ನ್ಯಾಯಾಲಯದಲ್ಲಿ ನಿರ್ದೋಷಿಗಳೆಂದು ಸಾಬೀತಾಗುವ ವಿಶ್ವಾಸವಿದೆ. ಎಸ್.ಡಿ.ಪಿ.ಐ ಮುಖಂಡ ಮುಝಮ್ಮಿಲ್ ಪಾಷ.

ಬೆಂಗಳೂರು ಜೂನ್ 24 : ಬೆಂಗಳೂರಿನ ಡಿಜೆ ಹಳ್ಳಿ- ಕೆಜಿ ಹಳ್ಳಿಯಲ್ಲಿ ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ಹಿಂಸಾಚಾರ ನಡೆದಿತು. ಪ್ರವಾದಿ ಮೊಹಮ್ಮದ್ (ಸ.ಅ) ಬಗ್ಗೆ ಆಕ್ಷೇಪಾರ್ಹ ಪೋಸ್ಟನ್ನು ಬಿಜೆಪಿ ಬೆಂಬಲಿಗ ನವೀನ್ ಎಂಬಾತ ಹಾಕಿದ್ದ. ಇದರ ವಿರುದ್ಧ ಮುಸ್ಲಿಂ ಸಮುದಾಯ ಪೊಲೀಸ್ ಠಾಣೆಯಲ್ಲಿ ಜಮಾವಣೆಗೊಂಡು ನವೀನನನ್ನು ಬಂಧಿಸಲು ಆಗ್ರಹಿಸಿದ್ದರು. ಈ ಸಂದರ್ಭದಲ್ಲಿ ಹಿಂಸಾಚಾರ ನಡೆದು ಪೊಲೀಸ್ ಗೋಲಿಬಾರಿನಲ್ಲಿ 3 ಮುಸ್ಲಿಂ ಜೀವ ಹಾನಿಯಾಗಿತ್ತುಈ ಸಂದರ್ಭದಲ್ಲಿ ನಾನೂರಕ್ಕೂ ಹೆಚ್ಚು ಮುಸ್ಲಿಮರನ್ನು ಬಂಧಿಸಲಾಗಿತ್ತು. ಅವರಲ್ಲಿ ಬಹುತೇಕರು ಅಮಾಯಕರಾಗಿದ್ದರು. ಕಳೆದ ಮೂರು ತಿಂಗಳುಗಳಿಂದ ನೂರಾರು ಜನ ಬಿಡುಗಡೆ ಹೊಂದುತ್ತಿದ್ದಾರೆ. ಈ ಪೈಕಿ ಎಸ್ಡಿಪಿಐ ಪಕ್ಷದ 8-10 ಕಾರ್ಯಕರ್ತರನ್ನು ಬಂಧಿಸಲಾಗಿತ್ತು ಅವರಲ್ಲಿ ನಿನ್ನೆ ಪಕ್ಷದ ಬೆಂಗಳೂರು ಕಾರ್ಯದರ್ಶಿ ಮುಝಮ್ಮಿಲ್ ಪಾಷಾ ಮತ್ತಿತರರು ಜಾಮೀನಿನಲ್ಲಿ ಬಿಡುಗಡೆ ಹೊಂದಿರುತ್ತಾರೆ. ಅವರು ಇಂದು ಪತ್ರಿಕಾಗೋಷ್ಟಿ ನಡೆಸಿ ಪ್ರಕರಣದ ಸಂಪೂರ್ಣ ಸತ್ಯಾಂಶವನ್ನು ಮಾದ್ಯಮದ ಮುಂದೆ ಹೇಳಿದರು. ಬಿಜೆಪಿ ಮಂತ್ರಿಗಳ ಒತ್ತಡದಿಂದ ನೂರಾರು ಅಮಾಯಕ ಮುಸ್ಲಿಮರನ್ನು ಬಂಧಿಸಿ ಕೇಸು ಜಡಿಯಲಾಗಿತ್ತು. ನಮಗೆ ನ್ಯಾಯಾಂಗದ ಮೇಲೆ ಸಂಪೂರ್ಣ ಭರವಸೆ ಇತ್ತು ತನಿಖೆಗೆ ಎಲ್ಲಾ ರೀತಿಯ ಸಹಕಾರ ನೀಡಿದೆವು. ಮುಂದೆ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ನಿರಪರಾಧಿಗಳು ಎಂದು ಸಾಬೀತಾಗುವ ಎಲ್ಲಾ ಭರವಸೆ ಇದೆ ಎಂದು ಮುಝಮ್ಮಿಲ್ ಪಾಷಾ ತಿಳಿಸಿದರು.ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಉಪಾಧ್ಯಕ್ಷರಾದ ಅಡ್ವೋಕೇಟ್ ಮಜೀದ್ ಖಾನ್, ಬೆಂಗಳೂರು ಜಿಲ್ಲಾಧ್ಯಕ್ಷರಾದ ಫಯಾಝ್ ಅಹಮದ್, ಜಾಮೀನಿನಲ್ಲಿ ನಿನ್ನೆ ಬಿಡುಗಡೆಗೊಂಡ ಎಸ್ಡಿಪಿಐ ಕಾರ್ಯಕರ್ತರಾದ ಸೈಯದ್ ಅಯಾಝ್ ಮತ್ತು ಸೈಯದ್ ಮಸೂದ್ ಉಪಸ್ಥಿತರಿದ್ದರು

admin

Recent Posts

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

2 days ago

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

7 days ago

ಸಂತಾಪಗಳು

ಶ್ರೀಮತಿ ಚೆನ್ನಮ್ಮ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ ಎಚ್. ಡಿ. ದೇವೇಗೌಡ ಅವರ ಧರ್ಮಪತ್ನಿ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ…

1 week ago

Condolences

Smt. Chennamma Ji wife of former Prime Minister Shri H.D. Deve Gowda Ji. Deeply pained…

1 week ago