ಅನ್ಯಾಯದ ವಿರುದ್ಧ ಹೋರಾಡುತ್ತಲೇ ಕೊನೆಯುಸಿರೆಳೆದ ಚಾಮರಾಜನಗರ ನಗರಸಭಾ ಸದಸ್ಯ ಹಾಗೂ ಎಸ್ಡಿಪಿಐ ಮುಖಂಡ ಸೈಯದ್ ಸಮೀವುಲ್ಲಾ: ಅಬ್ದುಲ್ ಹನ್ನಾನ್ ಸಂತಾಪ

ಚಾಮರಾಜನಗರ, 01 ಸೆಪ್ಟೆಂಬರ್ 2021: ಚಾಮರಾಜನಗರ ಜಿಲ್ಲೆಯ ವಾರ್ಡ್ ಸಂಖ್ಯೆ-6ರ ನಗರ ಸಭಾ ಸದಸ್ಯ, ಪಕ್ಷದ ಮಾಜಿ ಜಿಲ್ಲಾ ಉಪಾಧ್ಯಕ್ಷರು, ಜಿಲ್ಲೆಯ ಹಲವು ಮಸ್ಜಿದ್, ಮದರಸಾ ಸಮಿತಿಗಳ ಪದಾಧಿಕಾರಿಯಾಗಿಯೂ, ಸಾಮಾಜಿಕ ಕಾರ್ಯಕರ್ತರಾಗಿಯೂ ಸೇವೆ ಸಲ್ಲಿಸುತ್ತಿದ್ದ ಎಸ್.ಡಿ.ಪಿ.ಐ ಮುಖಂಡ ಸೈಯದ್ ಸಮೀವುಲ್ಲಾರವರು ಹೃದಯಾಘಾತದಿಂದ ಬುಧವಾರ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಪಕ್ಷದ ರಾಜ್ಯಾಧ್ಯಕ್ಷ ಅಬ್ದುಲ್ ಹನ್ನಾನ್‌ರವರು ಸಂತಾಪ ವ್ಯಕ್ತಪಡಿಸಿದ್ದಾರೆ.ಪಕ್ಷ ಸ್ಥಾಪನೆಯಾದ ದಿನದಿಂದ ಪಕ್ಷದಲ್ಲಿ ಸಕ್ರಿಯರಾಗಿದ್ದ ಅವರು ಅನ್ಯಾಯದ ವಿರುದ್ಧ ಹೋರಾಟದಲ್ಲಿ ಮುಂಚೂಣಿಯಲ್ಲಿರುತ್ತಿದ್ದರು. ಇವರ ವಿಯೋಗದೊಂದಿಗೆ ಪಕ್ಷ ಹಾಗೂ ಸಮುದಾಯವು ನಾಯಕನೊಬ್ಬನನ್ನು ಕಳೆದುಕೊಂಡಂತಾಗಿದೆ. ಮೃತರು ಪತ್ನಿ, ಒಂದು ಹೆಣ್ಣು, ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಸರ್ವಶಕ್ತನಾದ ಅಲ್ಲಾಹನು ಅವರ ಪರಲೋಕ ಜೀವನವನ್ನು ಯಶಸ್ವಿಗೊಳಿಸಲಿ ಹಾಗೂ ಅವರ ಕುಟುಂಬಕ್ಕೆ, ಬಂಧು ಮಿತ್ರರಿಗೆ, ಅಭಿಮಾನಿಗಳಿಗೆ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ.#RIP

admin

Recent Posts

باوقار سياست

کے لیے SDPI میں شامل ہوں 10 MAY 2026 TO 25 MAY ممبر شپ کیمپین…

2 days ago

Join SDPI

For Politics of DIGNITY MEMBERSHIP CAMPAIGN 10 ΜΑΥ 2026 ΤΟ 25 MAY2026 SCAN OR LOG…

2 days ago

ಸ್ವಾಭಿಮಾನದ ರಾಜಕಾರಣಕ್ಕಾಗಿ

SDPI ಸೇರಿರಿ 10 ΜΑΥ 2026 ΤΟ 25 MAY 2026 ಸದಸ್ಯತ್ವ ಅಭಿಯಾನ SCAN OR LOG IN…

2 days ago