ಮೇಕೆ ದಾಟು ಯೋಜನೆ ಅನುಮತಿಗೆ ಒಕ್ಕೂಟ ಸರಕಾರಕ್ಕೆ ಒತ್ತಡ ತರಬೇಕು : ಎಸ್.ಡಿ.ಪಿ.ಐ

ಬೆಂಗಳೂರು : ಬೆಂಗಳೂರಿಗೆ ಕುಡಿಯುವ ನೀರು ಸರಬರಾಜಿಗೆ ಅನುಕೂಲವಾಗುವ ಮೇಕೆದಾಟು ಸಮಾನಾಂತರ ಅಣೆಕಟ್ಟು ನಿರ್ಮಿಸಲು ಮೋದಿ ನೇತೃತ್ವದ ಒಕ್ಕೂಟ ಸರಕಾರಕ್ಕೆ ಕನ್ನಡಿಗರು ಒಂದಾಗಿ ಒತ್ತಡ ತರಬೇಕು ಎಂದು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಎಸ್.ಡಿ.ಪಿ.ಐ – ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಆಗ್ರಹಿಸಿದ್ದಾರೆ.

ತಮಿಳುನಾಡಿನ ಎಲ್ಲಾ ರಾಜಕೀಯ ಪಕ್ಷಗಳು ಅವರ ನಾಡಿನ ವಿಷಯದಲ್ಲಿ ಒಂದಾಗಿ ಹೋರಾಟ ಮಾಡುತ್ತದೆ. ಕರ್ನಾಟಕದ ಎಲ್ಲಾ ಪಕ್ಷಗಳೂ ಮೇಕೆದಾಟು ವಿಷಯದಲ್ಲಿ ಗಟ್ಟಿಧ್ವನಿಯಲ್ಲಿ ಒಕ್ಕೂಟ ಸರಕಾರಕ್ಕೆ ಒತ್ತಡ ಹೇರಬೇಕಾಗಿದೆ.
ಈ ಯೋಜನೆಗೆ ಸಂಬಂಧಿಸಿ ಪರಿಸರ ಇಲಾಖೆಯಿಂದ ಅನುಮೋದನೆ ಈಗಾಗಲೇ ದೊರಕಿದ್ದು, ಉಳಿದ ಇಲಾಖೆಗಳ ಅನುಮತಿ ಶೀಘ್ರವೇ ಪಡೆದು ಕಾಮಗಾರಿ ಆರಂಭಿಸಬೇಕೆಂದು ಎಸ್.ಡಿ.ಪಿ.ಐ ರಾಜ್ಯ ಸರಕಾರವನ್ನು ಆಗ್ರಹಿಸುತ್ತದೆ.

admin

Recent Posts

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

4 days ago