ನ್ಯಾಯಾಲಯದಲ್ಲಿ ನಿರ್ದೋಷಿಗಳೆಂದು ಸಾಬೀತಾಗುವ ವಿಶ್ವಾಸವಿದೆ. ಎಸ್.ಡಿ.ಪಿ.ಐ ಮುಖಂಡ ಮುಝಮ್ಮಿಲ್ ಪಾಷ.

ಬೆಂಗಳೂರು ಜೂನ್ 24 : ಬೆಂಗಳೂರಿನ ಡಿಜೆ ಹಳ್ಳಿ- ಕೆಜಿ ಹಳ್ಳಿಯಲ್ಲಿ ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ಹಿಂಸಾಚಾರ ನಡೆದಿತು. ಪ್ರವಾದಿ ಮೊಹಮ್ಮದ್ (ಸ.ಅ) ಬಗ್ಗೆ ಆಕ್ಷೇಪಾರ್ಹ ಪೋಸ್ಟನ್ನು ಬಿಜೆಪಿ ಬೆಂಬಲಿಗ ನವೀನ್ ಎಂಬಾತ ಹಾಕಿದ್ದ. ಇದರ ವಿರುದ್ಧ ಮುಸ್ಲಿಂ ಸಮುದಾಯ ಪೊಲೀಸ್ ಠಾಣೆಯಲ್ಲಿ ಜಮಾವಣೆಗೊಂಡು ನವೀನನನ್ನು ಬಂಧಿಸಲು ಆಗ್ರಹಿಸಿದ್ದರು. ಈ ಸಂದರ್ಭದಲ್ಲಿ ಹಿಂಸಾಚಾರ ನಡೆದು ಪೊಲೀಸ್ ಗೋಲಿಬಾರಿನಲ್ಲಿ 3 ಮುಸ್ಲಿಂ ಜೀವ ಹಾನಿಯಾಗಿತ್ತುಈ ಸಂದರ್ಭದಲ್ಲಿ ನಾನೂರಕ್ಕೂ ಹೆಚ್ಚು ಮುಸ್ಲಿಮರನ್ನು ಬಂಧಿಸಲಾಗಿತ್ತು. ಅವರಲ್ಲಿ ಬಹುತೇಕರು ಅಮಾಯಕರಾಗಿದ್ದರು. ಕಳೆದ ಮೂರು ತಿಂಗಳುಗಳಿಂದ ನೂರಾರು ಜನ ಬಿಡುಗಡೆ ಹೊಂದುತ್ತಿದ್ದಾರೆ. ಈ ಪೈಕಿ ಎಸ್ಡಿಪಿಐ ಪಕ್ಷದ 8-10 ಕಾರ್ಯಕರ್ತರನ್ನು ಬಂಧಿಸಲಾಗಿತ್ತು ಅವರಲ್ಲಿ ನಿನ್ನೆ ಪಕ್ಷದ ಬೆಂಗಳೂರು ಕಾರ್ಯದರ್ಶಿ ಮುಝಮ್ಮಿಲ್ ಪಾಷಾ ಮತ್ತಿತರರು ಜಾಮೀನಿನಲ್ಲಿ ಬಿಡುಗಡೆ ಹೊಂದಿರುತ್ತಾರೆ. ಅವರು ಇಂದು ಪತ್ರಿಕಾಗೋಷ್ಟಿ ನಡೆಸಿ ಪ್ರಕರಣದ ಸಂಪೂರ್ಣ ಸತ್ಯಾಂಶವನ್ನು ಮಾದ್ಯಮದ ಮುಂದೆ ಹೇಳಿದರು. ಬಿಜೆಪಿ ಮಂತ್ರಿಗಳ ಒತ್ತಡದಿಂದ ನೂರಾರು ಅಮಾಯಕ ಮುಸ್ಲಿಮರನ್ನು ಬಂಧಿಸಿ ಕೇಸು ಜಡಿಯಲಾಗಿತ್ತು. ನಮಗೆ ನ್ಯಾಯಾಂಗದ ಮೇಲೆ ಸಂಪೂರ್ಣ ಭರವಸೆ ಇತ್ತು ತನಿಖೆಗೆ ಎಲ್ಲಾ ರೀತಿಯ ಸಹಕಾರ ನೀಡಿದೆವು. ಮುಂದೆ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ನಿರಪರಾಧಿಗಳು ಎಂದು ಸಾಬೀತಾಗುವ ಎಲ್ಲಾ ಭರವಸೆ ಇದೆ ಎಂದು ಮುಝಮ್ಮಿಲ್ ಪಾಷಾ ತಿಳಿಸಿದರು.ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಉಪಾಧ್ಯಕ್ಷರಾದ ಅಡ್ವೋಕೇಟ್ ಮಜೀದ್ ಖಾನ್, ಬೆಂಗಳೂರು ಜಿಲ್ಲಾಧ್ಯಕ್ಷರಾದ ಫಯಾಝ್ ಅಹಮದ್, ಜಾಮೀನಿನಲ್ಲಿ ನಿನ್ನೆ ಬಿಡುಗಡೆಗೊಂಡ ಎಸ್ಡಿಪಿಐ ಕಾರ್ಯಕರ್ತರಾದ ಸೈಯದ್ ಅಯಾಝ್ ಮತ್ತು ಸೈಯದ್ ಮಸೂದ್ ಉಪಸ್ಥಿತರಿದ್ದರು

admin

Recent Posts

1) The caste census report prepared under the leadership of Madhusudan Naik should be accepted and made public.

2) Restore the 2B reservation and increase it to 8%. 3) An Equal Opportunities Commission…

10 hours ago

ಚಲೋ ಬೆಂಗಳೂರು

CHALO BENGALURU 19 August 2026 MUTALIBAAT 1) Madhusudan Naik ki qayadat mein taiyar kiye gaye…

10 hours ago

ಚಲೋ ಬೆಂಗಳೂರು

CHALO BENGALURU ಪ್ರಮುಖ ಬೇಡಿಕೆಗಳು 1) ಮಧುಸೂದನ್ ನಾಯಕ್ ನೇತೃತ್ವದ ಜಾತಿ ಜನಗಣತಿ ವರದಿಯನ್ನು ಅಂಗೀಕರಿಸಿ ಸಾರ್ವಜನಿಕಗೊಳಿಸಬೇಕು. 2) 2ಬಿ…

10 hours ago

ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ

ಚಲೋ ಬೆಂಗಳೂರು 19 August 2026 CHALO BENGALURU SDPIKarnataka #ChaloBengaluru

2 days ago

ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ

ಚಲೋ ಬೆಂಗಳೂರು 19 August 2026 CHALO BENGALURU SDPIKarnataka #ChaloBengaluru

3 days ago

“ಸ್ವಾತಂತ್ರ್ಯ ಎಲ್ಲರ ಹಕ್ಕು-ವಿಚಾರಣಾಧೀನರಿಗೂ ಅದೇ ಹಕ್ಕು!”

ಸ್ವಾತಂತ್ರ್ಯವೆಂದರೆ ಕೇವಲ ಧ್ವಜಾರೋಹಣ ಮತ್ತು ಸಂಭ್ರಮವಲ್ಲ. ಅದು ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕು, ಗೌರವ, ನ್ಯಾಯ ಮತ್ತು ಘನತೆಯ ಬದುಕು.…

4 days ago