ವಿಧಾನಸಭಾ ಚುನಾವಣೆಯ ಫಲಿತಾಂಶವು ಜಾತ್ಯಾತೀತ ಪಕ್ಷಗಳ ದುರ್ಬಲತೆಯನ್ನು ಬಹಿರಂಗಗೊಳಿಸಿದೆ: ಎಂ.ಕೆ ಫೈಝಿ

ಪಂಚ ರಾಜ್ಯಗಳ ಚುನಾವಣಾ ಫಲಿತಾಂಶವು ಆಶ್ಚರ್ಯಕರ ಅಥವಾ ಅನಿರೀಕ್ಷಿತವೇನು ಅಲ್ಲ. ನಿಜವಾಗಿಯೂ ಇದು ಸ್ವಯಂ ಘೋಷಿತ ಜಾತ್ಯತೀತ ಪಕ್ಷಗಳ ಅಸಮರ್ಥತೆ ಮತ್ತು ದೌರ್ಬಲ್ಯವನ್ನು ಬಯಲುಗೊಳಿಸಿವೆ ಅಲ್ಲದೇ, ಬಿಜೆಪಿಯ ಯಶಸ್ಸನ್ನೇನಲ್ಲ. ಫ್ಯಾಸಿಸ್ಟರನ್ನು ಪ್ರತಿರೋಧಿಸುವುದರಲ್ಲಿ ಮತ್ತು ಸೋಲಿಸುವುದರಲ್ಲಿ ಬಹಿರಂಗಗೊಂಡ ವಿಫಲತೆಯನ್ನು ಇವಿಎಮ್ ನ್ನು ಬೊಟ್ಟು ಮಾಡಿ ಕೈ ತೊಳೆದುಕೊಳ್ಳಲಾಗದು. ಈವರೆಗೂ ಕಳೆದ ಏಳು ವರ್ಷಗಳಲ್ಲಿ ಈ ಪಕ್ಷಗಳು ಧನಾತ್ಮಕವಾದದ್ದನ್ನು ಏನು ಕಲಿತುಕೊಂಡಿಲ್ಲ. ಎಲ್ಲಾ ಬಿಜೆಪಿಯೇತರ ಪಕ್ಷಗಳು ಬಿಜೆಪಿಯೊಂದಿಗೆ ಸ್ನೇಹದಾಟ ಆಡಿಕೊಂಡಿದ್ದರು ಎಂಬುವುದು ಈ ಫಲಿತಾಂಶದಿಂದ ಗೋಚರಿಸುತ್ತದೆ. ಈ ಎಲ್ಲಾ ಪಕ್ಷಗಳು ಬಲಪಂಥೀಯ ಹಿಂದುತ್ವ ಫ್ಯಾಸಿಸ್ಟರ ವಿರುದ್ಧ ಐಕ್ಯವಾಗಿ ನಿಲ್ಲುವುದರ ಜೊತೆಗೆ ಭಾರತದ ರಾಜಕೀಯ ರಂಗದಿಂದ ಫ್ಯಾಸಿಸ್ಟರನ್ನು ದೂರವಿಡುವುದರಲ್ಲಿ ಈ ರಾಜಕೀಯ ಪಕ್ಷಗಳು ಮತ್ತು ವಿಫಲಗೊಂಡಿತಿರುವುದೇ ಬಿಜೆಪಿಯ ಗೆಲುವಿಗೆ ಕಾರಣ. ಶತಮಾನದ ಇತಿಹಾಸ ಹೊಂದಿರುವ ಕಾಂಗ್ರೆಸ್ ಗೆ ಇಂದಿಗೂ ರಾಷ್ಟ್ರವ್ಯಾಪಿ ಸಂಘಟಿತ ಸಂಪರ್ಕ ಮತ್ತು ಕಾರ್ಯಕರ್ತರಿದ್ದರೂ, ಪ್ರಸಕ್ತ ರಾಜಕೀಯ ಸನ್ನಿವೇಶಕ್ಕೆ ಅನುಗುಣವಾಗಿ ತಕ್ಕ ತಂತ್ರಗಳನ್ನು ರೂಪಿಸಿಕೊಂಡು ಚುನಾವಣೆಗಳನ್ನು ಎದುರಿಸುವ ಸಮರ್ಥ ನಾಯಕತ್ವದ ಕೊರತೆ ಎದುರಾಗಿದೆ. ಈ ಚುನಾವಣೆಯಲ್ಲಿ, ದೈತ್ಯವಾಗಿ ಬೆಳೆಯುತ್ತಿರುವ ಫ್ಯಾಸಿಸಂನ್ನು ಎದುರಿಸುವ ಕಾರ್ಯಸೂಚಿ ಯಾವ ಪಕ್ಷದ್ದು ಆಗಿರಲಿಲ್ಲ. ಕೇವಲ ಕುತಂತ್ರಗಳ ಮೂಲಕವೇ ಅಧಿಕಾರಕ್ಕೇರುವ ಏಕೈಕ ಗುರಿಯ ಜೊತೆಗೆ ಅವಕಾಶ ಬಂದರೆ ಅಧಿಕಾರಕ್ಕಾಗಿ ಫ್ಯಾಸಿಸ್ಟರ ಜೊತೆಗೂಡಲೂ ಈ ಪಕ್ಷಗಳು ಸಿದ್ಧವಿದೆ. ದೇಶದ ಅಲ್ಪಸಂಖ್ಯಾತ ಮತ್ತು ಹಿಂದುಳಿದ ಸಮುದಾಯಗಳಿಗೆ ಈ ಫಲಿತಾಂಶವು ಬಲವಾದ ಸಂದೇಶವನ್ನು ನೀಡಿದೆ. ‘ಜಾತ್ಯತೀತ’ ಪಕ್ಷಗಳು ತಮ್ಮನ್ನು ಇನ್ನೂ ವೋಟ್ ಬ್ಯಾಂಕ್ ಆಗಿ ಬಳಸುತ್ತಿದ್ದಾರೆ ಎಂಬ ಪ್ರಸಕ್ತತೆಯನ್ನು ಅರಿತುಕೊಳ್ಳುವ ಸಮಯ ಬಂದಿದೆ. ಬಿಜೆಪಿಯೇತರ ಪಕ್ಷಗಳು ಈಗಲೂ ಮೃದು ಹಿಂದುತ್ವ ಪ್ರದರ್ಶಿಸುತ್ತದೆ.ಈ ಪಕ್ಷಗಳ ಕೆಲವು ನಾಯಕರು ಬಲಪಂಥೀಯ ಫ್ಯಾಸಿಸ್ಟರ ಉಗ್ರ ಹಿಂದುತ್ವಕ್ಕೆ ಪರ್ಯಾಯವಾಗಿ ಮೃದು ಹಿಂದುತ್ವ ಎಂಬುವುದನ್ನು ಈ ಪಕ್ಷಗಳ ಕೆಲವು ನಾಯಕರು ಈಗಾಗಲೇ ಹೇಳಿಕೆ ನೀಡಿದ್ದರು. ಪರ್ಯಾಯವಲ್ಲ ಎಂಬ ಸತ್ಯವನ್ನು ಹೇಳಿದ್ದರು. ಫಲಿತಾಂಶಗಳು ಅಸ್ಮಿತೆಯ ರಾಜಕೀಯದ ಅಗತ್ಯತೆಯನ್ನು ಒತ್ತಿಹೇಳುತ್ತಿವೆ. ಚುನಾವಣಾ ಸಂದರ್ಭದಲ್ಲಿ ಸಮಯದಲ್ಲಿ ಮೃದು-ಹಿಂದುತ್ವದ ಸಂಕೋಲೆಗಳಲ್ಲಿ ಸಿಲುಕುವ ಅಲ್ಪಸಂಖ್ಯಾತರು ವಿಶೇಷವಾಗಿ ಮುಸಲ್ಮಾನರು ಈ ಪಕ್ಷಗಳಿಂದಾಗುವ ಅಪಾಯ ಮತ್ತು ಹಾನಿಯನ್ನು ಗುರುತಿಸಬೇಕು ಮತ್ತು ಅಸ್ಮಿತೆ ರಾಜಕಾರಣವನ್ನು ಉತ್ತೇಜಿಸಬೇಕು ಮತ್ತು ನವ ರಾಜಕೀಯ ಚಳುವಳಿಗಳನ್ನು ದೃಢತೆಯಿಂದ ಬೆಂಬಲಿಸಬೇಕು.ಫಲಿತಾಂಶಗಳ ಮತ್ತೊಂದು ಅತ್ಯಂತ ನಕಾರಾತ್ಮಕ ಸಂದೇಶವೆಂದರೆ ಭಾರತೀಯ ಮತದಾರರು ವಿನಾಶಕಾರಿಯಾಗಿ ಕೋಮುವಾದಕ್ಕೆ ಒಳಗಾಗಿದ್ದಾರೆ ಮತ್ತು ಬಹುಸಂಖ್ಯಾತ ಸಮುದಾಯವು ರಾಜ್ಯ ಅಥವಾ ರಾಷ್ಟ್ರದ ಅಭಿವೃದ್ಧಿಯ ವಿರುದ್ಧ ಮತಾಂಧತೆಗೆ ಆದ್ಯತೆ ನೀಡುತ್ತದೆ. ಆದಿತ್ಯನಾಥ್ ಅವರು ಅಧಿಕಾರಕ್ಕೆ ಬಂದ ನಂತರ ಉತ್ತರ ಪ್ರದೇಶವು ಅತ್ಯಂತ ಹಾನಿಕಾರಕ, ಅತ್ಯಂತ ವಿನಾಶಕಾರಿ ಜನವಿರೋಧಿ ಮತ್ತು ಪ್ರಜಾಪ್ರಭುತ್ವ ವಿರೋಧಿ ಕೃತ್ಯಗಳು ಮತ್ತು ಕ್ರಮಗಳಿಗೆ ಸಾಕ್ಷಿಯಾಗಿದೆ.ಯುಪಿಯಲ್ಲಿ ಕಳೆದ ಐದು ವರ್ಷಗಳಲ್ಲಿ ಬಲಪಂಥೀಯ ಐಟಿ ಪ್ಲಾಟ್‌ಫಾರ್ಮ್‌ಗಳನ್ನು ಹೊರತುಪಡಿಸಿದರೆ, ರಾಜ್ಯದಲ್ಲಿ ಅಭಿವೃದ್ಧಿ ಮತ್ತು ಜನರಿಗೆ ಧನಾತ್ಮಕವಾದ ಏನೂ ವರದಿಯಾಗಿಲ್ಲ.ಈ ಅವಧಿಯಲ್ಲಿ ಪ್ರಮಾಣಾನುಗುಣವಾಗಿ ಬೆಳೆದದ್ದು ಮತಾಂಧತೆ, ಧರ್ಮಾಂಧತೆ, ದ್ವೇಷ, ಸ್ತ್ರೀದ್ವೇಷ, ಅಲ್ಪಸಂಖ್ಯಾತರು ಮತ್ತು ದಲಿತರ ಮೇಲಿನ ದೌರ್ಜನ್ಯಗಳು ಮತ್ತು ತೋರಿಪಡಿಕೆಯ ಕೆಲವು ಪ್ರದರ್ಶನಗಳು ಮಾತ್ರವಾಗಿದೆ.ಇನ್ನೂ, ಉತ್ತರ ಪ್ರದೇಶದ ಬಹುಪಾಲು ಜನರು ಅದೇ ಪಕ್ಷವನ್ನು ಅಧಿಕಾರಕ್ಕೆ ಆಯ್ಕೆ ಮಾಡಿರುವುದು ಇಡೀ ರಾಷ್ಟ್ರಕ್ಕೆ ಒಳ್ಳೆಯ ಶಕುನವಲ್ಲ.ಬಿಜೆಪಿ ವಿರೋಧಿ ರಾಜಕೀಯ ಪಕ್ಷಗಳು ಅಧಿಕಾರಕ್ಕಿಂತ ಜನಪರವಾಗಿರಬೇಕು ಮತ್ತು ರಾಷ್ಟ್ರವನ್ನು ಫ್ಯಾಸಿಸಂನ ಗ್ರಹಣಾಂಗಗಳಿಂದ ರಕ್ಷಿಸಲು ಒಗ್ಗಟ್ಟಿನ ಮತ್ತು ಬಲವಾದ ಕಾರ್ಯತಂತ್ರವನ್ನು ಯೋಜಿಸಬೇಕೆಂದು ಎಸ್.ಡಿ.ಪಿ.ಐ ಒತ್ತಾಯಿಸುತ್ತದೆ.ಬಿಜೆಪಿ ವಿರೋಧಿ ಎಲ್ಲಾ ರಾಜಕೀಯ ಪಕ್ಷಗಳು ಅಧಿಕಾರಕ್ಕಿಂತ ಜನ ಪರ ನಿಲುವು ತಾಳಬೇಕು ಮತ್ತು ಫ್ಯಾಸಿಸಂನ ಕಬಂದಬಾಹುಗಳಿಂದ ದೇಶವನ್ನು ರಕ್ಷಿಸಲು ಒಗ್ಗಟ್ಟಿನ ಮತ್ತು ದೃಢವಾದ ಕಾರ್ಯತಂತ್ರವನ್ನು ರೂಪಿಸಬೇಕು ಎಂದು ಎಸ್ ಡಿಪಿಐ ಒತ್ತಾಯಿಸುತ್ತದೆ. ಪಂಚ ರಾಜ್ಯಗಳ ಚುನಾವಣಾ ಫಲಿತಾಂಶದ ಸಂದೇಶವನ್ನು ಅರ್ಥ ಮಾಡಿಕೊಳ್ಳಬೇಕು ಮತ್ತು ದೇಶದ ಪ್ರಗತಿ ಮತ್ತು ಅಭಿವೃದ್ಧಿಯನ್ನು ಗುರಿಯಾಗಿಟ್ಟುಕೊಂಡಿರುವ ಮತ್ತು ವಿವಿಧತೆಯಲ್ಲಿ ಏಕತೆಯನ್ನು ಪೋಷಿಸುವ ಭಾರತದ ನಿರ್ಮಾಣದಲ್ಲಿ ಮತ್ತು ತಾರತಮ್ಯವಿಲ್ಲದೆ ತನ್ನ ಎಲ್ಲಾ ನಾಗರಿಕರಿಗೆ ಸಮಾನ ಹಕ್ಕುಗಳನ್ನು ಹೊಂದಿರುವ ಭಾರತದ ನಿರ್ಮಾಣದಲ್ಲಿ ತೊಡಗಿರುವ ಜನಪರ ಪಕ್ಷಗಳು ಮತ್ತು ಚಳುವಳಿಗಳಲ್ಲಿ ಸೇರಬೇಕು ಮತ್ತು ಎಸ್ ಡಿಪಿಐ ದೇಶದ ಮತಾಂಧೇತರ ಬಹುಸಂಖ್ಯಾತರನ್ನು ಒತ್ತಾಯಿಸುತ್ತದೆ.

admin

Recent Posts

“Everyone’s Contribution is Essential for Social Transformation – Afsar Kodlipete”

Press Release Gulbarga, Sept 11:At the SDPI leaders’ meeting held in Gulbarga today, the party’s…

1 day ago

ಪತ್ರಿಕಾ ಪ್ರಕಟಣೆ<br><br>“ಸಮಾಜ ಪರಿವರ್ತನೆಗೆ ಪ್ರತಿಯೊಬ್ಬರ ಕೊಡುಗೆ ಅಗತ್ಯ – ಅಪ್ಸರ್ ಕೊಡ್ಲಿಪೇಟೆ”<br><br>ಗುಲ್ಬರ್ಗಾ, ಸೆಪ್ಟೆಂಬರ್ 11:<br>ಇಂದು ಗುಲ್ಬರ್ಗಾದಲ್ಲಿ ನಡೆದ ಎಸ್‌ಡಿಪಿಐ ನಾಯಕರ ಸಭೆಯಲ್ಲಿ, ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಸರ್ ಕೊಡ್ಲಿಪೇಟೆ ಅವರು “ಸಮಾಜ ಪರಿವರ್ತನೆಗೆ ಪ್ರತಿಯೊಬ್ಬರ ಕೊಡುಗೆ” ಎಂಬ ವಿಷಯದ ಕುರಿತು ಪ್ರಮುಖ ಭಾಷಣ ಮಾಡಿದರು.<br><br>ತಮ್ಮ ಭಾಷಣದಲ್ಲಿ ಅವರು ಹೇಳಿದರು:<br>“ಸಮಾಜದಲ್ಲಿ ಬದಲಾವಣೆ ತರಲು ಕೇವಲ ಕನಸು ಕಾಣುವುದು ಸಾಕಾಗುವುದಿಲ್ಲ. ಪ್ರತಿಯೊಬ್ಬರೂ ತಮ್ಮದೇ ಆದ ಕೊಡುಗೆಯನ್ನು ನೀಡಿದಾಗ ಮಾತ್ರ ನಿಜವಾದ ಬದಲಾವಣೆ ಸಾಧ್ಯ. ಬದಲಾವಣೆಯ ಹಾದಿ ದೀರ್ಘ ಮತ್ತು ಕಠಿಣವಾಗಿದ್ದರೂ, ಇದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ನ್ಯಾಯ, ಸಮಾನತೆ ಮತ್ತು ಸಹೋದರತ್ವವನ್ನು ಸ್ಥಾಪಿಸಲು ನಂಬಿಕೆ, ಶ್ರಮ ಮತ್ತು ಬದ್ಧತೆ ಅಗತ್ಯ. ಎಸ್‌ಡಿಪಿಐ ಸದಸ್ಯರು ತಮ್ಮ ಸಮಯ, ಶಕ್ತಿ ಮತ್ತು ಸಂಪನ್ಮೂಲಗಳನ್ನು ಸಮಾಜಮುಖಿ ಹೋರಾಟಗಳಿಗೆ ಸಮರ್ಪಿಸಬೇಕು.”<br><br>“ಇಂದಿಗೂ ಸಾವಿರಾರು ಹಿಂದುಳಿದವರು, ಅಲ್ಪಸಂಖ್ಯಾತರು ಮತ್ತು ಬಡವರು ನ್ಯಾಯಕ್ಕಾಗಿ ಹೋರಾಟ ನಡೆಸುತ್ತಿದ್ದಾರೆ. ಅವರ ಹಕ್ಕುಗಳಿಗಾಗಿ ನಮ್ಮ ಕಾರ್ಯಕರ್ತರು ಪೊಲೀಸ್ ದೌರ್ಜನ್ಯ, ಸುಳ್ಳು ಕೇಸುಗಳು ಮತ್ತು ಬಂಧನಗಳನ್ನು ಸಹಿಸಿಕೊಂಡಿದ್ದಾರೆ. ಇದು ಅವರ ಬದ್ಧತೆಯ ಸಾಕ್ಷಿಯಾಗಿದೆ. ಎಸ್‌ಡಿಪಿಐ ಕೇವಲ ರಾಜಕೀಯ ಪಕ್ಷವಲ್ಲ, ಇದು ಶೋಷಿತರ ಕೂಗಿನ ಪ್ರತಿಧ್ವನಿ, ಸಾಮಾನ್ಯ ಜನರ ಕನಸುಗಳ ಪ್ರತೀಕ. ಹೀಗಾಗಿ ಪ್ರತಿಯೊಬ್ಬ ನಾಯಕ, ಕಾರ್ಯಕರ್ತ ಮತ್ತು ಅಭಿಮಾನಿ ತಮ್ಮ ಪಾತ್ರವನ್ನು ಅರಿತು, ಈ ಬದಲಾವಣೆಯ ಹಾದಿಯಲ್ಲಿ ತಮ್ಮದೇ ಆದ ಕೊಡುಗೆಯನ್ನು ನೀಡಬೇಕು,” ಎಂದು ಅವರು ಒತ್ತಿಹೇಳಿದರು.<br><br>ಸಭೆಯಲ್ಲಿ ಕಲಬುರಗಿ ಜಿಲ್ಲೆಯ ರೈತರ ಮೇಲಿನ ನಡೆಯುತ್ತಿರುವ ವಂಚನೆಗಳ ವಿಷಯವೂ ಚರ್ಚಿಸಲಾಯಿತು. ರೈತ ಸಂಪರ್ಕ ಕೇಂದ್ರಗಳಲ್ಲಿ ಅವಧಿ ಮೀರಿದ ಕ್ರಿಮಿನಾಶಕ ಮತ್ತು ಗೊಬ್ಬರಗಳನ್ನು ರೈತರಿಗೆ ಮಾರಾಟ ಮಾಡಲಾಗುತ್ತಿದೆ. ಕೆಲ ಅಂಗಡಿಗಳು ಎಂಆರ್‌ಪಿ ದರಕ್ಕಿಂತ ಎರಡು ಪಟ್ಟು ಹಣ ಪಡೆದು ಗೊಬ್ಬರವನ್ನು ಮಾರಾಟ ಮಾಡುತ್ತಿರುವುದು ಗಂಭೀರ ಅನ್ಯಾಯವಾಗಿದೆ ಎಂದು ಜಿಲ್ಲಾಧ್ಯಕ್ಷ ಮೊಹಮ್ಮದ್ ಮೋಹಿಸಿನ್ ಖಂಡಿಸಿದರು. ರೈತರನ್ನು ಮೋಸಗೊಳಿಸಿದ ಅಂಗಡಿ ಮಾಲೀಕರು ಮತ್ತು ಕೃಷಿ ಇಲಾಖೆಯ ನಿರ್ಲಕ್ಷ್ಯಕ್ಕೆ ವಿರುದ್ಧವಾಗಿ ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಭೆಯಲ್ಲಿ ಒತ್ತಾಯಿಸಲಾಯಿತು.<br><br>ಇದರ ಜೊತೆಗೆ ರೈತರ ಸಂಕಷ್ಟ, ನಿರುದ್ಯೋಗ, ಶಿಕ್ಷಣ ಮತ್ತು ಆರೋಗ್ಯದ ವಿಚಾರಗಳ ಮೇಲೂ ಚರ್ಚೆ ನಡೆಯಿತು.<br><br>ಈ ಸಂದರ್ಭದಲ್ಲಿ ಎಸ್‌ಡಿಪಿಐ ರಾಷ್ಟ್ರೀಯ ಸಮಿತಿ ಸದಸ್ಯೆ ಪ್ರೊಫೆಸರ್ ಸೈಯದಾ ಸಾದಿಯಾ ಹಾಗೂ ರಾಜ್ಯ ಸಮಿತಿ ಸದಸ್ಯ ಅಬ್ದುಲ್ ರಹೀಮ್ ಪಟೇಲ್ ರವರು ಸಂಘಟನೆಯ ಬಲವರ್ಧನೆ ಮತ್ತು ನಿಧಿ ಸಂಗ್ರಹಣೆಯ ಅಗತ್ಯತೆಯ ಕುರಿತು ಮಾತನಾಡಿದರು.<br><br>ಜಿಲ್ಲಾ ಉಪಾಧ್ಯಕ್ಷ ಮಕ್ಬೂಲ್ ಅಹ್ಮದ್, ಪ್ರಧಾನ ಕಾರ್ಯದರ್ಶಿಗಳಾದ ಡಾ. ರಿಜ್ವಾನ್ ಮತ್ತು ಇಬ್ರಾಹಿಂ ಪಟೇಲ್, ವುಮೆನ್ ಇಂಡಿಯಾ ಮೂವ್‌ಮೆಂಟ್ ಜಿಲ್ಲಾ ಅಧ್ಯಕ್ಷೆ ಸೇರಿದಂತೆ ಜಿಲ್ಲಾ ಸಮಿತಿ ಸದಸ್ಯರು ಮತ್ತು ವಿಧಾನಸಭಾ ಕ್ಷೇತ್ರ ಮಟ್ಟದ ನಾಯಕರು ಸಕ್ರಿಯವಾಗಿ ಪಾಲ್ಗೊಂಡಿದ್ದರು.

1 day ago

بار بار آر ایس ایس کے جال میں پھنستی ہوئی ریاستی کانگریس حکومت ۔قربانی کے بکرے بن رہے ہیں مسلمان

پریس ریلیز بنگلورو : 10 ستمبر : کرناٹک میں کانگریس حکومت تقریباً 95% مسلم برادری…

2 days ago

PRESS RELEASE

BAAR BAAR RSS KE JAAL MEIN PHANS'TI HUI RIYAASTI CONGRESS HUKUMAT -QURBANI KE BAKRAY BAN…

2 days ago

ಪತ್ರಿಕಾ ಪ್ರಕಟಣೆ

ಮತ್ತೆ ಮತ್ತೆ ಆರ್ ಎಸ್ಎಸ್ ಖೇಡ್ದಾಕ್ಕೆ ಬೀಳುತ್ತಿರುವ ರಾಜ್ಯ ಕಾಂಗ್ರೇಸ್ ಸರ್ಕಾರ - ಬಲಿ ಪಶುಗಳಾಗುತ್ತಿರುವ ಮುಸ್ಲಿಮರು ಬೆಂಗಳೂರು :…

2 days ago

ರಾಯಚೂರು ನಾಯಕರ ಸಭೆ

ರಾಯಚೂರಿನಲ್ಲಿ ನಡೆದ ನಾಯಕರ ಸಭೆಯಲ್ಲಿ ರಾಜ್ಯ ಉಪಾಧ್ಯಕ್ಷರಾದ ಅಬ್ದುಲ್ ಹನ್ನಾನ್, ರಾಜ್ಯ ನಾಯಕರು ಅಬ್ದುಲ್ ರಹೀಮ್ ಪಟೇಲ್ ಹಾಗೂ ಅಕ್ಟರ್‌…

5 days ago