ದೇಶದ ಪ್ರಜೆಗಳಿಗಿರುವ ಆಯ್ಕೆಯ ಹಕ್ಕು ಮತ್ತು ಸಾಂವಿಧಾನಿಕವಾಗಿರುವ ವೈಯಕ್ತಿಕ ಹಕ್ಕು ಮತ್ತು ಮೂಲಭೂತ ಹಕ್ಕನ್ನು ಕಡೆಗಣಿಸಿ ವ್ಯಕ್ತಿ ಸ್ವಾತಂತ್ರ್ಯವನ್ನು ಎತ್ತಿ ಹಿಡಿಯುವಲ್ಲಿ ನ್ಯಾಯಾಲಯವು ವಿಫಲವಾಗಿದೆ ಎಂದು ಕರ್ನಾಟಕ ಹೈಕೋರ್ಟ್ ಹಿಜಾಬ್ ಕುರಿತು ನೀಡಿದ ತೀರ್ಪಿನಲ್ಲಿ ರುಜುವಾತಾಗಿದೆ. ಬಿಜೆಪಿ ಸರಕಾರ ಮುಸ್ಲಿಂ ಅಸ್ತಿತ್ವವನ್ನು ಅಪರಾಧಿ ಯಂತೆ ಬಿಂಬಿಸಿ, ಸಮಾಜದೊಳಗೆ ಸಮಸ್ಯೆಯನ್ನು ಹುಟ್ಟು ಹಾಕಿ, ಸಮಾಜದಲ್ಲಿ ಅಶಾಂತಿ ಸೃಷ್ಟಿಸಿ ಕೊನೆಗೆ ಸಂತ್ರಸ್ತರು ನ್ಯಾಯದ ನಿರೀಕ್ಷೆಯಲ್ಲಿ ನ್ಯಾಯಾಲಯದ ಮೊರೆ ಹೋದಾಗ , ನ್ಯಾಯಾಲಯವೂ ರಾಜಕೀಯ ಪ್ರೇರಿತವಾದ ಅಸಂವಿಧಾನಿಕ ತೀರ್ಪನ್ನು ನೀಡಿದೆ. ಇದು ನ್ಯಾಯವ್ಯವಸ್ಥೆಯ ಮೇಲಿರುವ ಅಲ್ಪಸಂಖ್ಯಾತರ ನಂಬಿಕೆಯನ್ನು ನಿರಾಶೆಗೊಳಿಸಿದೆ.ಶಿರವಸ್ತ್ರ ಒಂದು ಸಾಂವಿಧಾನಿಕವಾಗಿರುವ ವೈಯಕ್ತಿಕ ಮತ್ತು ಮೂಲಭೂತ ಹಕ್ಕುಗಳಿಂದ ಕೂಡಿದ ಆಯ್ಕೆಯ ಹಕ್ಕು. ಈ ಹಕ್ಕನ್ನು ನ್ಯಾಯಾಲಯವೇ ಕಸಿಯುತ್ತಿರುವುದು ವಿಷಾದನೀಯ. ಅಗತ್ಯ ಧಾರ್ಮಿಕ ಆಚರಣೆಯ ವಿಚಾರಗಳಲ್ಲಿ ಅಂದರೆ ಶಬರಿ ಮಲೆ ಮಹಿಳಾ ಪ್ರವೇಶ ವಿಚಾರ, ಮುಸ್ಲಿಂ ಹೆಣ್ಣು ಮಕ್ಕಳ ಮಸೀದಿ ಪ್ರವೇಶ ವಿಚಾರ ಮತ್ತು ಪಾರ್ಸಿ ಹೆಣ್ಮಕ್ಕಳ ಅಂತರ್ಜಾತಿ ವಿಚಾರಗಳಲ್ಲಿ ಸರ್ವೋಚ್ಚ ನ್ಯಾಯಾಲಯ ಎಷ್ಟರವರೆಗೆ ಮಧ್ಯ ಪ್ರವೇಶ ಮಾಡಬೇಕು ಅಥವಾ ಇದನ್ನು ಆಯಾ ಧರ್ಮದ ಧಾರ್ಮಿಕ ನಂಬಿಕೆಗಳನ್ನು ಎತ್ತಿ ಹಿಡಿಯಬೇಕಾ ಎಂಬ ವಿಚಾರದಲ್ಲಿ ಒಂದು ಅಂತಿಮ ತೀರ್ಮಾನ ಕೈಗೊಳ್ಳಲು ಬಾಕಿ ಇರುವಾಗಲೇ, ಕರ್ನಾಟಕ ಹೈ ಕೋರ್ಟ್ ಶಿರವಸ್ತ್ರ ಅಗತ್ಯ ಧಾರ್ಮಿಕ ಆಚರಣೆಯ ಭಾಗವಲ್ಲಾ ಎಂದಿರುವುದು ಸಂವಿಧಾನಿಕ ಹಕ್ಕುಗಳ ಮೇಲಿನ ದಾಳಿಯಾಗಿದೆ.2021 /20 22 ರ ಸರಕಾರ ದಾಖಲಾತಿ ನಿಯಮಗಳ ಪ್ರಕಾರ ಪದವಿಪೂರ್ವ ಕಾಲೇಜುಗಳಲ್ಲಿ ಸಮವಸ್ತ್ರ ಕಡ್ಡಾಯವಲ್ಲಾ ಮತ್ತು ಯಾರಾದರೂ ಅದನ್ನು ಉಲ್ಲಂಘಿಸಿದರೆ ಸರಕಾರ ಕ್ರಮ ಕೈಗೊಲ್ಲುತ್ತದೆ ಎಂದು ಆದೇಶ ಇದ್ದರೂ ಕೂಡ, ಏಕಾಏಕಿ ವಿವಾದವೆಬ್ಬಿಸಿ ತಕ್ಷಣದಲ್ಲೇ ಹೊಸ ಆದೇಶ ಹೊರಡಿಸಿದ್ದನ್ನು ಹೈಕೋರ್ಟ್ ಎತ್ತಿ ಹಿಡಿದಿರುವುದು ರಾಜಕೀಯ ಪ್ರೇರಿತ ಆದೇಶ ಎಂಬ ಸಂಶಯಕ್ಕೆ ಹೆಚ್ಚು ಪುಷ್ಠಿಯನ್ನು ನೀಡಿದಂತಾಗಿದೆ.
Press Release Gulbarga, Sept 11:At the SDPI leaders’ meeting held in Gulbarga today, the party’s…
پریس ریلیز بنگلورو : 10 ستمبر : کرناٹک میں کانگریس حکومت تقریباً 95% مسلم برادری…
BAAR BAAR RSS KE JAAL MEIN PHANS'TI HUI RIYAASTI CONGRESS HUKUMAT -QURBANI KE BAKRAY BAN…
ಮತ್ತೆ ಮತ್ತೆ ಆರ್ ಎಸ್ಎಸ್ ಖೇಡ್ದಾಕ್ಕೆ ಬೀಳುತ್ತಿರುವ ರಾಜ್ಯ ಕಾಂಗ್ರೇಸ್ ಸರ್ಕಾರ - ಬಲಿ ಪಶುಗಳಾಗುತ್ತಿರುವ ಮುಸ್ಲಿಮರು ಬೆಂಗಳೂರು :…
ರಾಯಚೂರಿನಲ್ಲಿ ನಡೆದ ನಾಯಕರ ಸಭೆಯಲ್ಲಿ ರಾಜ್ಯ ಉಪಾಧ್ಯಕ್ಷರಾದ ಅಬ್ದುಲ್ ಹನ್ನಾನ್, ರಾಜ್ಯ ನಾಯಕರು ಅಬ್ದುಲ್ ರಹೀಮ್ ಪಟೇಲ್ ಹಾಗೂ ಅಕ್ಟರ್…