ಪತ್ರಿಕಾ ಪ್ರಕಟಣೆ.
ಮತಾಂತರ ನಿಷೇಧ ಕಾಯ್ದೆಯ ವಿರುದ್ದ ಕಾನೂನು ಹೋರಾಟಕ್ಕೆ ಎಸ್.ಡಿ.ಪಿ.ಐ ನಿರ್ಧಾರ.
ಕರ್ನಾಟಕ ಸರ್ಕಾರವು ತರಲು ಉದ್ದೇಶಿಸಿರುವ ಮತಾಂತರ ನಿಷೇಧ ಕಾಯ್ದೆಯು ಸಂವಿಧಾನ ವಿರೋಧಿಯು ಮತ್ತು ಸರ್ಕಾರಿ ಪ್ರಾಯೋಜಿತ ಭಯೋತ್ಪಾದಕ ಕೃತ್ಯವೂ ಆಗಿದೆ ಎಂಬ ನಿಲುವನ್ನು ಎಸ್.ಡಿ.ಪಿ.ಐ ಈಗಾಗಲೇ ಪ್ರಕಟಿಸಿದೆ.
ಘನತೆವೆತ್ತ ರಾಜ್ಯಪಾಲರು ಈ ಮಸೂದೆಯನ್ನು ತಿರಸ್ಕರಿಸಬೇಕು ಎಂಬ ಒತ್ತಾಯದ ಮನವಿಗಳನ್ನು ರಾಜ್ಯದಾದ್ಯಂತ ನಡೆಸಲಾದ ಪ್ರತಿಭಟನೆಗಳ ಮೂಲಕ ಸಲ್ಲಿಸಲಾಗಿದೆ.
ಯುವಜನರ ಧರ್ಮಾಂತರದ ವೈವಾಹಿಕ ಜೀವನದ ಆಯ್ಕೆಯ ಸ್ವಾತಂತ್ರ್ಯವನ್ನು ಕಸಿಯುವ ಮತ್ತು ಭಾರತದ ಪ್ರತಿಯೊಬ್ಬ ಪ್ರಜೆಯ ಧಾರ್ಮಿಕ ಹಕ್ಕು ಮತ್ತು ಸ್ವಾತಂತ್ರ್ಯವನ್ನು ನಿರ್ಭಂಧಿಸುವ ಮತ್ತು ಇನ್ನೂ ಹತ್ತು ಹಲವು ಒತ್ತಾಯಗಳು ಮತ್ತು ಹೇರಿಕೆಗಳ ಮೂಲಕ ಜನತೆಯಲ್ಲಿ ಆತಂಕ ಮತ್ತು ಅಭದ್ರತೆಯ ವಾತಾವರಣ ಸೃಷ್ಟಿಸಲು ಕಾರಣವಾಗಿರುವ ಮತಾಂತರ ನಿಷೇಧ ಎಂಬ ಭಯೋತ್ಪಾದಕ ಕಾಯ್ದೆಯನ್ನು ಜಾರಿಗೊಳಿಸಿದ್ದೇ ಆದಲ್ಲಿ, ಎಸ್.ಡಿ.ಪಿ.ಐ ನಾಡಿನ ಸರ್ವ ಜನರ ಹಿತದೃಷ್ಟಿಯಿಂದ ಘನ ಉಚ್ಛ ನ್ಯಾಯಾಲಯದಲ್ಲಿ ಪ್ರಶ್ನಿಸಲು ನಿರ್ಧರಿಸಿದೆ.
ಮತಾಂತರ ನಿಷೇಧ ಕಾಯ್ದೆಯು ವಿಧಾನ ಪರಿಷತ್ತಿನಲ್ಲಿ ಚರ್ಚೆಗೆ ಬಂದಾಗ ವಿರೋಧ ಪಕ್ಷಗಳಾದ ಕಾಂಗ್ರೆಸ್ ಮತ್ತು ಜೆಡಿಎಸ್ ಯಾವುದೇ ಕುಂಟು ನೆಪಗಳನ್ನು ಹೇಳದೇ, ಸಭೆಯನ್ನು ಬಹಿಷ್ಕರಿಸದೇ, ತನ್ನ ಎಲ್ಲಾ ಸದಸ್ಯರಿಗೂ ವಿಪ್ ಜಾರಿಗೊಳಿಸಿ ಮತಾಂತರ ನಿಷೇಧ ಕಾಯ್ದೆಯ ಚರ್ಚೆಯಲ್ಲಿ ಕಡ್ಡಾಯವಾಗಿ ಬಾಗವಹಿಸುವಂತೆ ನೋಡಿಕೊಳ್ಳಬೇಕು. ವಿಧಾನಸಭೆಯಲ್ಲಿ ಸದರಿ ಮಸೂದೆಯ ಕರಡನ್ನು ಮಂಡಿಸಿದಾಗ ಕಾಂಗ್ರೆಸ್ನ ಪ್ರಮುಖ ನಾಯಕರುಗಳಾದ ಸಿದ್ದರಾಮಯ್ಯ ಮತ್ತು ಡಿ.ಕೆ ಶಿವಕುಮಾರ್ ಅವರು ಹಾಜರಿರದೆ ಮಸೂದೆಯು ಮಂಡನೆಯಾದ ಮೇಲೆ ತಡವಾಗಿ ಸಭೆಗೆ ಆಗಮಿಸಿ, ನಮ್ಮಿಂದ ಮಸೂದೆಯನ್ನು ಮುಚ್ಚಿಟ್ಟು, ಚರ್ಚೆಗೆ ಅವಕಾಶ ನೀಡದೇ ಮಸೂದೆಯನ್ನು ಮಂಡಿಸಲಾಗಿದೆ ಎಂದು ತಕರಾರು ತೆಗೆದು ಮಾತನಾಡಿರುವ ಬಗ್ಗೆ ಎಸ್.ಡಿ.ಪಿ.ಐ ಗಮನಿಸಿದೆ. ಇದು ತಪ್ಪು. ಸಭೆಗೆ ಸರಿಯಾದ ಸಮಯಕ್ಕೆ ಆಗಮಿಸಿ ಕರಡು ಮಂಡನೆಯಾಗದಂತೆ ನೋಡಿಕೊಳ್ಳಬೇಕಾಗಿದ್ದು ಅವರ ಜವಾಬ್ದಾರಿ ಆಗಿತ್ತು. ಈಗಲಾದರೂ ಮಸೂದೆಯು ವಿಧಾನ ಪರಿಷತ್ತಿಗೆ ಚರ್ಚೆಗೆ ಬಂದಾಗ, ಯಾವ ನೆಪವನ್ನೂ ಹೇಳದೇ ವಿರೋಧ ಪಕ್ಷದ ಸರ್ವ ಸದಸ್ಯರು ಖುದ್ದು ಹಾಜರಿದ್ದು ಮಸೂದೆಯನ್ನು ವಿರೋಧಿಸಿ, ಪರಿಷತ್ತಿನಲ್ಲಿ ತಿರಸ್ಕಾರವಾಗುವಂತೆ ನೋಡಿಕೊಳ್ಳಬೇಕೆಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮೈಸೂರು ಅವರು ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.
Ambedkar Jatha-3 احتجاجی اجلاس | 15اگست Belagavi | 10:30 AM سورنا سودها مطالبات 2B ریزرویشن…
DEMAND'S MEET | 15th DECEMBER BELAGAVI 10:30 AM Suvarna Soudha DEMANDS Restore the 2B Reservation…
Ambedkar Jatha-3 Ehtijaji Ajlas BELAGAVI 10:30 AM Suvarna Soudha DEMANDS 2B Reservation ko dobara bahal…
ಚಲೋ ಬೆಳಗಾವಿ ಅಂಬೇಡ್ಕರ್ ಜಾಥಾ – 3 📍 VENUE: Kudachi | Public Program SDPIKarnataka #AmbedkarJatha3 #chalobelagavi
Ambedkar Jatha-3 BJP ಮುಸ್ಲಿಮ್ ದ್ವೇಷದ ಭಾಗವಾಗಿ ಹಕ್ಕುಗಳನ್ನು ಕಸಿದುಕೊಳ್ಳುತ್ತದೆ ಮತ್ತು ಮುಸ್ಲಿಮ್ ವಿರೋಧಿ ಮಸೂದೆಗಳನ್ನು ಜಾರಿಗೊಳಿಸುತ್ತದೆ. ಕಾಂಗ್ರೆಸ್ ಬಿಜೆಪಿ…
SDPI Karnataka SDPI ಹಲವು ಬೇಡಿಕೆಗಳೊಂದಿಗೆ ಕಿತ್ತೂರ ಚೆನ್ನಮ್ಮಳ ಮಣ್ಣಿನಿಂದ ಚಲೋ ಬೆಳಗಾವಿ ಅಂಬೇಡ್ಕರ್ ಜಾಥಾವನ್ನು ಆರಂಭಿಸಿ ಸುವರ್ಣ ಸೌಧಕ್ಕೆ…