ಅನ್ಯಾಯದ ವಿರುದ್ಧ ಹೋರಾಡುತ್ತಲೇ ಕೊನೆಯುಸಿರೆಳೆದ ಚಾಮರಾಜನಗರ ನಗರಸಭಾ ಸದಸ್ಯ ಹಾಗೂ ಎಸ್ಡಿಪಿಐ ಮುಖಂಡ ಸೈಯದ್ ಸಮೀವುಲ್ಲಾ: ಅಬ್ದುಲ್ ಹನ್ನಾನ್ ಸಂತಾಪ

ಚಾಮರಾಜನಗರ, 01 ಸೆಪ್ಟೆಂಬರ್ 2021: ಚಾಮರಾಜನಗರ ಜಿಲ್ಲೆಯ ವಾರ್ಡ್ ಸಂಖ್ಯೆ-6ರ ನಗರ ಸಭಾ ಸದಸ್ಯ, ಪಕ್ಷದ ಮಾಜಿ ಜಿಲ್ಲಾ ಉಪಾಧ್ಯಕ್ಷರು, ಜಿಲ್ಲೆಯ ಹಲವು ಮಸ್ಜಿದ್, ಮದರಸಾ ಸಮಿತಿಗಳ ಪದಾಧಿಕಾರಿಯಾಗಿಯೂ, ಸಾಮಾಜಿಕ ಕಾರ್ಯಕರ್ತರಾಗಿಯೂ ಸೇವೆ ಸಲ್ಲಿಸುತ್ತಿದ್ದ ಎಸ್.ಡಿ.ಪಿ.ಐ ಮುಖಂಡ ಸೈಯದ್ ಸಮೀವುಲ್ಲಾರವರು ಹೃದಯಾಘಾತದಿಂದ ಬುಧವಾರ ನಿಧನರಾಗಿದ್ದಾರೆ. ಅವರ ನಿಧನಕ್ಕೆ ಪಕ್ಷದ ರಾಜ್ಯಾಧ್ಯಕ್ಷ ಅಬ್ದುಲ್ ಹನ್ನಾನ್‌ರವರು ಸಂತಾಪ ವ್ಯಕ್ತಪಡಿಸಿದ್ದಾರೆ.ಪಕ್ಷ ಸ್ಥಾಪನೆಯಾದ ದಿನದಿಂದ ಪಕ್ಷದಲ್ಲಿ ಸಕ್ರಿಯರಾಗಿದ್ದ ಅವರು ಅನ್ಯಾಯದ ವಿರುದ್ಧ ಹೋರಾಟದಲ್ಲಿ ಮುಂಚೂಣಿಯಲ್ಲಿರುತ್ತಿದ್ದರು. ಇವರ ವಿಯೋಗದೊಂದಿಗೆ ಪಕ್ಷ ಹಾಗೂ ಸಮುದಾಯವು ನಾಯಕನೊಬ್ಬನನ್ನು ಕಳೆದುಕೊಂಡಂತಾಗಿದೆ. ಮೃತರು ಪತ್ನಿ, ಒಂದು ಹೆಣ್ಣು, ಇಬ್ಬರು ಗಂಡು ಮಕ್ಕಳನ್ನು ಅಗಲಿದ್ದಾರೆ. ಸರ್ವಶಕ್ತನಾದ ಅಲ್ಲಾಹನು ಅವರ ಪರಲೋಕ ಜೀವನವನ್ನು ಯಶಸ್ವಿಗೊಳಿಸಲಿ ಹಾಗೂ ಅವರ ಕುಟುಂಬಕ್ಕೆ, ಬಂಧು ಮಿತ್ರರಿಗೆ, ಅಭಿಮಾನಿಗಳಿಗೆ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲಿ.#RIP

admin

Recent Posts

ಪತ್ರಿಕಾ ಪ್ರಕಟಣೆ

ಪೆರಿಯಾರ್ ಅವರ ಹೋರಾಟ ಮಾನವ ಘನತೆ, ಸಮಾನತೆ ಮತ್ತು ಸ್ವಾಭಿಮಾನದ ಪ್ರತೀಕ: ಅಪ್ಸರ್ ಕೊಡ್ಲಿಪೇಟೆ ಆನೇಕಲ್:ಸೆ. 17:ಸಾಮಾಜಿಕ ನ್ಯಾಯ, ಸಮಾನತೆ,…

21 hours ago

ಫ್ಯಾಶಿಷ್ಟರು ಗೌರಿ ಲಂಕೇಶ್‌ ಅವರನ್ನು ಗುಂಡಿಕ್ಕಿ ಕೊಂದ ದಿನ.

5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh

2 weeks ago

Will fight for every citizen of this country

Prakash Raj, Abdul Majeed SDPI and several others detained by Bengaluru Police During Election Commission…

2 weeks ago

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

4 weeks ago