ಫ್ಯಾಶಿಸಂ ಖಂಡಿತವಾಗಿಯೂ ಸೋಲಲಿದೆ; ರೈತ ಯೋಧರಿಗೆ ಧನ್ಯವಾದ ಮತ್ತು ಸೆಲ್ಯೂಟ್- ಎಸ್.ಡಿ.ಪಿ.ಐ


ಒಂದು ವರ್ಷ ಕಾಲ ಐತಿಹಾಸಿಕ ಹೋರಾಟ ನಡೆಸಿ ಜಯಗಳಿಸಿದ ರೈತರನ್ನು ಅಭಿನಂದಿಸಿರುವ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷ ಎಂ.ಕೆ.ಫೈಝಿ ಅವರು, ‘ ರೈತರಿಗೆ ಅಭಿನಂದನೆಗಳು, ಇದು ಸಂತೋಷ ಮತ್ತು ಹೆಮ್ಮೆಯ ಕ್ಷಣ’ ಎಂದು ಪ್ರತಿಕ್ರಿಯಿಸಿದ್ದಾರೆ.
ಪ್ರತಿಭಟನೆಯ ಆರಂಭದಿಂದಲೂ ಪ್ರತಿಭಟನಾನಿರತ ರೈತರಿಗೆ ಬೇಷರತ್ ಬೆಂಬಲ ನೀಡಿರುವ ಮತ್ತು ರೈತರೊಂದಿಗೆ ನಿಂತಿರುವ ಎಸ್ ಡಿಪಿಐ, ರೈತರ ಪ್ರತಿಭಟನೆಗಳು ಮತ್ತು ಹರತಾಳಗಳಲ್ಲಿ ಭಾಗವಹಿಸಿತ್ತು. ಮಾತ್ರವಲ್ಲ ರೈತರೊಂದಿಗೆ ಐಕ್ಯಮತ್ಯ ಪ್ರದರ್ಶಿಸಲು ದೇಶಾದ್ಯಂತ ಪಕ್ಷದ ಕಾರ್ಯಕರ್ತರು ಪ್ರತಿಭಟನೆಗಳನ್ನು ನಡೆಸಿದ್ದರು. ಈ ಸಂದರ್ಭದಲ್ಲಿ ವಿಜಯ ಮತ್ತು ಸಂತೋಷದ ಕ್ಷಣವನ್ನು ಪಕ್ಷ ಹಂಚಿಕೊಳ್ಳುತ್ತಿದೆ ಎಂದು ಅವರು ತಿಳಿಸಿದ್ದಾರೆ.
ನೀವು ಭಾರತೀಯ ಫ್ಯಾಶಿಸಂ ಅನ್ನು ಮಂಡಿಯೂರುವಂತೆ ಮಾಡಿದ್ದೀರಿ, ಎಷ್ಟೇ ದಬ್ಬಾಳಿಕೆಯ ಆಡಳಿತಗಾರನೂ, ಜನರ ಪ್ರತಿರೋಧ ಮತ್ತು ಆಕ್ರೋಶದ ಎದುರು ನಿಲ್ಲಲು ಸಾಧ್ಯವಿಲ್ಲ ಎಂದು ನೀವು ತೋರಿಸಿದ್ದೀರಿ. ಇದು ದೇಶದ ಕ್ರೂರ ಫ್ಯಾಶಿಸ್ಟ್ ಸರ್ಕಾರದ ವಿರುದ್ಧ ಜನರ ಜಯವಾಗಿದೆ; ಫ್ಯಾಶಿಸಂ ವಿಫಲವಾಗಲೇ ಬೇಕಾಗುತ್ತದೆ ಎಂದು ಫೈಝಿ ಹೇಳಿದರು.
ಕೇಂದ್ರ ಸರ್ಕಾರವು ಅಂಗೀಕರಿಸಿದ್ದ ಕೃಷಿ ಕಾನೂನು ತಿದ್ದುಪಡಿಗಳನ್ನು ಹಿಂಪಡೆದುಕೊಳ್ಳುವಂತೆ ಒತ್ತಾಯಿಸಿ ದೇಶದ ಬೆನ್ನೆಲುಬಾಗಿರುವ ರೈತರು ಕಳೆದ ಒಂದು ವರ್ಷದಿಂದ ಬೀದಿಯಲ್ಲಿ ಹೋರಾಟ ನಿರತರಾಗಿದ್ದಾರೆ. ಈ ಸಂದರ್ಭದಲ್ಲಿ ರೈತರ ಚಳವಳಿಯ ಬಗ್ಗೆ ಸರ್ಕಾರದ ಧೋರಣೆ ಹೆಚ್ಚು ನಕಾರಾತ್ಮಕ ಮತ್ತು ನಿರ್ಲಕ್ಷ್ಯದಿಂದ ಕೂಡಿತ್ತು.
ರೈತರ ಸಂಕಟಗಳು ಮತ್ತು ಬೇಡಿಕೆಗಳನ್ನು ಆಲಿಸುವ ಕನಿಷ್ಠ ಪ್ರಜಾಸತ್ತಾತ್ಮಕ ಸೌಜನ್ಯವನ್ನು ಕೂಡ ತೋರಿಸಲು ಅಥವಾ ಅವರೊಂದಿಗೆ ಸಕಾರಾತ್ಮಕ ಚರ್ಚೆ ನಡೆಸುವ ಬಗ್ಗೆ ಸರ್ಕಾರ ತಲೆಕೆಡಿಸಿಕೊಳ್ಳಲಿಲ್ಲ. ಅವರು ಪ್ರತಿಭಟನೆ ಮತ್ತು ಪ್ರತಿಭಟನಾಕಾರರನ್ನು ಹತ್ತಿಕ್ಕಲು, ಕತ್ತು ಹಿಸುಕಲು ಮತ್ತು ಕೊಲ್ಲಲು ಪ್ರಯತ್ನಿಸುತ್ತಿದ್ದರು. ಕೇಂದ್ರ ಸಚಿವರೊಬ್ಬರ ಮಗ ಪ್ರತಿಭಟನಾನಿರತ ರೈತರ ಮೇಲೆ ಅವರ ವಾಹನ ಹರಿಸುವ ಮೂಲಕ ಕೆಲವು ರೈತರನ್ನು ಹತ್ಯೆ ಮಾಡಿದರು. ಕಳೆದ ಒಂದು ವರ್ಷದಲ್ಲಿ ಅನೇಕ ಪ್ರತಿಭಟನಾಕಾರರು ಹುತಾತ್ಮರಾಗಿದ್ದಾರೆ. ಅಂತಿಮವಾಗಿ, ವಿವಾದಾಸ್ಪದ ಕಾನೂನುಗಳನ್ನು ಜಾರಿಗೆ ತಂದೇ ತೀರುತ್ತೇವೆ ಎಂಬ ತಮ್ಮ ಹಿಂದಿನ ಹಠಮಾರಿ ನಿಲುವಿನಿಂದ ಹೊರಬಂದು ಅದನ್ನು ಹಿಂಪಡೆದುಕೊಳ್ಳಲು ಕೇಂದ್ರ ಸರ್ಕಾರವು ಒಪ್ಪಿಕೊಂಡಿದೆ.
ನ್ಯಾಯಕ್ಕಾಗಿ ನಡೆಯುವ ಹೋರಾಟಗಳು ಎಂದಿಗೂ ವಿಫಲವಾಗುವುದಿಲ್ಲ. ಆದರೆ ಗೆಲುವು ಕೆಲವೊಮ್ಮೆ ವಿಳಂಬವಾಗಬಹುದು. ಈ ಚಳುವಳಿಯ ಜಯವು ದುರಹಂಕಾರಿ ಜನವಿರೋಧಿ ಆಡಳಿತಗಾರರಿಗೆ ಅವರ ಪತನದ ಕ್ಷಣಗಣನೆ ಪ್ರಾರಂಭವಾಗಿದೆ ಎಂಬ ವಿಶಿಷ್ಟ ಎಚ್ಚರಿಕೆಯಾಗಿದೆ. ಯಾವುದೇ ನಿರಂಕುಶಪ್ರಭು ಅಥವಾ ಫ್ಯಾಶಿಸ್ಟ್ ಆಡಳಿತಗಾರ ಖಂಡಿತವಾಗಿಯೂ ಬಲವಾದ, ದೃಢವಾದ ಮತ್ತು ಸ್ಥಿರವಾದ ಜನರ ಪ್ರತಿರೋಧದ ಎದುರು ಸೋಲುತ್ತಾನೆ ಎಂದು ಈ ರೈತರ ಗೆಲುವು ತೋರಿಸುತ್ತದೆ. ಸರ್ಕಾರದ ಅನ್ಯಾಯದ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ಆಡಳಿತ ಪಕ್ಷದ ದೌರ್ಜನ್ಯಕ್ಕೆ ಒಳಗಾಗಿರುವ ಲಕ್ಷಾಂತರ ಭಾರತೀಯ ಜನರಿಗೆ ಈ ಗೆಲುವು ಸ್ಫೂರ್ತಿಯಾಗಿದೆ. ಆಡಳಿತಗಾರರು ಅರ್ಥ ಮಾಡಿಕೊಳ್ಳಲು ಸಿದ್ಧರಿದ್ದರೆ, ಜನರ ವಿರುದ್ಧವಾಗಿರುವ ಯಾವುದೇ ಸರ್ಕಾರ ಉಳಿಯಲು ಸಾಧ್ಯವಿಲ್ಲ ಎಂಬ ಪಾಠವನ್ನು ಇದು ನೀಡುತ್ತದೆ. ನ್ಯಾಯವು ಗೆಲ್ಲುತ್ತದೆ ಮತ್ತು ಫ್ಯಾಸಿಸಂ ಸೋಲುತ್ತದೆ.
ಸರ್ಕಾರಿ ಪ್ರಾಯೋಜಕತ್ವದ ಭಯೋತ್ಪಾದನೆ ಮತ್ತು ಆಳುವವರ ಬೆಂಬಲದೊಂದಿಗೆ ರಾಷ್ಟ್ರ ವಿರೋಧಿ ಶಕ್ತಿಗಳ ದೌರ್ಜನ್ಯಗಳಿಗೆ ಸಂತ್ರಸ್ತರಾದವರೆಲ್ಲರೂ ಈ ವಿಜಯದ ಸಂದೇಶವನ್ನು ಅರ್ಥಮಾಡಿಕೊಳ್ಳಬೇಕು ಮತ್ತು ಅನ್ಯಾಯದ ವಿರುದ್ಧ ಬಲವಾದ ಮತ್ತು ದೃಢವಾದ ಪ್ರತಿರೋಧ ಮತ್ತು ಚಳುವಳಿಗಳ ಮೂಲಕ ಫ್ಯಾಶಿಸ್ಟ್ ಗಳನ್ನು ಸೋಲಿಸಲು ಮತ್ತು ಅಧಿಕಾರದಿಂದ ಕಿತ್ತೊಗೆಯಲು ಒಗ್ಗಟ್ಟಿನಿಂದ ನಿಂತು ದೇಶವನ್ನು ರಕ್ಷಿಸಬೇಕು ಎಂದು ಎಂ.ಕೆ.ಫೈಝಿ ಹೇಳಿಕೆಯಲ್ಲಿ ಮನವಿ ಮಾಡಿದ್ದಾರೆ.

admin

Recent Posts

ಜನರಿಗೆ ಅಧಿಕಾರ, ಎಸ್‌.ಡಿ.ಪಿ.ಐ ಸಾರಥ್ಯಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಮಿತಿಗೆನೂತನವಾಗಿ ಆಯ್ಕೆಯಾದ ನಾಯಕರ

ಅಭಿನಂದನಾ ರ್ಯಾಲಿ ಮತ್ತು ಸಮಾವೇಶ 21 ಜನವರಿ 2026 ರ್ಯಾಲಿ: ಸಂಜೆ 04:00 | ಅಂಬೇಡ್ಕ‌ರ್ (ಜ್ಯೋತಿ) ವೃತ್ತದಿಂದ ಪುರಭವನದ…

8 hours ago

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾರಾಮದುರ್ಗ ವಿಧಾನಸಭಾ ಸಮಿತಿ, ಬೆಳಗಾವಿ

SIR ಮೂಲಕ ಮತದಾನದ ಹಕ್ಕನ್ನು ಕಸಿದುಕೊಳ್ಳುವ ಪ್ರಯತ್ನ ನಡೆಯುತ್ತಿದೆ - ಅಬ್ರಾರ್ 12.01.2026 ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನಲ್ಲಿ ಸೋಶಿಯಲ್…

8 hours ago

10.01.2026

ಈ ನಾಡು ಕಂಡ ಖ್ಯಾತ ಇಸ್ಲಾಮಿಕ್ ವಿದ್ವಾಂಸ, ಕರ್ನಾಟಕ ಅಮೀರೆ ಶರೀಯತ್ ಮತ್ತು ಸಬಿವುಲ್ ರಷಾದ್ ಅರೇಬಿಕ್ ಕಾಲೇಜು, ನಾಗವಾರ…

8 hours ago

Condolence

The passing away of Ameer-e-Shariat of Karnataka, the respected religious and social leader Maulana Sageer…

15 hours ago

انتقال پر ملال

امیر شریعت کرناٹک، معروف دینی و سماجی رہنما مولانا صغیر احمد صاحب کے بنگلورو میں…

15 hours ago

Condolence

Deeply saddened by the passing of Ameer-e-Shariat Maulana Sageer Ahmed Sahib Principal of Sabee-ul-Rashad Arabic…

16 hours ago