ಉಪ್ಪಿನಂಗಡಿ ಪೋಲೀಸರ ಅಮಾನವೀಯ ಕ್ರೌರ್ಯತೆ ಖಂಡನೀಯ. ಮಾನವ ಹಕ್ಕುಗಳ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಲಿ: ಎಸ್‌ಡಿಪಿಐ

ಬೆಂಗಳೂರು(ಡಿ.15) : ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯಲ್ಲಿ ನಡೆದ ಪ್ರಕರಣವೊಂದಕ್ಕೆ ಸಂಬಂಧಿಸಿ ಪೋಲಿಸ್ ಇಲಾಖೆ ರಾತ್ರೋರಾತ್ರಿ ಅಕ್ರಮವಾಗಿ ಬಂಧಿಸಿರುವ ಅಮಾಯಕ ಮುಸ್ಲಿಂ ನಾಯಕರನ್ನು ಬಿಡುಗಡೆಗೊಳಿಸಲು ಆಗ್ರಹಿಸಿ ನಿನ್ನೆ ಬೆಳಿಗ್ಗೆಯಿಂದ ಶಾಂತಿಯುತ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾ ನಿರತರ ಮೇಲೆ ಬರ್ಬರವಾಗಿ ಲಾಠಿಜಾರ್ಚ್ ನಡೆಸಿ ಮಾರಣಾಂತಿಕ ಗಾಯಗೊಳಿಸಿ ಕ್ರೌರ್ಯ ಮೆರೆದ ಘಟನೆಯನ್ನು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಲತೀಫ್ ಪುತ್ತೂರು ತೀವ್ರವಾಗಿ ಖಂಡಿಸಿದ್ದಾರೆ.

ಮೇಲ್ನೋಟಕ್ಕೆ ಇದೊಂದು ಪೂರ್ವ ನಿಯೋಜಿತ ಘಟನೆಯಂತೆ ಕಂಡು ಬರುತ್ತದೆ. ಕೇವಲ ಲಾಠಿ ಮಾತ್ರವಲ್ಲದೆ ಮಾರಕಾಯುಧಗಳಿಂದಲೂ ಮಾರಣಾಂತಿಕವಾಗಿ ತಲೆ, ಎದೆಯ ಭಾಗಕ್ಕೆ ಇರಿಯಲಾಗಿದೆ. ಈ ಮೂಲಕ ಸಂವಿಧಾನಾತ್ಮಕವಾಗಿರುವ ಪ್ರತಿಭಟನೆಯ ಹಕ್ಕನ್ನು ಕಸಿದು ಸರ್ವಾಧಿಕಾರಿ ಧೋರಣೆ ಮಾಡಲಾಗುತ್ತಿದೆ.

ಶಾಂತಿಯುತವಾಗಿ ನಡೆಯುತ್ತಿದ್ದ ಪ್ರತಿಭಟನೆಗೆ ರಾತ್ರಿಯ ಸಂದರ್ಭದಲ್ಲಿ ಏಕಾಏಕಿ ಯಾವುದೇ ಮುನ್ಸೂಚನೆ ನೀಡದೆ ಅಮಾನುಷವಾಗಿ ದೌರ್ಜನ್ಯ ಎಸಗುವ ಮೂಲಕ ಪೋಲಿಸರು ಕ್ರೌರ್ಯ ಮೆರೆದಿದ್ದಾರೆ.

ರಾಜ್ಯದಲ್ಲಿ ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದ ನಂತರ, ಕೆಲವು ಕೋಮುವಾದಿ ಗೂಂಡಾ ಸಂಘಟನೆಗಳು ಮತ್ತು ಕೋಮುವಾದಿ ನಾಯಕರಗಳ ಪ್ರಚೋಧನೆಯಿಂದಾಗಿ ಇದೇ ರೀತಿಯಾಗಿ ನಿರಂತರವಾಗಿ ಅಲ್ಪಸಂಖ್ಯಾತ ಸಮುದಾಯವನ್ನು ಗುರಿ ಮಾಡಿಕೊಂಡು ಒಂದಲ್ಲಾ ಒಂದು ರೀತಿಯ ದೌರ್ಜನ್ಯಗಳು ನಡೆಯುತ್ತಲೇ ಇದೆ. BJP ಸರ್ಕಾರವೂ ಇಂತಹ ದೌರ್ಜನ್ಯಗಳಿಗೆ ಪೂರಕವಾಗಿ ತನ್ನ ಹೇಳಿಕೆಗಳನ್ನು ನೀಡುತ್ತಲೇ ಬರುತ್ತಿದೆ‌. ಸ್ವತಃ ಮುಖ್ಯಮಂತ್ರಿಗಳೇ ಮುಂದಾಗಿ ಕೋಮುದಳ್ಳುರಿ ಹೊತ್ತಿಸುವಂತಹ ಹೇಳಿಕೆ ನೀಡಿ, ಹಿಂದುಗಳ ಧಾರ್ಮಿಕ ಭಾವನೆಗೆ ದಕ್ಕೆ ತಂದರೆ ಕ್ರಿಯೆಗೆ ಪ್ರತಿಕ್ರಿಯೆ ನೀಡಬೇಕಾಗುತ್ತದೆ ಎಂದು ಅಲ್ಪಸಂಖ್ಯಾತರಲ್ಲಿ ಆತಂಕದ ವಾತಾವರಣ ಸೃಷ್ಟಿಸಿದ್ದನ್ನು ನಾವಿಲ್ಲಿ ಮರೆಯುವ ಹಾಗಿಲ್ಲ. ಇಂತಹ ಸರ್ಕಾರಿ ಪ್ರಾಯೋಜಿತ ಭಯೋತ್ಪಾದಕ ಹೇಳಿಕೆಗಳ ಕಾರಣದಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿರಂತರವಾಗಿರುವ ಅಲ್ಪಸಂಖ್ಯಾತರ ಮೇಲೆ ಹಲ್ಲೆ, ಕೊಲೆಯತ್ನ ಪ್ರಕರಣಗಳು ಅಧಿಕಗೊಳ್ಳುತ್ತಿವೆ

ಸಂಘಪರಿವಾರ ಸಂಘಟನೆಗಳು ಬಹಿರಂಗವಾಗಿಯೇ ತ್ರಿಶೂಲ ದೀಕ್ಷೆ ಕಾರ್ಯಕ್ರಮಗಳನ್ನು ನಡೆಸಿದರೂ ಅಂತಹ ಕಾರ್ಯಕ್ರಮಗಳನ್ನು ತಡೆಯುವ ಯಾವುದೇ ಪ್ರಯತ್ನವನ್ನು ಪೊಲೀಸ್ ಇಲಾಖೆ ನಡೆಸಿಲ್ಲ. ತ್ರಿಶೂಲ ದೀಕ್ಷೆಯ ನಂತರ ಜಿಲ್ಲೆಯಲ್ಲಿ ಹಲವಾರು ಕಡೆ ದಿನ ನಿತ್ಯ ತ್ರಿಶೂಲ ದಾಳಿ ಪ್ರಕರಣಗಳು ನಡೆದರೂ ಸರಕಾರ ಆಗಲಿ ಪೊಲೀಸ್ ಇಲಾಖೆಯಾಗಲಿ ಅದನ್ನು ಗಣನೆಗೆ ತೆಗೆದುಕೊಂಡು, ದಾಳಿಗಳನ್ನು ನಡೆಸುವ ಶಕ್ತಿಗಳನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳದೆ ಸಂಘ ಪರಿವಾರಕ್ಕೆ ಜಿಲ್ಲೆಯಲ್ಲಿ ಏನೂ ಬೇಕಾದರೂ ಮಾಡಬಹುದು ಎಂಬ ಮಟ್ಟಕ್ಕೆ ಮೌನವಹಿಸಿದೆ.

ಆದ್ದರಿಂದ ಘಟನೆಯ ಬಗ್ಗೆ ಕೂಡಲೇ ಉನ್ನತ ಮಟ್ಟದ ತನಿಖೆ ನಡೆಸಿ ತಪ್ಪಿತಸ್ಥ ಪೋಲಿಸರ ಮೇಲೆ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಎಸ್.ಡಿ.ಪಿ.ಐ ಒತ್ತಾಯಿಸುತ್ತದೆ.

admin

Recent Posts

ಮೈಸೂರು ಜಿಲ್ಲಾ ನಾಯಕರ ಸಭೆ ಯಶಸ್ವಿಯಾಗಿ ನೆರವೇರಿತುಮೈಸೂರಿನಲ್ಲಿ ಎಸ್‌ಡಿಪಿಐ ಜಿಲ್ಲಾ ನಾಯಕರ ಮಹತ್ವದ ಸಭೆ ನಡೆಯಿತು.ಸಭೆಯಲ್ಲಿ ಜಿಲ್ಲೆಯ ಪ್ರಸ್ತುತ ರಾಜಕೀಯ ಪರಿಸ್ಥಿತಿ, ಜನಸಾಮಾನ್ಯರು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳು, ಸ್ಥಳೀಯ ಜನರ ಅಗತ್ಯಗಳು ಹಾಗೂ ಮುಂಬರುವ ಚುನಾವಣಾ ಸವಾಲುಗಳ ಕುರಿತು ಸಮಗ್ರ ಚರ್ಚೆ ನಡೆಸಲಾಯಿತು. ಅಲ್ಲದೆ, ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ ನೀಡುವ ಹಾಗೂ ಮತದಾರರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಅವರ ಹಕ್ಕುಗಳಿಗಾಗಿ ಹೋರಾಡುವ ಕಾರ್ಯಯೋಜನೆ ರೂಪಿಸಲಾಯಿತು.ಸಭೆಯಲ್ಲಿ ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ರಾಜ್ಯ ಉಪಾಧ್ಯಕ್ಷ ಅಬ್ದುಲ್ ಹನ್ನಾನ್, ರಾಜ್ಯ ಕಾರ್ಯದರ್ಶಿ ಅಕ್ರಮ್ ಮೌಲಾನ ಹಾಗೂ ರಾಜ್ಯ ಖಜಾಂಚಿ ಅಮ್ಜದ್ ಖಾನ್ ಪ್ರಮುಖ ವಿಷಯಗಳ ಕುರಿತು ಮಾರ್ಗದರ್ಶನ ನೀಡಿದರು.ಜಿಲ್ಲಾ ಕಾರ್ಯಧ್ಯಕ್ಷ ಶಫಿವುಲ್ಲಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಳಾದ ಫಿರ್ದೋಸ್, ಅಝೀಮ್ ಸಭೆಯ ನೇತ್ರತ್ವ ವಹಿಸಿದ್ದರು.ಜನಪರ ಹೋರಾಟಗಳನ್ನು ಮತ್ತಷ್ಟು ಬಲಪಡಿಸಿ, ಸಮಾಜದ ಎಲ್ಲ ವರ್ಗಗಳ ಧ್ವನಿಯಾಗುವ ಸಂಕಲ್ಪದೊಂದಿಗೆ ಸಭೆ ಯಶಸ್ವಿಯಾಗಿ ಸಂಪನ್ನಗೊಂಡಿತು.

ಮೈಸೂರು ಜಿಲ್ಲಾ ನಾಯಕರ ಸಭೆ ಯಶಸ್ವಿಯಾಗಿ ನೆರವೇರಿತುಮೈಸೂರಿನಲ್ಲಿ ಎಸ್‌ಡಿಪಿಐ ಜಿಲ್ಲಾ ನಾಯಕರ ಮಹತ್ವದ ಸಭೆ ನಡೆಯಿತು.ಸಭೆಯಲ್ಲಿ ಜಿಲ್ಲೆಯ ಪ್ರಸ್ತುತ ರಾಜಕೀಯ…

22 hours ago

ಜಿಲ್ಲಾ ಪ್ರತಿನಿಧಿ ಸಭೆDISTRICT REPRESENTATIVE COUNCIL

Hearty Welcome MUJAHID PASHAState General Secretary RIYAZ KADAMBUState Secretary SALEEM AHMEDDistrict President DR. SHAIK TABREZDistrict…

3 days ago

WORLD ENVIRONMENT DAY

ವಿಶ್ವ ಪರಿಸರ ದಿನಾಚರಣೆ 05 JUNE ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ! ಇಂದು ನಾವು ನೆಡುವ ಒಂದು ಸಣ್ಣಗಿಡ, ನಾಳಿನ…

5 days ago

SDPI ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ಸದಸ್ಯರು, ಪುತ್ತೂರಿನ ಹಿರಿಯ ಉದ್ಯಮಿ, ಸಮಾಜಸೇವಕರು ಹಾಗೂ ವಿವಿಧ ಧಾರ್ಮಿಕ ಮತ್ತು ಸಾಮಾಜಿಕ ಸಂಘಟನೆಗಳಲ್ಲಿ ಮಹತ್ವದ ಜವಾಬ್ದಾರಿಗಳನ್ನು ನಿರ್ವಹಿಸಿದ್ದ ಸಾಗರ್ ಇಬ್ರಾಹಿಂ ಹಾಜಿ ಅವರ ನಿಧನದ ಸುದ್ದಿ ಅತ್ಯಂತ ದುಃಖವನ್ನುಂಟು ಮಾಡಿದೆ.ಅವರು ಸಮಾಜದ ಅಭಿವೃದ್ಧಿ, ಧಾರ್ಮಿಕ ಸೇವೆ ಹಾಗೂ ಜನಸಾಮಾನ್ಯರ ಕಲ್ಯಾಣಕ್ಕಾಗಿ ಸಲ್ಲಿಸಿದ ಕೊಡುಗೆಗಳು ಸದಾ ಸ್ಮರಣೀಯವಾಗಿರಲಿವೆ. ಅವರ ಅಗಲಿಕೆಯಿಂದ ಕುಟುಂಬಕ್ಕೆ ಮಾತ್ರವಲ್ಲ, ಪುತ್ತೂರು ಭಾಗದ ಸಮುದಾಯಕ್ಕೂ ಮತ್ತು SDPI ಪಕ್ಷಕ್ಕೂ ತುಂಬಲಾರದ ನಷ್ಟ ಉಂಟಾಗಿದೆ.ಅಲ್ಲಾಹು ತಆಲಾ ಮರ್ಹೂಮ್ ಸಾಗರ್ ಇಬ್ರಾಹಿಂ ಹಾಜಿಯವರ ಸಕಲ ಸತ್ಕರ್ಮಗಳನ್ನು ಸ್ವೀಕರಿಸಿ, ಅವರಿಗೆ ಜನ್ನತುಲ್ ಫಿರ್ದೌಸ್ ಅನುಗ್ರಹಿಸಲಿ. ಅವರ ಕುಟುಂಬಸ್ಥರು, ಬಂಧುಬಳಗ ಮತ್ತು ಅಭಿಮಾನಿಗಳಿಗೆ ಈ ದುಃಖವನ್ನು ಸಹಿಸುವ ಶಕ್ತಿ ಮತ್ತು ತಾಳ್ಮೆಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.

~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು, SDPI ಕರ್ನಾಟಕ SDPIKarnataka #Mangalore

5 days ago

ಜಿಲ್ಲಾ ಪ್ರತಿನಿಧಿ ಸಭೆ

DRC DISTRICT REPRESENTATIVE COUNCIL Heartly Welcome ABDUL HANNANState Vice President MAULANA AKRAMState Secretary ABDUL RAHEEM…

1 week ago