ಎಸ್.ಡಿ.ಪಿ.ಐ ರಾಜ್ಯಾಧ್ಯಕ್ಷರಾಗಿ ಅಬ್ದುಲ್ ಮಜೀದ್ ಮೈಸೂರು ಆಯ್ಕೆ.

ಬೆಂಗಳೂರು, 7 ನವೆಂಬರ್ 2021: ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ-ಎಸ್.ಡಿ.ಪಿ.ಐ ಕರ್ನಾಟಕ ರಾಜ್ಯದ 2 ದಿನಗಳ ಪ್ರತಿನಿಧಿಗಳ ಸಭೆಯಲ್ಲಿ ರಾಷ್ಟ್ರೀಯ ಅಧ್ಯಕ್ಷರು ಎಮ್. ಕೆ. ಫೈಝಿ, ರಾಷ್ಟ್ರೀಯ ಉಪಾಧ್ಯಕ್ಷರು ದೆಹಲಾನ್ ಬಾಘವಿ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಇಲ್ಯಾಸ್ ಮಹಮ್ಮದ್ ತುಂಬೆ ಹಾಗೂ ಮಹಮ್ಮದ್ ಶಫಿರವರ ನೇತೃತ್ವದಲ್ಲಿ 2021-24ರ ಅವಧಿಗೆ ನಡೆದ ಆಂತರಿಕ ಚುನಾವಣೆಯಲ್ಲಿ ರಾಜ್ಯ ಕಾರ್ಯಕಾರಿಣಿ ಸಭೆಗೆ ನೂತನ 27 ಮಂದಿಯ ಸಮಿತಿಯನ್ನು ಆಯ್ಕೆ ಮಾಡಲಾಯಿತು. ರಾಜ್ಯಾಧ್ಯಕ್ಷರಾಗಿ ಅಬ್ದುಲ್ ಮಜೀದ್ ಮೈಸೂರು, ಉಪಾಧ್ಯಕ್ಷರುಗಳಾಗಿ ದೇವನೂರು ಪುಟ್ನಂಜಯ್ಯ ಹಾಗೂ ಪ್ರೊಫೆಸರ್ ಸಯಿದಾ ಸಾದಿಯ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾಗಿ ಅಬ್ದುಲ್ ಲತೀಫ್ ಪುತ್ತೂರು, ಭಾಸ್ಕರ್ ಪ್ರಸಾದ್ ಹಾಗೂ ಆಫ್ಸರ್ ಕೊಡ್ಲಿಪೇಟೆ, ಕಾರ್ಯದರ್ಶಿಗಳಾಗಿ ಅಶ್ರಫ್ ಮಾಚಾರ್, ಅನಂದ್ ಮಿತ್ತಬೈಲ್, ಶಾಫಿ ಬೆಳ್ಳಾರೆ, ಕೋಶಾಧಿಕಾರಿಯಾಗಿ ಖಾಲಿದ್ ಯಾದ್ಗೀರ್, ರಾಜ್ಯ ಸಮಿತಿ ಸದಸ್ಯರುಗಳಾಗಿ ಅಬ್ದುಲ್ ಹನ್ನಾನ್, ಪ್ರೋಫೆಸರ್ ನಾಝ್ನಿನ್ ಬೇಗಂ, ಅಲ್ಫಾನ್ಸೋ ಫ್ರಾಂಕೋ, ಅಡ್ವೋಕೆಟ್ ಮಜೀದ್ ಖಾನ್, ಮುಜಾಹಿದ್ ಪಾಷ, ಅಮ್ಜದ್ ಖಾನ್, ಅಬ್ದುಲ್ ರಹೀಂ ಪಟೇಲ್, ಅತಾವುಲ್ಲಾ ಜೋಕಟ್ಟೆ, ಇಬ್ರಾಹಿಂ ಮಜೀದ್ ತುಂಬೆ, ಝೀನತ್ ಬಂಟ್ವಾಳ, ಪ್ರೋಫೆಸರ್ ಘಯಾಸುದ್ದೀನ್, ಮೆಹಬೂಬ್ ಮುಲ್ಲಾ, ಮೌಲಾನ ನೂರುದ್ದಿನ್, ರಿಯಾಜ್ ಕಡಂಬು, ಸಲೀಂ ಖಾನ್ ಶಿವಮೊಗ್ಗ ಹಾಗೂ ರಫೀ ಪಾಷರವರು ಆಯ್ಕೆಯಾದರು.

ರಾಜ್ಯ ಪ್ರತಿನಿಧಿ ಸಭೆಯಲ್ಲಿ ತೆಗೆದು ಕೊಂಡು ನಿರ್ಧಾರಗಳು ಈ ಕೆಳಕಂಡಂತೆ ಇವೆ.

  1. ಚರ್ಚ್ ಗಳು ಸಮೀಕ್ಷೆ ನಡೆಸುವ ನಿಟ್ಟಿನಲ್ಲಿ ಸರ್ಕಾರ ಹೊರಡಿಸಿರುವ ಆದೇಶ ಅಸಾಂವಿಧಾನಿಕ. ಅಲ್ಪಸಂಖ್ಯಾತರ ಧಾರ್ಮಿಕ ಸ್ವಾತಂತ್ರ‍್ಯ ಹರಣವಾಗಿದೆ. ಸಂವಿಧಾನದ 14 ಮತ್ತು 21 ನೇ ವಿಧಿಯಡಿಯಲ್ಲಿ ದೊರೆತಿರುವ ಸಮಾನತೆ ಮತ್ತು ಖಾಸಗಿ ಹಕ್ಕಿನ ಸ್ಪಷ್ಟ ಉಲ್ಲಂಘನೆಯಾಗಿದೆ. ಅಲ್ಪಸಂಖ್ಯಾತ ಸಮುದಾಯದವರನ್ನು ಗುರಿಯಾಗಿಸಿ ಕೊಂಡು ಈ ರೀತಿಯಾಗಿ ಅಸಾಂವಿಧಾನಿಕ ಆದೇಶ ಹೊರಡಿಸಿರುವುದು ಖಂಡನೀಯ. ಆದುದರಿಂದ ಈ ಆದೇಶವನ್ನು ಸರ್ಕಾರ ವಾಪಸ್ಸುಪಡೆಯಬೇಕು.
  2. ಕರ್ನಾಟಕ ರಾಜ್ಯ ಅಭಿವೃದ್ಧಿ ವಿಷಯದಲ್ಲಿ ಬಹಳ ಹಿಂದುಳಿದಿದೆ ಎನ್ನುವುದಕ್ಕೆ ಅನೇಕ ವರದಿಗಳು ಸಹಮತ ನೀಡಿವೆ. ಅದರಲ್ಲೂ ವಿದ್ಯಾವಂತ ಸ್ಥಳೀಯಯರು ಉದ್ಯೋಗ ಇಲ್ಲದೆ ಬಡತನದ ವಾತಾವರಣದಲ್ಲಿ ಉಸಿರುಗಟ್ಟಿಸುವ ಜೀವನ ಸಾಗಿಸುತ್ತಿದ್ದಾರೆ. ಈ ಗಂಭೀರ ಸಮಸ್ಯೆಯ ಕುರಿತು ಸರೋಜಿನಿ ಮಹಿಷಿ ವರದಿ ಸಹ ತನ್ನ ವರದಿಯಲ್ಲಿ ಕನ್ನಡಿಗರಿಗೆ ಎಲ್ಲಾ ರಂಗದಲ್ಲೂ ಉದ್ಯೋಗವಕಾಶ ಕಲ್ಪಿಸ ಬೇಕು ಎಂದು ಶಿಫಾರಸ್ಸು ಮಾಡಿತ್ತು. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿಲ್ಲದ ಕಾರಣ ಇವತ್ತು ಸಹ ಹೆಚ್ಚಿನ ಕನ್ನಡಿಗರು ನಿರುದ್ಯೋಗಿಗಳಾಗಿದ್ದಾರೆ. ಆದುದರಿಂದ ಸರ್ಕಾರ ಸರೋಜಿನಿ ಮಹಿಷಿ ವರದಿಯ ಶಿಫಾರಸ್ಸುಗಳನ್ನು ಜಾರಿಗೆ ತರುವ ಮೂಲಕ ಕನ್ನಡಿಗರಿಗೆ ಉದ್ಯೋಗ ಕಲ್ಪಿಸಿ ಕೂಡಬೇಕು ಎಂಬುದಾಗಿ ಆಗ್ರಹಿಸುತ್ತೇವೆ.
  3. ರಾಜ್ಯಾದ್ಯಂತ ಕೋಮು ಗಲಭೆ ಮಾಡಿಸುವ ನಿಟ್ಟಿನಲ್ಲಿ ಸಂಘಪರಿವಾರ ತ್ರಿಶೂಲ ದೀಕ್ಷೆ ಕಾರ್ಯಕ್ರಮ ಆಯೋಜಿಸಿರುವುದು ಶಾಂತಿಯ ನಾಡದ ಕರ್ನಾಟಕಕ್ಕೆ ಒಂದು ಸವಾಲಾಗಿದೆ. ರಾಜ್ಯದಲ್ಲಿ ಆಶಾಂತಿ ಸೃಷ್ಟಿಸಲು ಪ್ರಯತ್ನಿಸುತ್ತಿರುವ ವಿ.ಎಚ್.ಪಿ ಹಾಗೂ ಬಜರಂಗದಳ ಸಂಘಟನೆಗಳ ಪುಂಡಾಟಿಕೆಗೆ ಸರ್ಕಾರ ಕಡಿವಾಣ ಹಾಕುವ ನಿಟ್ಟಿನಲ್ಲಿ ಸೂಕ್ತ ಕಾನೂನು ಕ್ರಮ ಜರುಗಿಸ ಬೇಕು.
  4. ರಾಜ್ಯದ ಜನತೆ ಯಾವ ಮಟ್ಟದಲ್ಲಿ ತಮ್ಮ ಜೀವನ ಸಾಗಿಸುತ್ತಿದ್ದಾರೆ ಎಂಬ ವಾಸ್ತವಂಶವನ್ನು ಅರಿಯುವ ನಿಟ್ಟಿನಲ್ಲಿ ಸರ್ಕಾರ 2016 ರಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ವರದಿ ಮಾಡಿಸಿತ್ತು. ಈ ವರದಿಯೂ ಜಾತಿ ಗಣತಿ ಎಂದೇ ಪ್ರಸಿದ್ದವಾಗಿತ್ತು. ಈ ವರದಿ ತಯಾರಿಸಲು ಸರ್ಕಾರ 158 ಕೋಟಿ ಖರ್ಚು ಮಾಡಿದೆ. ವರದಿ ಪೂರ್ಣಗೊಂಡಿದ್ದರೂ ಸಹ ಸರ್ಕಾರ ಇಲ್ಲಿಯವರೆಗೂ ಈ ವರದಿಗೆ ಮಾನ್ಯತೆ ಕೊಟ್ಟಿಲ್ಲ. ವಿವಿಧ ಪಕ್ಷಗಳ ರಾಜಕೀಯ ಹಿತಾಸಕ್ತಿಗಾಗಿ ಸರ್ಕಾರ ಈ ವರದಿಯನ್ನು ಉದ್ದೇಶಪೂರ್ವಕವಾಗಿ ಕಡೆಗಣಿಸುತ್ತಿದೆ. ಬಡ ವರ್ಗದವರ ಆರ್ಥಿಕ ಮತ್ತು ಸಾಮಾಜಿಕ ಸ್ಥಿತಿ ಗತಿಯ ವಾಸ್ತವಂಶ ಅರಿಯದೆ ಬಡವರ ಪರ ಪ್ರತಿಫಲ ಭರಿತ ಯೋಜನೆಗಳನ್ನು ರೂಪಿಸಲು ಸಾಧ್ಯವಾಗುತ್ತಿಲ್ಲ. ಆದುದರಿಂದ ಸರ್ಕಾರ ಬಡ ಜನತೆಯ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಈ ವರದಿಯನ್ನು ಅಂಗೀಕರಿಸಿ, ಬಡ ಜನರ ಕಲ್ಯಾಣಕ್ಕಾಗಿ ಯೋಜನೆಗಳನ್ನು ರೂಪಿಸ ಬೇಕು ಎಂದು ಆಗ್ರಹ.
  5. ಬಡವರು, ಮಧ್ಯಮ ವರ್ಗದವರು ಗುಣಮಟ್ಟದ ಉನ್ನತ ಶಿಕ್ಷಣ ಪಡೆಯುವ ಕನಸಿಗೆ ಕೊಡಲಿ ಪೆಟ್ಟು ನೀಡಿರುವ ಹೊಸ ರಾಷ್ಟ್ರೀಯ ಶಿಕ್ಷಣ ನೀತಿ ಒಂದು ಕರಾಳ ನೀತಿಯಾಗಿದೆ. ಈ ನೀತಿ ವಿದ್ಯಾರ್ಥಿಗಳ ಭವಿಷ್ಯ ಹಾಳು ಮಾಡುವುದಲ್ಲದೇ, ಸರ್ಕಾರಿ ಶಾಲಾ, ಕಾಲೇಜು ಮತ್ತು ವಿಶ್ವವಿದ್ಯಾಲಯಗಳನ್ನು ಮುಚ್ಚಿ, ಖಾಸಗಿತನಕ್ಕೆ ಹೆಚ್ಚು ಒತ್ತು ನೀಡುತ್ತದೆ. ಬಹಳ ಮುಖ್ಯವಾಗಿ ಪಠ್ಯ ಪುಸ್ತಕಗಳ ವಿಷಯಗಳನ್ನು ನಿರ್ಧರಿಸುವ ಹಕ್ಕು ರಾಜ್ಯದಿಂದ ಕಸಿದು ಕೊಳ್ಳುವ ಷಡ್ಯಂತ್ರ ಸೇರಿದಂತೆ ಅನೇಕ ಲೋಪದೋಷಗಳಿರುವ ಈ ರಾಷ್ಟ್ರೀಯ ಶಿಕ್ಷಣ ನೀತಿ ಯಾವ ಕಾರಣಕ್ಕೂ ರಾಜ್ಯದಲ್ಲಿ ಅನುಷ್ಠಾನಗೊಳಿಸ ಬಾರದು ಎಂದು ಒತ್ತಾಯಿಸುತ್ತಿದ್ದೇವೆ.
  6. ಮುಸ್ಲಿಂ ಸಮುದಾಯದ ಏಳಿಗೆಗಾಗಿ ಇರುವ ವಕ್ಫ್ ಆಸ್ತಿಗಳು ಕಬಳಿಕೆ ಆಗಿರುವ ಕುರಿತು ಅನೇಕ ವಕ್ಫ್ ಹಗರಣಗಳು ನಮ್ಮ ರಾಜ್ಯದಲ್ಲಿ ಕಾಣಲು ಸಿಗುತ್ತವೆ. ವಕ್ಫ್ ಆಸ್ತಿ ದುರ್ಬಳಕೆಗೆ ಕಡಿವಾಣ ಹಾಕುವ ಸಲುವಾಗಿ ಮತ್ತು ವಕ್ಫ್ ಆಸ್ತಿಗಳ ರಕ್ಷಣೆಗಾಗಿ ಸರ್ಕಾರ ರಾಜ್ಯದ್ಯಾಂತ ವಕ್ಫ್ ಆಸ್ತಿಗಳ ಸರ್ವೆ ಕಾರ್ಯವನ್ನು ತ್ವರಿತವಾಗಿ ಮಾಡಿಸ ಬೇಕು ಹಾಗೂ ವಕ್ಫ್ ಆಸ್ತಿ ಹಗರಣದಲ್ಲಿ ಕೇಳಿ ಬಂದಿರುವ ವ್ಯಕ್ತಿಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿ ನಿಷ್ಪಕ್ಷಪಾತ ತನಿಖೆ ನಡೆಸ ಬೇಕು ಎಂದು ಈ ಎಸ್.ಆರ್.ಸಿ ಮೂಲಕ ಆಗ್ರಹಿಸುತ್ತಿದ್ದೇವೆ.
  7. ಲಾಕ್‌ಡೌನ್‌ನಿಂದ ದೇಶದ ಆರ್ಥಿಕ ವ್ಯವಸ್ಥೆ ಹದಗೆಟ್ಟಿದ ಕಾರಣ ಸಾಮಾನ್ಯ ಜನರ ಜೀವನ ಅಸ್ತವ್ಯಸ್ತವಾಗಿದೆ. ಅಲ್ಲದೇ ಪ್ರತಿ ದಿನ ಆಗುತ್ತಿರುವ ಬೆಲೆ ಏರಿಕೆಯೂ ಗಾಯದ ಮೇಲೆ ಬರೆ ಎಳೆದಂತೆ ಆಗಿದೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಸರ್ಕಾರ ಕಳೆದ ವರ್ಷ ಒಂದರಲ್ಲೇ ಪೆಟ್ರೋಲ್, ಡಿಸೇಲ್ ಮತ್ತು ಗ್ಯಾಸ್ ಬೆಲೆಯನ್ನು ಸರ್ಕಾರ ನಿರಂತರವಾಗಿ 40-45 ರೂಪಾಯಿಗಳನ್ನು ಏರಿಸಿರುವುದು ಕಂಡು ಬಂದಿದೆ. ಜನರ ಆಕ್ರೋಶಕ್ಕೆ ಮಣಿದ ಸರ್ಕಾರ ಪ್ರಸ್ತುತ ಕೇವಲ 7 ರೂಪಾಯಿಗಳನ್ನು ಕಡಿತಗೊಳಿಸಿದೆ. ಇದು ಜನರ ಕಣ್ಣಿಗೆ ಮಣ್ಣು ಎರಚ್ಚುವ ತಂತ್ರವಾಗಿದೆ. ಜನತೆಯ ಜೀವನದ ಜೊತೆ ಸರ್ಕಾರ ಚೆಲ್ಲಾಟ ಆಡುವುದನ್ನು ನಿಲ್ಲಿಸಿ, ಜನರ ಹಿತಾಸಕ್ತಿಗಾಗಿ ಈ ಕೂಡಲೇ ಪೆಟ್ರೋಲ್, ಡಿಸೇಲ್ ಬೆಲೆಯಲ್ಲಿ ತಕ್ಷಣ ಕನಿಷ್ಠ ಪಕ್ಷ 50 ರೂಪಾಯಿಗಳನ್ನು ಕಡಿಮೆ ಮಾಡ ಬೇಕು ಎಂದು ಆಗ್ರಹ.
  8. ಪರಿಶಿಷ್ಟ ಜಾತಿಯಲ್ಲಿನ ಅಸ್ಪೃಶ್ಯ ಜಾತಿಗಳಿಗೆ ಹಾಗೂ ದುರ್ಬಳ ಜಾತಿಗಳಿಗೆ ಒಳ ಮೀಸಲಾತಿ ನೀಡುವ ಮೂಲಕ ಅವರನ್ನು ಗುರುತಿಸಿ, ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ರಾಜಕೀಯವಾಗಿ ಮುಂದೆ ತರುವ ನಿಟ್ಟಿನಲ್ಲಿ ರಾಜ್ಯ ಸರ್ಕಾರಗಳೇ ವ್ಯವಸ್ಥೆ ಕಲ್ಪಿಸ ಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿರುವ ನಿಟ್ಟಿನಲ್ಲಿ, ಕರ್ನಾಟಕ ರಾಜ್ಯದಲ್ಲಿ ಸದಾಶಿವ ಆಯೋಗದ ವರದಿಯ ಶಿಫಾರಸ್ಸುಗಳನ್ನು ಜಾರಿಗೆ ತರಬೇಕು ಎಂದು ಆಗ್ರಹ.
  9. ತನಗೆ ಬೇಕಾದ ಧರ್ಮವನ್ನು ಸ್ವೀಕರಿಸಲು ಸಂವಿಧಾನದಲ್ಲಿ ಅವಕಾಶ ಕಲ್ಪಸಲಾಗಿದೆ. ಆದರೆ ಸರ್ಕಾರ ಸಂವಿಧಾನದ ಆಶಯಗಳ ವಿರುದ್ಧವಾಗಿ ಅಲ್ಪಸಂಖ್ಯಾತರ ಹಕ್ಕುಗಳನ್ನು ದಮನಿಸುವ ಹಾಗೂ ನಿಯಂತ್ರಿಸುವ ನಿಟ್ಟಿನಲ್ಲಿ ಮತಾಂತರ ನಿಷೇಧ ಕಾಯಿದೆ ಜಾರಿಗೆ ತರಲು ಹೊರಟಿರುವುದು ಅತ್ಯಂತ ಖಂಡನೀಯ. ಯಾವ ಕಾರಣಕ್ಕೂ ಸಂವಿಧಾನದ ಆಶಯಗಳ ವಿರುದ್ಧ ಮತಾಂತರ ನಿಷೇಧ ಎಂಬ ಸಂವಿಧಾನ ವಿರೋಧಿ ಕಾನೂನನ್ನು ಜಾರಿಗೊಳಿಸ ಬಾರದು ಒತ್ತಾಯಿಸಲಾಗುತ್ತಿದೆ.
  10. ಕಾನೂನು ಬಾಹಿರವಾಗಿರುವ ಬೀಟ್ ಕಾಯಿನ್ ದಂಧೆಯಲ್ಲಿ ರಾಜ್ಯದ ಪ್ರಭಾವಶಾಲಿಗಳು ಶಾಮೀಲಾಗಿದ್ದಾರೆ ಎಂದು ವರದಿಗಳು ಹೇಳುತ್ತಿವೆ. ಇದು ನಮ್ಮ ರಾಜ್ಯಕ್ಕೆ ಕಳಂಕ ತರುವ ವಿಷಯವಾಗಿದೆ. ಸರ್ಕಾರ ಯಾವುದೇ ಒತ್ತಡಕ್ಕೆ ಮಣಿಯದೆ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಕೊಂಡು, ನಿಷ್ಪಕ್ಷಪಾತವಾಗಿ ತನಿಖೆ ಮಾಡಿಸಿ, ಈ ಅಕ್ರಮ ವ್ಯವಹಾರದಲ್ಲಿ ತೊಡಗಿರುವ ದಂಧೆಕೋರರನ್ನು ಬಂಧಿಸಿ, ಕಠಿಣ ಶಿಕ್ಷೆಗೆ ಒಳಪಡಿಸ ಬೇಕು ಎಂದು ಆಗ್ರಹಿಸಲಾಗುತ್ತಿದೆ.
  11. ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಕುಡಿಯುವ ನೀರಿನ ಯೋಜನೆಯ ಮಹತ್ವಾಕಾಂಕ್ಷೆ ಹೊಂದಿರುವ ಎತ್ತಿನ ಹೊಳೆ ಯೋಜನೆ 2013-14 ನೇ ಸಾಲಿನಲ್ಲಿ ಕಾಮಗಾರಿ ಆರಂಭವಾಗಿದ್ದು, ಇಲ್ಲಿಯವರೆಗೂ ಇದು ಮುಗಿದಿಲ್ಲ. ಇದರಿಂದ ಈ ಮೂರು ಜಿಲ್ಲೆಗಳಲ್ಲಿ ನೀರಿನ ಸಮಸ್ಯೆ ಇನ್ನೂ ತೀವ್ರ ಸ್ವರೂಪದಾಗಿ ಬೆಳೆಯುತ್ತಿದೆ. ಆದುದರಿಂದ ಒಂದು ನಿರ್ದಿಷ್ಟ ಸಮಯದೊಳಗೆ ಎತ್ತಿನ ಹೊಳೆ ಯೋಜನೆ ಕಾಮಗಾರಿ ಮುಗಿಸಿ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸ ಬೇಕು ಎಂದು ಆಗ್ರಹಿಸಲಾಗುತ್ತಿದೆ.
admin

Recent Posts

“Everyone’s Contribution is Essential for Social Transformation – Afsar Kodlipete”

Press Release Gulbarga, Sept 11:At the SDPI leaders’ meeting held in Gulbarga today, the party’s…

1 day ago

ಪತ್ರಿಕಾ ಪ್ರಕಟಣೆ<br><br>“ಸಮಾಜ ಪರಿವರ್ತನೆಗೆ ಪ್ರತಿಯೊಬ್ಬರ ಕೊಡುಗೆ ಅಗತ್ಯ – ಅಪ್ಸರ್ ಕೊಡ್ಲಿಪೇಟೆ”<br><br>ಗುಲ್ಬರ್ಗಾ, ಸೆಪ್ಟೆಂಬರ್ 11:<br>ಇಂದು ಗುಲ್ಬರ್ಗಾದಲ್ಲಿ ನಡೆದ ಎಸ್‌ಡಿಪಿಐ ನಾಯಕರ ಸಭೆಯಲ್ಲಿ, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಅವರು “ಸಮಾಜ ಪರಿವರ್ತನೆಗೆ ಪ್ರತಿಯೊಬ್ಬರ ಕೊಡುಗೆ” ಎಂಬ ವಿಷಯದ ಕುರಿತು ಪ್ರಮುಖ ಭಾಷಣ ಮಾಡಿದರು.<br><br>ತಮ್ಮ ಭಾಷಣದಲ್ಲಿ ಅವರು ಹೇಳಿದರು:<br>“ಸಮಾಜದಲ್ಲಿ ಬದಲಾವಣೆ ತರಲು ಕೇವಲ ಕನಸು ಕಾಣುವುದು ಸಾಕಾಗುವುದಿಲ್ಲ. ಪ್ರತಿಯೊಬ್ಬರೂ ತಮ್ಮದೇ ಆದ ಕೊಡುಗೆಯನ್ನು ನೀಡಿದಾಗ ಮಾತ್ರ ನಿಜವಾದ ಬದಲಾವಣೆ ಸಾಧ್ಯ. ಬದಲಾವಣೆಯ ಹಾದಿ ದೀರ್ಘ ಮತ್ತು ಕಠಿಣವಾಗಿದ್ದರೂ, ಇದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ನ್ಯಾಯ, ಸಮಾನತೆ ಮತ್ತು ಸಹೋದರತ್ವವನ್ನು ಸ್ಥಾಪಿಸಲು ನಂಬಿಕೆ, ಶ್ರಮ ಮತ್ತು ಬದ್ಧತೆ ಅಗತ್ಯ. ಎಸ್‌ಡಿಪಿಐ ಸದಸ್ಯರು ತಮ್ಮ ಸಮಯ, ಶಕ್ತಿ ಮತ್ತು ಸಂಪನ್ಮೂಲಗಳನ್ನು ಸಮಾಜಮುಖಿ ಹೋರಾಟಗಳಿಗೆ ಸಮರ್ಪಿಸಬೇಕು.”<br><br>“ಇಂದಿಗೂ ಸಾವಿರಾರು ಹಿಂದುಳಿದವರು, ಅಲ್ಪಸಂಖ್ಯಾತರು ಮತ್ತು ಬಡವರು ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ. ಅವರ ಹಕ್ಕುಗಳಿಗಾಗಿ ನಮ್ಮ ಕಾರ್ಯಕರ್ತರು ಪೊಲೀಸ್ ದೌರ್ಜನ್ಯ, ಸುಳ್ಳು ಕೇಸುಗಳು ಮತ್ತು ಬಂಧನಗಳನ್ನು ಸಹಿಸಿಕೊಂಡಿದ್ದಾರೆ. ಇದು ಅವರ ಬದ್ಧತೆಯ ಸಾಕ್ಷಿಯಾಗಿದೆ. ಎಸ್‌ಡಿಪಿಐ ಕೇವಲ ರಾಜಕೀಯ ಪಕ್ಷವಲ್ಲ, ಇದು ಶೋಷಿತರ ಕೂಗಿನ ಪ್ರತಿಧ್ವನಿ, ಸಾಮಾನ್ಯ ಜನರ ಕನಸುಗಳ ಪ್ರತೀಕ. ಹೀಗಾಗಿ ಪ್ರತಿಯೊಬ್ಬ ನಾಯಕ, ಕಾರ್ಯಕರ್ತ ಮತ್ತು ಅಭಿಮಾನಿ ತಮ್ಮ ಪಾತ್ರವನ್ನು ಅರಿತು, ಈ ಬದಲಾವಣೆಯ ಹಾದಿಯಲ್ಲಿ ತಮ್ಮದೇ ಆದ ಕೊಡುಗೆಯನ್ನು ನೀಡಬೇಕು,” ಎಂದು ಅವರು ಒತ್ತಿಹೇಳಿದರು.<br><br>ಸಭೆಯಲ್ಲಿ ಕಲಬುರಗಿ ಜಿಲ್ಲೆಯ ರೈತರ ಮೇಲಿನ ನಡೆಯುತ್ತಿರುವ ವಂಚನೆಗಳ ವಿಷಯವೂ ಚರ್ಚಿಸಲಾಯಿತು. ರೈತ ಸಂಪರ್ಕ ಕೇಂದ್ರಗಳಲ್ಲಿ ಅವಧಿ ಮೀರಿದ ಕ್ರಿಮಿನಾಶಕ ಮತ್ತು ಗೊಬ್ಬರಗಳನ್ನು ರೈತರಿಗೆ ಮಾರಾಟ ಮಾಡಲಾಗುತ್ತಿದೆ. ಕೆಲ ಅಂಗಡಿಗಳು ಎಂಆರ್‌ಪಿ ದರಕ್ಕಿಂತ ಎರಡು ಪಟ್ಟು ಹಣ ಪಡೆದು ಗೊಬ್ಬರವನ್ನು ಮಾರಾಟ ಮಾಡುತ್ತಿರುವುದು ಗಂಭೀರ ಅನ್ಯಾಯವಾಗಿದೆ ಎಂದು ಜಿಲ್ಲಾಧ್ಯಕ್ಷ ಮೊಹಮ್ಮದ್ ಮೋಹಿಸಿನ್ ಖಂಡಿಸಿದರು. ರೈತರನ್ನು ಮೋಸಗೊಳಿಸಿದ ಅಂಗಡಿ ಮಾಲೀಕರು ಮತ್ತು ಕೃಷಿ ಇಲಾಖೆಯ ನಿರ್ಲಕ್ಷ್ಯಕ್ಕೆ ವಿರುದ್ಧವಾಗಿ ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಭೆಯಲ್ಲಿ ಒತ್ತಾಯಿಸಲಾಯಿತು.<br><br>ಇದರ ಜೊತೆಗೆ ರೈತರ ಸಂಕಷ್ಟ, ನಿರುದ್ಯೋಗ, ಶಿಕ್ಷಣ ಮತ್ತು ಆರೋಗ್ಯದ ವಿಚಾರಗಳ ಮೇಲೂ ಚರ್ಚೆ ನಡೆಯಿತು.<br><br>ಈ ಸಂದರ್ಭದಲ್ಲಿ ಎಸ್‌ಡಿಪಿಐ ರಾಷ್ಟ್ರೀಯ ಸಮಿತಿ ಸದಸ್ಯೆ ಪ್ರೊಫೆಸರ್ ಸೈಯದಾ ಸಾದಿಯಾ ಹಾಗೂ ರಾಜ್ಯ ಸಮಿತಿ ಸದಸ್ಯ ಅಬ್ದುಲ್ ರಹೀಮ್ ಪಟೇಲ್ ರವರು ಸಂಘಟನೆಯ ಬಲವರ್ಧನೆ ಮತ್ತು ನಿಧಿ ಸಂಗ್ರಹಣೆಯ ಅಗತ್ಯತೆಯ ಕುರಿತು ಮಾತನಾಡಿದರು.<br><br>ಜಿಲ್ಲಾ ಉಪಾಧ್ಯಕ್ಷ ಮಕ್ಬೂಲ್ ಅಹ್ಮದ್, ಪ್ರಧಾನ ಕಾರ್ಯದರ್ಶಿಗಳಾದ ಡಾ. ರಿಜ್ವಾನ್ ಮತ್ತು ಇಬ್ರಾಹಿಂ ಪಟೇಲ್, ವುಮೆನ್ ಇಂಡಿಯಾ ಮೂವ್‌ಮೆಂಟ್ ಜಿಲ್ಲಾ ಅಧ್ಯಕ್ಷೆ ಸೇರಿದಂತೆ ಜಿಲ್ಲಾ ಸಮಿತಿ ಸದಸ್ಯರು ಮತ್ತು ವಿಧಾನಸಭಾ ಕ್ಷೇತ್ರ ಮಟ್ಟದ ನಾಯಕರು ಸಕ್ರಿಯವಾಗಿ ಪಾಲ್ಗೊಂಡಿದ್ದರು.

1 day ago

بار بار آر ایس ایس کے جال میں پھنستی ہوئی ریاستی کانگریس حکومت ۔قربانی کے بکرے بن رہے ہیں مسلمان

پریس ریلیز بنگلورو : 10 ستمبر : کرناٹک میں کانگریس حکومت تقریباً 95% مسلم برادری…

2 days ago

PRESS RELEASE

BAAR BAAR RSS KE JAAL MEIN PHANS'TI HUI RIYAASTI CONGRESS HUKUMAT -QURBANI KE BAKRAY BAN…

2 days ago

ಪತ್ರಿಕಾ ಪ್ರಕಟಣೆ

ಮತ್ತೆ ಮತ್ತೆ ಆರ್ ಎಸ್ಎಸ್ ಖೇಡ್ದಾಕ್ಕೆ ಬೀಳುತ್ತಿರುವ ರಾಜ್ಯ ಕಾಂಗ್ರೇಸ್ ಸರ್ಕಾರ - ಬಲಿ ಪಶುಗಳಾಗುತ್ತಿರುವ ಮುಸ್ಲಿಮರು ಬೆಂಗಳೂರು :…

2 days ago

ರಾಯಚೂರು ನಾಯಕರ ಸಭೆ

ರಾಯಚೂರಿನಲ್ಲಿ ನಡೆದ ನಾಯಕರ ಸಭೆಯಲ್ಲಿ ರಾಜ್ಯ ಉಪಾಧ್ಯಕ್ಷರಾದ ಅಬ್ದುಲ್ ಹನ್ನಾನ್, ರಾಜ್ಯ ನಾಯಕರು ಅಬ್ದುಲ್ ರಹೀಮ್ ಪಟೇಲ್ ಹಾಗೂ ಅಕ್ಟರ್‌…

5 days ago