ಕೋಮು ಗಲಭೆಗೆ ಪ್ರಚೋದನೆ ನೀಡಿದ ಸಚಿವ ಈಶ್ವರಪ್ಪರನ್ನು ಕೂಡಲೇ ಬಂಧಿಸಬೇಕು: ಎಸ್ಡಿಪಿಐ ಒತ್ತಾಯ
ಬೆಂಗಳೂರು ಆಗಸ್ಟ್ 8: ಶಿವಮೊಗ್ಗ ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಸಚಿವ ಈಶ್ವರಪ್ಪ ನಾಲಿಗೆ ಹರಿಯಬಿಟ್ಟು ಹೊಡಿ-ಬಡಿ-ಕೊಲ್ಲು ಪ್ರಚೋದನಾಕಾರಿ ಹೇಳಿಕೆಗಳನ್ನು ನೀಡಿದ ಈಶ್ವರಪ್ಪರನ್ನು ಕೂಡಲೇ ಬಂಧಿಸಿ ಸಮಾಜದ ಸ್ವಾಸ್ಥ್ಯ ಕಾಪಾಡಬೇಕೆಂದು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಒತ್ತಾಯಿಸಿದೆ.
ಈಶ್ವರಪ್ಪ ಪ್ರಚೋದನಕಾರಿ ಹೇಳಿಕೆಯನ್ನು ನೀಡಿಯೇ ರಾಜಕೀಯ ಬೇಳೆ ಬೇಯಿಸಿಕೊಂಡು ಬಂದವರು. ಇತ್ತೀಚೆಗೆ ಇವರಿಂದ ನಾಡಿನ ಶಾಂತಿ, ಸೌಹಾರ್ದತೆಗೆ ಭಂಗ ತರುವ ಉದ್ರೇಕಕಾರಿ ಹೇಳಿಕೆಗಳು ಹೆಚ್ಚಾಗುತ್ತಿವೆ. ಬಿಜೆಪಿ ಮತ್ತು ಆರೆಸ್ಸೆಸ್ ನಾಯಕರು ತಮ್ಮ ಮಕ್ಕಳನ್ನು ವಿದೇಶಗಳಲ್ಲಿ ಉನ್ನತ ವಿಧ್ಯಾಭ್ಯಾಸಕ್ಕೆ ಕಳಿಸಿಕೊಟ್ಟು ಬಡ ಮತ್ತು ಕೆಳವರ್ಗದ ಕಾರ್ಯಕರ್ತರಿಗೆ ಪ್ರಚೋದನೆ ನೀಡಿ ಸಮಾಜಘಾತುಕ ಕೆಲಸಗಳನ್ನು ಮಾಡಿಸುವುದು ನಿರಂತರವಾಗಿ ನಡೆಯುತ್ತಿದೆ. ಬಡ ಕಾರ್ಯಕರ್ತರು ಪೊಲೀಸು, ಕೋರ್ಟ್, ಕೇಸ್ ಗಾಗಿ ಅಲೆದಾಡುತ್ತಾ ಭವಿಷ್ಯ ಹಾಳು ಮಾಡುತ್ತಿದ್ದಾರೆ. ಪ್ರಜ್ಞಾವಂತ ಯುವಕರು ಈ ಕೋಮುವಾದಿಗಳ ಸುಳ್ಳು ಪ್ರಚಾರಕ್ಕೆ ಬಲಿಯಾಗಬಾರದು. ಸೌಹಾರ್ದ ಮತ್ತು ಜಾತ್ಯಾತೀತ ಸಮಾಜ ಕಟ್ಟಲು ಎಲ್ಲಾ ಸಮುದಾಯದ ಯುವಕರು ಪ್ರಯತ್ನಿಸಬೇಕು.
ಈಶ್ವರಪ್ಪರನ್ನು ಕೂಡಲೇ ಮಂತ್ರಿ ಸ್ಥಾನದಿಂದ ವಜಾಗೊಳಿಸಬೇಕು ಮತ್ತು ಪೊಲೀಸರು ಸ್ವಯಂ ಪ್ರೇರಿತ ಕೇಸು ದಾಖಲಿಸಿ ಬಂಧಿಸಬೇಕೆಂದು ಸೋಶಿಯಲ್ ಡೆಮೊಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ- ಎಸ್ಡಿಪಿಐ ಪಕ್ಷದ ರಾಜ್ಯ ಉಪಾಧ್ಯಕ್ಷರಾದ ಅಡ್ವಕೇಟ್ ಮಜೀದ್ ಖಾನ್ ಆಗ್ರಹಿಸಿದ್ದಾರೆ.
ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…
~ಮಜೀದ್ ತುಂಬೆ,ರಾಜ್ಯ ಪ್ರಧಾನ ಕಾರ್ಯದರ್ಶಿ, SDPI ಕರ್ನಾಟಕ SDPIKarnataka
ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…
~ದೆಹ್ಲಾನ್ ಬಾಖವಿ,ರಾಷ್ಟ್ರೀಯ ಉಪಾಧ್ಯಕ್ಷರು SDPI SDPIKarnataka
Smt. Chennamma Ji wife of former Prime Minister Shri H.D. Deve Gowda Ji. Deeply pained…