹಣ ನೀಡ ಬೇಕಾಗಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ರಾಜ್ಯಾಧ್ಯಕ್ಷರಾದ ಇಲ್ಯಜ್ ಮಹಮ್ಮದ್ ತುಂಬೆ ರವರು ಆಗ್ರಹಿಸಿದ್ದಾರೆ.
میں شامل ہوں SDPI 10 ΜΑΥ 2026 ΤΟ 25 MAY 2026 ممبر شپ کیمپین SDPIKarnataka…
10 ΜΑΥ 2026 ΤΟ 25 MAY 2026 MEMBERSHIP CAMPAIGN Social Democratic Party of India -Karnataka…
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು, ಹಣದ ಬಲ ಮತ್ತು ರಾಜ್ಯ ಯಂತ್ರಾಂಗದ ಬಹಿರಂಗ ದುರುಪಯೋಗದ ಮೂಲಕ ಪಡೆದ…
ಹುತಾತ್ಮ ದಿನ 04 ಮೇ "ನೂರು ವರ್ಷ ನರಿಯಾಗಿ ಬದುಕುವುದಕ್ಕಿಂತ ಒಂದು ದಿನ ಹುಲಿಯಾಗಿ ಬದುಕುವುದು ಉತ್ತಮ." ~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು…
ಕೇಂದ್ರ ಸರ್ಕಾರದ ನಿರಂತರ ಬೆಲೆ ಏರಿಕೆ ನೀತಿಯಿಂದ ಸಾಮಾನ್ಯ ಜನರು, ವಿಶೇಷವಾಗಿ ಬಡವರು ಮತ್ತು ಮಧ್ಯಮ ವರ್ಗದವರು ತೀವ್ರ ಸಂಕಷ್ಟಕ್ಕೆ…
-7 ಜನರು ಮೃತಪಟ್ಟಿದ್ದಾರೆ – ಇವರಲ್ಲಿ 2 ಮಕ್ಕಳು ಸೇರಿದ್ದಾರೆ! ಹಳೆಯದು, ಬಿರುಕು ಬಿದ್ದ ಗೋಡೆ ಕುಸಿದು ಬಡ ಮತ್ತು…