ಹುಣಸೂರು ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಸೈಯದ್ ಯೂನೂಸ್ ಅಧಿಕಾರ ಸ್ವೀಕಾರ.

ಹುಣಸೂರು, ಜು-26-2021: ಹುಣಸೂರು ನಗರಸಭೆ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ವಾರ್ಡ್ ಸಂಖ್ಯೆ 31ರ ಸದಸ್ಯರು ಹಾಗೂ ಎಸ್.ಡಿ.ಪಿ.ಐ ಪಕ್ಷದ ಮೈಸೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಸೈಯದ್ ಯೂನೂಸ್ ರವರು ಇಂದು ಅಧಿಕೃತವಾಗಿ ಅಧಿಕಾರ ವಹಿಸಿ ಕೊಂಡರು. ಅಧಿಕಾರ ವಹಿಸಿ ಮಾತನಾಡಿದ ಯೂನೂಸ್ ಈ ಸ್ಥಾನ ಅತ್ಯಂತ ಜವಾಬ್ದಾರಿಯುತವಾಗಿದೆ. ಈ ಸ್ಥಾನಕ್ಕೆ ಗೌರವ ತರುವ ನಿಟ್ಟಿನಲ್ಲಿ ಜನಪರ ಕೆಲಸ ಮಾಡಲು ನಾನು ಬದ್ದನಾಗಿದ್ದು, ಸಾರ್ವಜನಿಕರು ಯಾವುದೇ ಮುಲಾಜಿಲ್ಲದೇ ನನ್ನನ್ನು ನೇರವಾಗಿ ಬಂದು ಭೇಟಿ ಮಾಡಬಹುದು. ಜನಸಾಮಾನ್ಯರ ಸಮಸ್ಯೆಗಳಿಗೆ ಪರಿಹಾರ ಹಾಗೂ ಸಂವಿಧಾನದ ಆಶಯದಂತೆ ಸಮಾಜದ ಕಟ್ಟಕಡೆಯ ಪ್ರಜೆಗೂ ಸರ್ಕಾರಿ ಸೌಲಭ್ಯ ಕೂಡಿಸುವುದರಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಭರವಸೆ ನೀಡಿದರು. ಪದಗ್ರಹಣ ಕಾರ್ಯಕ್ರಮದಲ್ಲಿ ನಗರಸಭೆ ಪೌರಾಯುಕ್ತರಾದ ರಮೇಶ್, ಅಧ್ಯಕ್ಷರಾದ ಶ್ರೀಮತಿ ಅನುಷಾ ರಾಘವೇಂದ್ರ, ಉಪಾಧ್ಯಕ್ಷರಾದ ಚಂದ್ರನಾಯಕ, ಸದಸ್ಯರಾದ ಸಮೀನಾ ಬಾನು ಹಾಗೂ ಇನ್ನಿತರ ನಗರಸಭಾ ಸದಸ್ಯರು, ಮೌಲಾನಾ ಮುಪ್ತಿ ಮುತ್ತಬ್ಬೀರ್ ಸಾಹೇಬ್, ಎಸ್.ಡಿ.ಪಿ.ಐ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಮಜಾಜ್ ಖಾನ್ ಹಾಗೂ ಸಮಾಜದ ಮುಖಂಡರು ಹಾಜರಿದ್ದು ಅಭಿನಂದನೆಗಳನ್ನು ಸಲ್ಲಿಸಿದರು.

admin

Recent Posts

SRC-ರಾಜ್ಯ ಪ್ರತಿನಿಧಿ ಸಭೆ 2026 ಕರ್ನಾಟಕ

ಗ್ರೀನ್ ಪ್ಯಾಲೆಸ್ ಸಭಾಂಗಣ | ರಾಯಚೂರು । 28 JUNE 2026 ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ…

2 hours ago

ಪರ್ಯಾಯ ರಾಜಕಾರಣದ

ಸಕಾರಾತ್ಮಕ ಹೆಜ್ಜೆ 18 ನೇ ವರ್ಷಕ್ಕೆ SDPI ಸಂಸ್ಥಾಪನಾ ದಿನಾಚರಣೆ SDPI FORMATION DAY SIDDIQ MULKY SWC Member…

2 days ago

ಪರ್ಯಾಯ ರಾಜಕಾರಣದ

ಸಕಾರಾತ್ಮಕ ಹೆಜ್ಜೆ 18 ನೇ ವರ್ಷಕ್ಕೆ SDPI ಸಂಸ್ಥಾಪನಾ ದಿನಾಚರಣೆ SDPI FORMATION DAY FAIROZE ULLA SHAREEF SWC…

2 days ago

ಪರ್ಯಾಯ ರಾಜಕಾರಣದ

ಸಕಾರಾತ್ಮಕ ಹೆಜ್ಜೆ 18 ನೇ ವರ್ಷಕ್ಕೆ SDPI ಸಂಸ್ಥಾಪನಾ ದಿನಾಚರಣೆ SDPI FORMATION DAY MOHAMMED SIDDIQ SWC Member…

2 days ago

SDPI SOCIAL DEMOCRATIC PARTY OF INDIA

SRC-STATE REPRESENTATIVE COUNCIL 2026 KARNATAKA GREEN PALACE | RAICHUR JUNE 28 2026 EXTENDING A WARM…

3 days ago

SDPI ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

SRC-ರಾಜ್ಯ ಪ್ರತಿನಿಧಿ ಸಭೆ 2026 ಕರ್ನಾಟಕ ಗ್ರೀನ್ ಪ್ಯಾಲೆಸ್ ಸಭಾಂಗಣ | ರಾಯಚೂರು । 28 ಜೂನ್ 2026 ಆದರದ…

3 days ago