ಬೆಂಗಳೂರು ಡಿಜೆ ಹಳ್ಳಿ ಗಲಭೆಗೆ ಸಂಬಂಧಿಸಿದಂತೆ ಸಿಟಿಜನ್ ಫಾರ್ ಡೆಮಾಕ್ರಸಿ ಎಂಬ ಹೆಸರಿನಿಂದ ಶ್ರೀಕಾಂತ್ ಬಬಲಾಡಿ ನೇತೃತ್ವದಲ್ಲಿ ತಯಾರಿಸಲಾದ ಸತ್ಯಶೋಧನಾ ವರದಿಯು ವಾಸ್ತವ ಅಂಶಗಳನ್ನು ಮರೆಮಾಚಿದ ಪೂರ್ವಗ್ರಹ ಪೀಡಿತವಾಗಿರುವಂಥಹದ್ದು ಆಗಿದೆ. ಪ್ರವಾದಿಯವರನ್ನು ನಿಂದಿಸಿದ ವ್ಯಂಗ್ಯ ಚಿತ್ರ ಹಾಗೂ ಹೀನಾಯವಾದ ಬರಹಗಳನ್ನು ಪೋಸ್ಟ್ ಮಾಡಿದ ನವೀನ್ ಮತ್ತು ಆತನ ಹಿಂದೆ ಇರುವ ಸಂಘಪರಿವಾರದ ದುಷ್ಟ ಶಕ್ತಿಗಳ ಬಗ್ಗೆ ಬೆಳಕು ಚೆಲ್ಲದ ಆ ವರದಿಯು ಅಂತಹ ಶಕ್ತಿಗಳ ಹುನ್ನಾರವನ್ನು ಮುಚ್ಚಿಡುವ ಪ್ರಯತ್ನವಾಗಿದೆ ಎಂದು ಎಸ್ಡಿಪಿಐಯ ರಾಜ್ಯಾಧ್ಯಕ್ಷ ಇಲ್ಯಾಸ್ ಮುಹಮ್ಮದ್ ತುಂಬೆ ಪ್ರತಿಕ್ರಿಯಿಸಿದ್ದಾರೆ
ಸತ್ಯಶೋಧನಾ ತಂಡದಲ್ಲಿದ್ದ ಸದಸ್ಯರೆಲ್ಲರೂ ಬಿಜೆಪಿ ಮತ್ತು ಸಂಘ ಪರಿವಾರದ ಹಿನ್ನಲೆಯವರಾಗಿದ್ದು ಖಂಡಿತವಾಗಿಯೂ ಅವರಿಂದ ಸತ್ಯವನ್ನು ನಿರೀಕ್ಷಿಸಲು ಸಾಧ್ಯವಿಲ್ಲ. ಸರಕಾರದ ಶೋಚನೀಯ ವೈಫಲ್ಯ ಮತ್ತು ಪೊಲೀಸ್ ನಿಷ್ಕ್ರಿಯತೆಯ ಬಗ್ಗೆಯೂ ವರದಿ ಬೆಳಕು ಚೆಲ್ಲದೆ ಘಟನೆಯಲ್ಲಿ ಎಸ್ಡಿಪಿಐ ಮತ್ತು ಪಿಎಫ್ಐ ಹೆಸರನ್ನು ಎಳೆದು ತಂದಿರುವುದು ಹಾಸ್ಯಾಸ್ಪದವಾಗಿದೆ. ಗಲಭೆಯ ದಿನ ಆಕ್ರೋಶಿತ ಜನರನ್ನು ಸಮಾಧಾನ ಪಡಿಸಲು ಪೊಲೀಸರೊಂದಿಗೆ ಸೇರಿ ನಿರಂತರವಾಗಿ ಶ್ರಮಿಸಿದ ಸ್ಥಳೀಯ ಎಸ್ಡಿಪಿಐ ನಾಯಕರನ್ನು ಬಿಜೆಪಿ ಸರಕಾರದ ಕುಮ್ಮಕ್ಕಿನಿಂದಲೇ ಪ್ರಕರಣದಲ್ಲಿ ಸಿಲುಕಿಸಿರುವುದನ್ನು ರಾಜ್ಯದ ಜನತೆ ಅರಿತುಕೊಂಡಿದ್ದಾರೆ. ಆತ್ಮಸಾಕ್ಷಿಯನ್ನು ಅಡವಿಟ್ಟು ಸುಳ್ಳನ್ನು ಉಣಬಡಿಸುವ ಇಂತಹ ವರದಿಗಳು ರಾಜ್ಯ ಹಾಗೂ ಜನತೆಯ ಹಿತಾಸಕ್ತಿಗೆ ಮಾರಕ ಎಂದು ಇಲಿಯಾಸ್ ಮಹಮ್ಮದ್ ತುಂಬೆ ಎಚ್ಚರಿಸಿದ್ದಾರೆ.
ಕರ್ನಾಟಕ ಸ್ವಾಭಿಮಾನಿ ಮುಸ್ಲಿಮರ ವೇದಿಕೆಯ ವತಿಯಿಂದ ಬೆಂಗಳೂರಿನ Agricultural Institution ಸಭಾಂಗಣದಲ್ಲಿ ಅತ್ಯಂತ ಶಿಸ್ತಿನ, ಬಲಿಷ್ಠ ಹಾಗೂ ಗೌರವಯುತ ವೇದಿಕೆಯಡಿ…
ಲೀಡರ್ಸ್ ಕಾನ್ಕ್ಲೇವ್ 28 APRIL 2026 ಇಂಡಿಯಾನ ಕನ್ವೆನ್ಷನ್ ಸೆಂಟರ್ ಮಂಗಳೂರು ಸಂಜೆ 4.00 ಗಂಟೆಗೆ SDPIKatnataka #LeadersConclave #mangalore
ಈ ಘೋರ ದುರಂತಕ್ಕೆ ಕಾರಣಕರ್ತರಾದ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ SDPI ಒತ್ತಾಯ 2021 ರ ಮೇ 2 ರಂದು ಚಾಮರಾಜನಗರ…
27.04.2026 SDPI NATIONAL PRESIDENT M.K FAIZY SDPIKarnataka #Mangalore #MKFaizy
ಪ್ರಿಯ ವಿದ್ಯಾರ್ಥಿಗಳೇ,ಇಂದಿನ SSLC ಫಲಿತಾಂಶವು ನಿಮ್ಮ ಜೀವನದ ಒಂದು ಹಂತ ಮಾತ್ರ - ಅಂತಿಮ ಗುರಿ ಅಲ್ಲ. ನಿಮ್ಮ ಪರಿಶ್ರಮ…
ಹಾರ್ದಿಕ ಶುಭಾಶಯಗಳು 4. 2026 "ಕಾಯಕವೇ ಕೈಲಾಸ" ಎಂದು ಹೇಳಿದ ಬಸವಣ್ಣನವರ ತತ್ವಗಳು ಇಂದಿಗೂ ನಮ್ಮ ಸಮಾಜಕ್ಕೆ ದಾರಿದೀಪ. ಜಾತಿ,…