ಅನ್ಯಾಯದ ವಿರುದ್ಧ ಹೋರಾಡುತ್ತಲೇ ಕೊನೆಯುಸಿರೆಳೆದ ಚಾಮರಾಜನಗರ ನಗರಸಭಾ ಸದಸ್ಯ ಹಾಗೂ ಎಸ್ಡಿಪಿಐ ಮುಖಂಡ ಸೈಯದ್ ಸಮೀವುಲ್ಲಾ: ಅಬ್ದುಲ್ ಹನ್ನಾನ್ ಸಂತಾಪ

ಚಾಮರಾಜನಗರ, 01 ಸೆಪ್ಟೆಂಬರ್ 2021: ಚಾಮರಾಜನಗರ ಜಿಲ್ಲೆಯ ವಾರ್ಡ್ ಸಂಖ್ಯೆ-6ರ ನಗರ ಸಭಾ ಸದಸ್ಯ, ಪಕ್ಷದ ಮಾಜಿ ಜಿಲ್ಲಾ ಉಪಾಧ್ಯಕ್ಷರು, ಜಿಲ್ಲೆಯ ಹಲವು ಮಸ್ಜಿದ್, ಮದರಸಾ ಸಮಿತಿಗಳ ಪದಾಧಿಕಾರಿಯಾಗಿಯೂ, ಸಾಮಾಜಿಕ ಕಾರ್ಯಕರ್ತರಾಗಿಯೂ ಸೇವೆ ಸಲ್ಲಿಸುತ್ತಿದ್ದ ಎಸ್.ಡಿ.ಪಿ.ಐ ಮುಖಂಡ ಸೈಯದ್ ಸಮೀವುಲ್ಲಾರವರು ಹೃದಯಾಘಾತದಿಂದ ಬುಧವಾರ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಪಕ್ಷದ ರಾಜ್ಯಾಧ್ಯಕ್ಷ ಅಬ್ದುಲ್ ಹನ್ನಾನ್‌ರವರು ಸಂತಾಪ ವ್ಯಕ್ತಪಡಿಸಿದ್ದಾರೆ.ಪಕ್ಷ ಸ್ಥಾಪನೆಯಾದ ದಿನದಿಂದ ಪಕ್ಷದಲ್ಲಿ ಸಕ್ರಿಯರಾಗಿದ್ದ ಅವರು ಅನ್ಯಾಯದ ವಿರುದ್ಧ ಹೋರಾಟದಲ್ಲಿ ಮುಂಚೂಣಿಯಲ್ಲಿರುತ್ತಿದ್ದರು. ಇವರ ವಿಯೋಗದೊಂದಿಗೆ ಪಕ್ಷ ಹಾಗೂ ಸಮುದಾಯವು ನಾಯಕನೊಬ್ಬನನ್ನು ಕಳೆದುಕೊಂಡಂತಾಗಿದೆ. ಮೃತರು ಪತ್ನಿ, ಒಂದು ಹೆಣ್ಣು, ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಸರ್ವಶಕ್ತನಾದ ಅಲ್ಲಾಹನು ಅವರ ಪರಲೋಕ ಜೀವನವನ್ನು ಯಶಸ್ವಿಗೊಳಿಸಲಿ ಹಾಗೂ ಅವರ ಕುಟುಂಬಕ್ಕೆ, ಬಂಧು ಮಿತ್ರರಿಗೆ, ಅಭಿಮಾನಿಗಳಿಗೆ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ.#RIP

admin

Recent Posts

ಜಿಲ್ಲಾ ಪ್ರತಿನಿಧಿ ಸಭೆDISTRICT REPRESENTATIVE COUNCIL

Hearty Welcome MUJAHID PASHAState General Secretary RIYAZ KADAMBUState Secretary SALEEM AHMEDDistrict President DR. SHAIK TABREZDistrict…

9 hours ago

WORLD ENVIRONMENT DAY

ವಿಶ್ವ ಪರಿಸರ ದಿನಾಚರಣೆ 05 JUNE ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ! ಇಂದು ನಾವು ನೆಡುವ ಒಂದು ಸಣ್ಣಗಿಡ, ನಾಳಿನ…

2 days ago

SDPI ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ಸದಸ್ಯರು, ಪುತ್ತೂರಿನ ಹಿರಿಯ ಉದ್ಯಮಿ, ಸಮಾಜಸೇವಕರು ಹಾಗೂ ವಿವಿಧ ಧಾರ್ಮಿಕ ಮತ್ತು ಸಾಮಾಜಿಕ ಸಂಘಟನೆಗಳಲ್ಲಿ ಮಹತ್ವದ ಜವಾಬ್ದಾರಿಗಳನ್ನು ನಿರ್ವಹಿಸಿದ್ದ ಸಾಗರ್ ಇಬ್ರಾಹಿಂ ಹಾಜಿ ಅವರ ನಿಧನದ ಸುದ್ದಿ ಅತ್ಯಂತ ದುಃಖವನ್ನುಂಟು ಮಾಡಿದೆ.ಅವರು ಸಮಾಜದ ಅಭಿವೃದ್ಧಿ, ಧಾರ್ಮಿಕ ಸೇವೆ ಹಾಗೂ ಜನಸಾಮಾನ್ಯರ ಕಲ್ಯಾಣಕ್ಕಾಗಿ ಸಲ್ಲಿಸಿದ ಕೊಡುಗೆಗಳು ಸದಾ ಸ್ಮರಣೀಯವಾಗಿರಲಿವೆ. ಅವರ ಅಗಲಿಕೆಯಿಂದ ಕುಟುಂಬಕ್ಕೆ ಮಾತ್ರವಲ್ಲ, ಪುತ್ತೂರು ಭಾಗದ ಸಮುದಾಯಕ್ಕೂ ಮತ್ತು SDPI ಪಕ್ಷಕ್ಕೂ ತುಂಬಲಾರದ ನಷ್ಟ ಉಂಟಾಗಿದೆ.ಅಲ್ಲಾಹು ತಆಲಾ ಮರ್ಹೂಮ್ ಸಾಗರ್ ಇಬ್ರಾಹಿಂ ಹಾಜಿಯವರ ಸಕಲ ಸತ್ಕರ್ಮಗಳನ್ನು ಸ್ವೀಕರಿಸಿ, ಅವರಿಗೆ ಜನ್ನತುಲ್ ಫಿರ್ದೌಸ್ ಅನುಗ್ರಹಿಸಲಿ. ಅವರ ಕುಟುಂಬಸ್ಥರು, ಬಂಧುಬಳಗ ಮತ್ತು ಅಭಿಮಾನಿಗಳಿಗೆ ಈ ದುಃಖವನ್ನು ಸಹಿಸುವ ಶಕ್ತಿ ಮತ್ತು ತಾಳ್ಮೆಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.

~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು, SDPI ಕರ್ನಾಟಕ SDPIKarnataka #Mangalore

2 days ago

ಜಿಲ್ಲಾ ಪ್ರತಿನಿಧಿ ಸಭೆ

DRC DISTRICT REPRESENTATIVE COUNCIL Heartly Welcome ABDUL HANNANState Vice President MAULANA AKRAMState Secretary ABDUL RAHEEM…

7 days ago

HAPPY Eid Al-Adha

Wishing you a beautiful and blessed Eid. Warm Wishes on Eid ul Adha May the…

1 week ago