ಪತ್ರಿಕಾ ಪ್ರಕಟಣೆ:-ಕ್ರೈಸ್ತ ಸಮುದಾಯದ ವಿರುದ್ಧದ ದೌರ್ಜನ್ಯ ತಕ್ಷಣ ನಿಲ್ಲಿಸಿ: ಎಂ.ಕೆ.ಫೈಝಿ

ನವದೆಹಲಿ, ಡಿಸೆಂಬರ್ 29, 2021: ಕ್ರಿಶ್ಚಿಯನ್ ಸಮುದಾಯದ ವಿರುದ್ಧ ದೇಶಾದ್ಯಂತ ಇತ್ತೀಚೆಗೆ ನಡೆದ ಹಿಂಸಾಚಾರದ ಘಟನೆ ತೀವ್ರ ಖಂಡನೀಯವಾಗಿದ್ದು, ಸಂಘ ಪರಿವಾರವು ದೇಶದ ಕ್ರಿಶ್ಚಿಯನ್ ಸಮುದಾಯ ಸೇರಿದಂತೆ ಎಲ್ಲಾ ಅಲ್ಪಸಂಖ್ಯಾತರ ಮೇಲೆ ನಡೆಸುತ್ತಿರುವ ಜನಾಂಗೀಯ ಹಿಂಸಾಚಾರವನ್ನು ತಕ್ಷಣ ನಿಲ್ಲಿಸಬೇಕು ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ರಾಷ್ಟ್ರೀಯ ಅಧ್ಯಕ್ಷ ಎಂ.ಕೆ.ಫೈಝಿ ಒತ್ತಾಯಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಭಾರತದಲ್ಲಿ ಕ್ರಿಶ್ಚಿಯನ್ ಸಮುದಾಯದ ಮೇಲಿನ ದಾಳಿಗಳು ಮುಸ್ಲಿಮರ ಮೇಲಿನ ದಾಳಿಯಷ್ಟು ವ್ಯಾಪಕವಾಗಿಲ್ಲದಿದ್ದರೂ ಹೊಸ ವಿಷಯವೇನಲ್ಲ. ದೇಶದಲ್ಲಿ ಮುಸ್ಲಿಮರು ಸ್ವಾತಂತ್ರ್ಯಪೂರ್ವದಲ್ಲಿಯೇ ಸಂಘಪರಿವಾರದ ನಿರಂತರ ಆಕ್ರಮಣಗಳಿಗೆ ತುತ್ತಾಗಿದ್ದಾರೆ. ಆದರೆ ಸ್ವಾತಂತ್ರ್ಯದ ನಂತರ ಮುಸ್ಲಿಮರ ವಿರುದ್ಧದ ದಾಳಿಗಳು ಮತ್ತಷ್ಟು ತೀವ್ರಗೊಂಡಿವೆ ಮತ್ತು ಕ್ರಿಶ್ಚಿಯನ್ನರ ಮೇಲೆ ದಾಳಿಗಳು ಆರಂಭಗೊಂಡಿವೆ ಎಂದು ತಿಳಿಸಿದ್ದಾರೆ.*ಆರೆಸ್ಸೆಸ್ಸ್ ನ ಸೈದ್ಧಾಂತಿಕ ಗುರು ಮತ್ತು ಎರಡನೇ ಸರಸಂಘಚಾಲಕ ಗೋಳ್ವಾಲ್ಕರ್ ಪ್ರಕಾರ ಕ್ರಿಶ್ಚಿಯನ್ನರು ದೇಶದ ಎರಡನೇ ಆಂತರಿಕ ಶತ್ರುವಾಗಿದ್ದಾರೆ. ಆದ್ದರಿಂದ, ಕ್ರಿಶ್ಚಿಯನ್ನರು ಈ ಮತಾಂಧರ ಹೊಸ ಬೇಟೆಯೇನಲ್ಲ. ಈ ಬಾರಿಯ ಕ್ರಿಸ್ಮಸ್ ಸಂದರ್ಭದಲ್ಲಿ ದೇಶಾದ್ಯಂತ ಕ್ರಿಶ್ಚಿಯನ್ ಸಮುದಾಯ ಮತ್ತು ಅವರ ಆರಾಧನಾ ಸ್ಥಳಗಳ ಮೇಲೆ ಭಯೋತ್ಪಾದಕ ಹಿಂದುತ್ವ ಫ್ಯಾಶಿಸ್ಟ್ ಶಕ್ತಿಗಳು ವಿಧ್ವಂಸಕ ಕೃತ್ಯ ಮತ್ತು ಹಿಂಸಾಚಾರವೆಸಗಿದವು. ಬಿಜೆಪಿ ಆಡಳಿತವಿರುವ ರಾಜ್ಯಗಳಲ್ಲಿ ಕ್ರಿಸ್ಮಸ್ ಮುನ್ನಾದಿನ ಮತ್ತು ಕ್ರಿಸ್ಮಸ್ ದಿನದಂದು ಏಳು ದಾಳಿ ಪ್ರಕರಣಗಳು ನಡೆದ ಬಗ್ಗೆ ವರದಿಯಾಗಿವೆ.ಅವುಗಳಲ್ಲಿ ಕೆಲವು: • ಆಗ್ರಾದಲ್ಲಿ, ತೀವ್ರ-ಬಲಪಂಥೀಯ ಹಿಂದುತ್ವ ಸಂಘಟನೆಯ ಸದಸ್ಯರು ಮಿಷನರಿ ಶಾಲೆಯ ಹೊರಗೆ ಸಾಂತಾ ಕ್ಲಾಸ್ ಪ್ರತಿಕೃತಿಗೆ ಬೆಂಕಿ ಹಚ್ಚಿ ಸುಟ್ಟುಹಾಕಿದರು.• ಅಸ್ಸಾಮ್ ನಲ್ಲಿ ಇಬ್ಬರು ಪ್ರತಿಭಟನಕಾರರು ಕೇಸರಿ ವಸ್ತ್ರಧರಿಸಿ ಕ್ರಿಸ್ಮಸ್ ಮುನ್ನಾದಿನ ಚರ್ಚ್ ಗೆ ಅತಿಕ್ರಮ ಪ್ರವೇಶಿಸಿ ಕ್ರಿಸ್ಮಸ್ ಪೂಜಾ ಪ್ರಕ್ರಿಯೆಗೆ ಅಡ್ಡಿಪಡಿಸಿದರು.• ಹರಿಯಾಣದಲ್ಲಿ ಕ್ರಿಸ್ಮಸ್ ಮುನ್ನಾದಿನದಂದು ಪಟೌಡಿಯ ಶಾಲೆಯಲ್ಲಿ ಸಂಜೆ ಕ್ರಿಸ್ಮಸ್ ಆಚರಣೆ ನಡೆಯುತ್ತಿದ್ದಾಗ “ಜೈ ಶ್ರೀ ರಾಮ್” ಘೋಷಣೆ ಕೂಗುತ್ತಾ ಶಾಲೆಗೆ ನುಗ್ಗಿದ ಬಲಪಂಥೀಯ ಗುಂಪಿನ ಸದಸ್ಯರು ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದರು.• ಉತ್ತರ ಪ್ರದೇಶದ ಮತ್ರಿಧಾಮ ಆಶ್ರಮದಲ್ಲಿ ನಡೆಯುತ್ತಿದ್ದ ಕ್ರಿಸ್ಮಸ್ ಕಾರ್ಯಕ್ರಮಕ್ಕೂ ಹಿಂದೂ ಜಾಗರಣ ವೇದಿಕೆಯ ಕಾರ್ಯಕರ್ತರು ಅಡ್ಡಿಪಡಿಸಿದ್ದು, ಆಶ್ರಮದ ಹೊರಗೆ ಜಮಾಯಿಸಿ “ಮತಾಂತರವನ್ನು ನಿಲ್ಲಿಸಿ” ಮತ್ತು “ಮಿಷನರಿ ಮುರ್ದಾಬಾದ್” ಎಂಬ ಘೋಷಣೆಗಳನ್ನು ಕೂಗಿದ್ದರು.2014ರಲ್ಲಿ ಬಿಜೆಪಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಂತರ ಕ್ರೈಸ್ತರ ಮೇಲಿನ ದಾಳಿಗಳು ಹೆಚ್ಚಾಗಿವೆ. ವರದಿಯೊಂದರ ಪ್ರಕಾರ, ಕ್ರಿಶ್ಚಿಯನ್ನರ ವಿರುದ್ಧದ ಅಪರಾಧಗಳು 2016 ರಿಂದ 2019 ರವರೆಗೆ ಶೇಕಡಾ 60 ರಷ್ಟು ಹೆಚ್ಚಾಗಿದೆ.ಎಫ್ ಸಿಆರ್ ಎ ನೋಂದಣಿಯನ್ನು ನವೀಕರಿಸಲು ಸಲ್ಲಿಸಿದ್ದ ಅರ್ಜಿಯನ್ನು ತಿರಸ್ಕರಿಸುವ ಮೂಲಕ ಮದರ್ ತೆರೇಸಾ ಅವರ ಮಿಷನರೀಸ್ ಆಫ್ ಚಾರಿಟಿಯ ದತ್ತಿ ಚಟುವಟಿಕೆಗಳನ್ನು ನಿಗ್ರಹಿಸುವ ಪ್ರಯತ್ನ ಬಲಪಂಥೀಯ ಹಿಂದುತ್ವವಾದಿಗಳ ಕ್ರಿಶ್ಚಿಯನ್ ವಿರೋಧಿ ನಿಲುವಿನ ಅತ್ಯಂತ ಆಘಾತಕಾರಿ ಸುದ್ದಿಯಾಗಿದೆ.ಸಂಘ ಪರಿವಾರವು ಮುಸ್ಲಿಮರ ವಿರುದ್ಧ ನಡೆಸುವ ಕೆಟ್ಟ ದ್ವೇಷದ ಮಾದರಿಯನ್ನೇ ಅವರು ಕ್ರಿಶ್ಚಿಯನ್ನರ ವಿರುದ್ಧವೂ ಅನುಸರಿಸುತ್ತಿದ್ದಾರೆ. ಆರೆಸ್ಸೆಸ್ ಸಂಘಟನೆ, ದ್ವೇಷ, ಜನಾಂಗೀಯತೆ ಮತ್ತು ಧಾರ್ಮಿಕ-ದ್ವೇಷದ ಸಿದ್ಧಾಂತದೊಂದಿಗೆ ಬೆಳೆದು ಬಂದಿದೆ. ಅವರ ಅಂತಿಮ ಉದ್ದೇಶ ಇತರ ಧಾರ್ಮಿಕ ಸಮುದಾಯಗಳಿಂದ ಮುಕ್ತವಾದ ಜನಾಂಗೀಯ ಶ್ರೇಷ್ಠತೆಯ ಬ್ರಾಹ್ಮಣವಾದಿ ಹಿಂದುತ್ವ ರಾಷ್ಟ್ರವಾಗಿದೆ. ಅವರು ದೇಶದಲ್ಲಿ ಹಿಂದೂ ಹೊರತಪಡಿಸಿ ಇತರ ಎಲ್ಲಾ ಧಾರ್ಮಿಕ ಸಮುದಾಯಗಳನ್ನು ನಿರ್ಮೂಲನೆ ಮಾಡಲು ಸಿದ್ಧರಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.ದೇಶದಲ್ಲಿ ಶಾಂತಿ ಮತ್ತು ಸೌಹಾರ್ದತೆಯಿಂದ ಬದುಕಲು, ಆರೆಸ್ಸೆಸ್ ನ ಹಿಂಸಾಚಾರದ ಸಂತ್ರಸ್ತರು ತಕ್ಷಣ ಎಚ್ಚೆತ್ತುಕೊಂಡು ತಮ್ಮ ನೈಜ ಶತ್ರುವನ್ನು ಅರ್ಥಮಾಡಿಕೊಂಡು ಒಗ್ಗಟ್ಟಿನಿಂದ ಪ್ರತಿರೋಧಿಸಿ, ಆರೆಸ್ಸೆಸ್ ನೇತೃತ್ವದ ತೀವ್ರ ಬಲಪಂಥೀಯ ಹಿಂದುತ್ವ ಪಡೆಗಳ ಜನಾಂಗೀಯ ಕಾರ್ಯಸೂಚಿಯನ್ನು ಸೋಲಿಸಲು ಇದು ಸಕಾಲ ಎಂದು ಎಂ.ಕೆ. ಫೈಝಿ ಹೇಳಿದ್ದಾರೆ.ಕೇಂದ್ರ ಕಚೇರಿಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

admin

Recent Posts

“Everyone’s Contribution is Essential for Social Transformation – Afsar Kodlipete”

Press Release Gulbarga, Sept 11:At the SDPI leaders’ meeting held in Gulbarga today, the party’s…

1 day ago

ಪತ್ರಿಕಾ ಪ್ರಕಟಣೆ<br><br>“ಸಮಾಜ ಪರಿವರ್ತನೆಗೆ ಪ್ರತಿಯೊಬ್ಬರ ಕೊಡುಗೆ ಅಗತ್ಯ – ಅಪ್ಸರ್ ಕೊಡ್ಲಿಪೇಟೆ”<br><br>ಗುಲ್ಬರ್ಗಾ, ಸೆಪ್ಟೆಂಬರ್ 11:<br>ಇಂದು ಗುಲ್ಬರ್ಗಾದಲ್ಲಿ ನಡೆದ ಎಸ್‌ಡಿಪಿಐ ನಾಯಕರ ಸಭೆಯಲ್ಲಿ, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಅವರು “ಸಮಾಜ ಪರಿವರ್ತನೆಗೆ ಪ್ರತಿಯೊಬ್ಬರ ಕೊಡುಗೆ” ಎಂಬ ವಿಷಯದ ಕುರಿತು ಪ್ರಮುಖ ಭಾಷಣ ಮಾಡಿದರು.<br><br>ತಮ್ಮ ಭಾಷಣದಲ್ಲಿ ಅವರು ಹೇಳಿದರು:<br>“ಸಮಾಜದಲ್ಲಿ ಬದಲಾವಣೆ ತರಲು ಕೇವಲ ಕನಸು ಕಾಣುವುದು ಸಾಕಾಗುವುದಿಲ್ಲ. ಪ್ರತಿಯೊಬ್ಬರೂ ತಮ್ಮದೇ ಆದ ಕೊಡುಗೆಯನ್ನು ನೀಡಿದಾಗ ಮಾತ್ರ ನಿಜವಾದ ಬದಲಾವಣೆ ಸಾಧ್ಯ. ಬದಲಾವಣೆಯ ಹಾದಿ ದೀರ್ಘ ಮತ್ತು ಕಠಿಣವಾಗಿದ್ದರೂ, ಇದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ನ್ಯಾಯ, ಸಮಾನತೆ ಮತ್ತು ಸಹೋದರತ್ವವನ್ನು ಸ್ಥಾಪಿಸಲು ನಂಬಿಕೆ, ಶ್ರಮ ಮತ್ತು ಬದ್ಧತೆ ಅಗತ್ಯ. ಎಸ್‌ಡಿಪಿಐ ಸದಸ್ಯರು ತಮ್ಮ ಸಮಯ, ಶಕ್ತಿ ಮತ್ತು ಸಂಪನ್ಮೂಲಗಳನ್ನು ಸಮಾಜಮುಖಿ ಹೋರಾಟಗಳಿಗೆ ಸಮರ್ಪಿಸಬೇಕು.”<br><br>“ಇಂದಿಗೂ ಸಾವಿರಾರು ಹಿಂದುಳಿದವರು, ಅಲ್ಪಸಂಖ್ಯಾತರು ಮತ್ತು ಬಡವರು ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ. ಅವರ ಹಕ್ಕುಗಳಿಗಾಗಿ ನಮ್ಮ ಕಾರ್ಯಕರ್ತರು ಪೊಲೀಸ್ ದೌರ್ಜನ್ಯ, ಸುಳ್ಳು ಕೇಸುಗಳು ಮತ್ತು ಬಂಧನಗಳನ್ನು ಸಹಿಸಿಕೊಂಡಿದ್ದಾರೆ. ಇದು ಅವರ ಬದ್ಧತೆಯ ಸಾಕ್ಷಿಯಾಗಿದೆ. ಎಸ್‌ಡಿಪಿಐ ಕೇವಲ ರಾಜಕೀಯ ಪಕ್ಷವಲ್ಲ, ಇದು ಶೋಷಿತರ ಕೂಗಿನ ಪ್ರತಿಧ್ವನಿ, ಸಾಮಾನ್ಯ ಜನರ ಕನಸುಗಳ ಪ್ರತೀಕ. ಹೀಗಾಗಿ ಪ್ರತಿಯೊಬ್ಬ ನಾಯಕ, ಕಾರ್ಯಕರ್ತ ಮತ್ತು ಅಭಿಮಾನಿ ತಮ್ಮ ಪಾತ್ರವನ್ನು ಅರಿತು, ಈ ಬದಲಾವಣೆಯ ಹಾದಿಯಲ್ಲಿ ತಮ್ಮದೇ ಆದ ಕೊಡುಗೆಯನ್ನು ನೀಡಬೇಕು,” ಎಂದು ಅವರು ಒತ್ತಿಹೇಳಿದರು.<br><br>ಸಭೆಯಲ್ಲಿ ಕಲಬುರಗಿ ಜಿಲ್ಲೆಯ ರೈತರ ಮೇಲಿನ ನಡೆಯುತ್ತಿರುವ ವಂಚನೆಗಳ ವಿಷಯವೂ ಚರ್ಚಿಸಲಾಯಿತು. ರೈತ ಸಂಪರ್ಕ ಕೇಂದ್ರಗಳಲ್ಲಿ ಅವಧಿ ಮೀರಿದ ಕ್ರಿಮಿನಾಶಕ ಮತ್ತು ಗೊಬ್ಬರಗಳನ್ನು ರೈತರಿಗೆ ಮಾರಾಟ ಮಾಡಲಾಗುತ್ತಿದೆ. ಕೆಲ ಅಂಗಡಿಗಳು ಎಂಆರ್‌ಪಿ ದರಕ್ಕಿಂತ ಎರಡು ಪಟ್ಟು ಹಣ ಪಡೆದು ಗೊಬ್ಬರವನ್ನು ಮಾರಾಟ ಮಾಡುತ್ತಿರುವುದು ಗಂಭೀರ ಅನ್ಯಾಯವಾಗಿದೆ ಎಂದು ಜಿಲ್ಲಾಧ್ಯಕ್ಷ ಮೊಹಮ್ಮದ್ ಮೋಹಿಸಿನ್ ಖಂಡಿಸಿದರು. ರೈತರನ್ನು ಮೋಸಗೊಳಿಸಿದ ಅಂಗಡಿ ಮಾಲೀಕರು ಮತ್ತು ಕೃಷಿ ಇಲಾಖೆಯ ನಿರ್ಲಕ್ಷ್ಯಕ್ಕೆ ವಿರುದ್ಧವಾಗಿ ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಭೆಯಲ್ಲಿ ಒತ್ತಾಯಿಸಲಾಯಿತು.<br><br>ಇದರ ಜೊತೆಗೆ ರೈತರ ಸಂಕಷ್ಟ, ನಿರುದ್ಯೋಗ, ಶಿಕ್ಷಣ ಮತ್ತು ಆರೋಗ್ಯದ ವಿಚಾರಗಳ ಮೇಲೂ ಚರ್ಚೆ ನಡೆಯಿತು.<br><br>ಈ ಸಂದರ್ಭದಲ್ಲಿ ಎಸ್‌ಡಿಪಿಐ ರಾಷ್ಟ್ರೀಯ ಸಮಿತಿ ಸದಸ್ಯೆ ಪ್ರೊಫೆಸರ್ ಸೈಯದಾ ಸಾದಿಯಾ ಹಾಗೂ ರಾಜ್ಯ ಸಮಿತಿ ಸದಸ್ಯ ಅಬ್ದುಲ್ ರಹೀಮ್ ಪಟೇಲ್ ರವರು ಸಂಘಟನೆಯ ಬಲವರ್ಧನೆ ಮತ್ತು ನಿಧಿ ಸಂಗ್ರಹಣೆಯ ಅಗತ್ಯತೆಯ ಕುರಿತು ಮಾತನಾಡಿದರು.<br><br>ಜಿಲ್ಲಾ ಉಪಾಧ್ಯಕ್ಷ ಮಕ್ಬೂಲ್ ಅಹ್ಮದ್, ಪ್ರಧಾನ ಕಾರ್ಯದರ್ಶಿಗಳಾದ ಡಾ. ರಿಜ್ವಾನ್ ಮತ್ತು ಇಬ್ರಾಹಿಂ ಪಟೇಲ್, ವುಮೆನ್ ಇಂಡಿಯಾ ಮೂವ್‌ಮೆಂಟ್ ಜಿಲ್ಲಾ ಅಧ್ಯಕ್ಷೆ ಸೇರಿದಂತೆ ಜಿಲ್ಲಾ ಸಮಿತಿ ಸದಸ್ಯರು ಮತ್ತು ವಿಧಾನಸಭಾ ಕ್ಷೇತ್ರ ಮಟ್ಟದ ನಾಯಕರು ಸಕ್ರಿಯವಾಗಿ ಪಾಲ್ಗೊಂಡಿದ್ದರು.

1 day ago

بار بار آر ایس ایس کے جال میں پھنستی ہوئی ریاستی کانگریس حکومت ۔قربانی کے بکرے بن رہے ہیں مسلمان

پریس ریلیز بنگلورو : 10 ستمبر : کرناٹک میں کانگریس حکومت تقریباً 95% مسلم برادری…

2 days ago

PRESS RELEASE

BAAR BAAR RSS KE JAAL MEIN PHANS'TI HUI RIYAASTI CONGRESS HUKUMAT -QURBANI KE BAKRAY BAN…

2 days ago

ಪತ್ರಿಕಾ ಪ್ರಕಟಣೆ

ಮತ್ತೆ ಮತ್ತೆ ಆರ್ ಎಸ್ಎಸ್ ಖೇಡ್ದಾಕ್ಕೆ ಬೀಳುತ್ತಿರುವ ರಾಜ್ಯ ಕಾಂಗ್ರೇಸ್ ಸರ್ಕಾರ - ಬಲಿ ಪಶುಗಳಾಗುತ್ತಿರುವ ಮುಸ್ಲಿಮರು ಬೆಂಗಳೂರು :…

2 days ago

ರಾಯಚೂರು ನಾಯಕರ ಸಭೆ

ರಾಯಚೂರಿನಲ್ಲಿ ನಡೆದ ನಾಯಕರ ಸಭೆಯಲ್ಲಿ ರಾಜ್ಯ ಉಪಾಧ್ಯಕ್ಷರಾದ ಅಬ್ದುಲ್ ಹನ್ನಾನ್, ರಾಜ್ಯ ನಾಯಕರು ಅಬ್ದುಲ್ ರಹೀಮ್ ಪಟೇಲ್ ಹಾಗೂ ಅಕ್ಟರ್‌…

5 days ago