ಹುಣಸೂರು, ಜು-26-2021: ಹುಣಸೂರು ನಗರಸಭೆ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ವಾರ್ಡ್ ಸಂಖ್ಯೆ 31ರ ಸದಸ್ಯರು ಹಾಗೂ ಎಸ್.ಡಿ.ಪಿ.ಐ ಪಕ್ಷದ ಮೈಸೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಸೈಯದ್ ಯೂನೂಸ್ ರವರು ಇಂದು ಅಧಿಕೃತವಾಗಿ ಅಧಿಕಾರ ವಹಿಸಿ ಕೊಂಡರು. ಅಧಿಕಾರ ವಹಿಸಿ ಮಾತನಾಡಿದ ಯೂನೂಸ್ ಈ ಸ್ಥಾನ ಅತ್ಯಂತ ಜವಾಬ್ದಾರಿಯುತವಾಗಿದೆ. ಈ ಸ್ಥಾನಕ್ಕೆ ಗೌರವ ತರುವ ನಿಟ್ಟಿನಲ್ಲಿ ಜನಪರ ಕೆಲಸ ಮಾಡಲು ನಾನು ಬದ್ದನಾಗಿದ್ದು, ಸಾರ್ವಜನಿಕರು ಯಾವುದೇ ಮುಲಾಜಿಲ್ಲದೇ ನನ್ನನ್ನು ನೇರವಾಗಿ ಬಂದು ಭೇಟಿ ಮಾಡಬಹುದು. ಜನಸಾಮಾನ್ಯರ ಸಮಸ್ಯೆಗಳಿಗೆ ಪರಿಹಾರ ಹಾಗೂ ಸಂವಿಧಾನದ ಆಶಯದಂತೆ ಸಮಾಜದ ಕಟ್ಟಕಡೆಯ ಪ್ರಜೆಗೂ ಸರ್ಕಾರಿ ಸೌಲಭ್ಯ ಕೂಡಿಸುವುದರಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು. ಪದಗ್ರಹಣ ಕಾರ್ಯಕ್ರಮದಲ್ಲಿ ನಗರಸಭೆ ಪೌರಾಯುಕ್ತರಾದ ರಮೇಶ್, ಅಧ್ಯಕ್ಷರಾದ ಶ್ರೀಮತಿ ಅನುಷಾ ರಾಘವೇಂದ್ರ, ಉಪಾಧ್ಯಕ್ಷರಾದ ಚಂದ್ರನಾಯಕ, ಸದಸ್ಯರಾದ ಸಮೀನಾ ಬಾನು ಹಾಗೂ ಇನ್ನಿತರ ನಗರಸಭಾ ಸದಸ್ಯರು, ಮೌಲಾನಾ ಮುಪ್ತಿ ಮುತ್ತಬ್ಬೀರ್ ಸಾಹೇಬ್, ಎಸ್.ಡಿ.ಪಿ.ಐ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಮಜಾಜ್ ಖಾನ್ ಹಾಗೂ ಸಮಾಜದ ಮುಖಂಡರು ಹಾಜರಿದ್ದು ಅಭಿನಂದನೆಗಳನ್ನು ಸಲ್ಲಿಸಿದರು.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು, ಹಣದ ಬಲ ಮತ್ತು ರಾಜ್ಯ ಯಂತ್ರಾಂಗದ ಬಹಿರಂಗ ದುರುಪಯೋಗದ ಮೂಲಕ ಪಡೆದ…
ಹುತಾತ್ಮ ದಿನ 04 ಮೇ "ನೂರು ವರ್ಷ ನರಿಯಾಗಿ ಬದುಕುವುದಕ್ಕಿಂತ ಒಂದು ದಿನ ಹುಲಿಯಾಗಿ ಬದುಕುವುದು ಉತ್ತಮ." ~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು…
ಕೇಂದ್ರ ಸರ್ಕಾರದ ನಿರಂತರ ಬೆಲೆ ಏರಿಕೆ ನೀತಿಯಿಂದ ಸಾಮಾನ್ಯ ಜನರು, ವಿಶೇಷವಾಗಿ ಬಡವರು ಮತ್ತು ಮಧ್ಯಮ ವರ್ಗದವರು ತೀವ್ರ ಸಂಕಷ್ಟಕ್ಕೆ…
-7 ಜನರು ಮೃತಪಟ್ಟಿದ್ದಾರೆ – ಇವರಲ್ಲಿ 2 ಮಕ್ಕಳು ಸೇರಿದ್ದಾರೆ! ಹಳೆಯದು, ಬಿರುಕು ಬಿದ್ದ ಗೋಡೆ ಕುಸಿದು ಬಡ ಮತ್ತು…
01 MAY 2026 "Respect Labour. Restore Dignity. Ensure Justice. This Labour Day, let every worker…