ಕ್ರಿಮಿನಲ್ಗಳನ್ನು ಬೆಂಬಲಿಸುವ ರಾಜ್ಯ ಬಿಜೆಪಿ ಸರಕಾರ ಎಸ್.ಡಿ.ಪಿ.ಐ

ರಾಜ್ಯದ ಬಿಜೆಪಿ ಸರಕಾರ 62 ಕ್ರಿಮಿನಲ್ ಕೇಸುಗಳನ್ನು ಹಿಂಪಡೆಯಲು ನಿರ್ಧರಿಸಿದೆ. ಬಿಜೆಪಿಯ ಸಂಸದರು ಹಾಗೂ ಶಾಸಕರು ಮಾಡಿದ ಗುರುತರವಾದ ಕ್ರಿಮಿನಲ್ ಕೃತ್ಯ ಪ್ರಕರಣಗಳು ಇವುಗಳಲ್ಲಿ ಸೇರಿವೆ. ಸಂಸದ ಪ್ರತಾಪಸಿಂಹ, ಶಾಸಕರಾದ ರೇಣುಕಾಚಾರ್ಯ ಹಾಗೂ ಬಿ ಸಿ ಪಾಟೀಲರ ಬೆಂಬಲಿಗರ ಕ್ರಿಮಿನಲ್ ಕೃತ್ಯಗಳನ್ನು ಒಳಗೊಂಡಂತೆ ಕೇಸುಗಳನ್ನು ರದ್ದುಗೊಳಿಸಲು ತನ್ನ ಸಂಪುಟ ಸಭೆಯಲ್ಲಿ ನಿರ್ಧರಿಸುವ ಮೂಲಕ ಕ್ರಿಮಿನಲ್ ಹಾಗೂ ಕೋಮುಗಲಭೆಯ ಕಿಡಿಗೇಡಿಗಳನ್ನು ರಕ್ಷಿಸುತ್ತಿದೆ. ಇಂತಹ ಸರಕಾರದಿಂದ ರಾಜ್ಯದಲ್ಲಿ ಶಾಂತಿ ಹಾಗೂ ಕಾನೂನು ಸುವ್ಯವಸ್ಥೆ ನೆಲೆಸುವುದು ಹೇಗೆ ಸಾಧ್ಯ? ಕುರಿಗಳ ವೇಷದಲ್ಲಿ ತೋಳಗಳು ರಾಜ್ಯವನ್ನು ಆಳಿದಂತಾಗಿದೆ ಎಂದು ಎಸ್.ಡಿ.ಪಿ.ಐ ರಾಜ್ಯಧ್ಯಕ್ಷ ಇಲ್ಯಾಸ್ ಮಹಮ್ಮದ್ ತುಂಬೆ ಪ್ರತಿಕ್ರಿಯಿಸಿದ್ದಾರೆ.

ಕೆಲವು ದಿನಗಳ ಹಿಂದೆ ರಾಜ್ಯದ ಗೃಹಮಂತ್ರಿ ಬಸವರಾಜ ಬೊಮ್ಮಾಯಿ ಯವರು ಬಜರಂಗದಳದ ಮುಖಂಡನೊಬ್ಬನೊಡನೆ “ನಿನ್ನ ಯಾವುದೇ ಕೇಸುಗಳನ್ನು ತೆಗೆದು ಹಾಕುತ್ತೇನೆ” ಎಂದಿರುವುದನ್ನು ಇಡೀ ರಾಜ್ಯದ ಜನತೆ ನೋಡಿದೆ. ಈ ಹಿಂದೆಯೂ ಬಿಜೆಪಿ ಸರಕಾರ ಅತ್ಯಂತ ಗಂಭೀರ ಕ್ರಿಮಿನಲ್ ಕೇಸುಗಳನ್ನು ರದ್ದುಗೊಳಿಸಿದೆ. ಕಾರವಾರದಲ್ಲಿ ಐಜಿಪಿ ಅವರ ಕಾರಿಗೆ ಬೆಂಕಿ ಹಚ್ಚಿದ ಘಟನೆ ಹಾಗೂ ಐಜಿಪಿ ಕಾರ್ ಚಾಲಕನಿಗೆ ಅವರ ಎದುರಲ್ಲೇ ಥಳಿಸಿದ ಘಟನೆಯ ಸಂಘಪರಿವಾರದ ಆರೋಪಿಗಳ ಕೇಸುಗಳನ್ನು ಬಿಜೆಪಿ ಸರಕಾರ ವಾಪಸ್ ಪಡೆದುಕೊಂಡಿತ್ತು. ದ್ವೇಷ ರಾಜಕಾರಣ, ಕೋಮುವಿಭಜನೆಯ ಮೂಲಕವೇ ಅಧಿಕಾರಕ್ಕೇರಿದ ಬಿಜೆಪಿ ಅಧಿಕಾರವನ್ನು ಉಳಿಸಲು ಎಂತಹ ನಿಕೃಷ್ಟತೆಗೂ ತಲುಪಲು ಹೇಸದು ಎಂದು ಇದರಿಂದ ಸಾಬೀತಾಗುತ್ತಿದೆ. ಇಂತಹ ಸರಕಾರದ ವಿರುದ್ಧ ರಾಜ್ಯದ ಜನತೆ ಎಚ್ಚೆತ್ತು ಕೊಳ್ಳಬೇಕು ಎಂದು ಇಲ್ಯಾಸ್ ತುಂಬೆ ಕರೆ ನೀಡಿದ್ದಾರೆ.

admin

Recent Posts

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

6 days ago

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

2 weeks ago

ಸಂತಾಪಗಳು

ಶ್ರೀಮತಿ ಚೆನ್ನಮ್ಮ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ ಎಚ್. ಡಿ. ದೇವೇಗೌಡ ಅವರ ಧರ್ಮಪತ್ನಿ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ…

2 weeks ago

Condolences

Smt. Chennamma Ji wife of former Prime Minister Shri H.D. Deve Gowda Ji. Deeply pained…

2 weeks ago