ಬೆಂಗಳೂರು ಏ.೧೨: ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ೪೦% ಕಮಿಷನ್ ಆರೋಪ ಮಾಡಿದ್ದ ಬಿಜೆಪಿ ಕರ್ಯರ್ತ ಹಾಗೂ ಗುತ್ತಿಗೆದಾರ ಬೆಳಗಾವಿಯ ಸಂತೋಷ್ ಪಾಟೀಲ್ ‘ಕೆ.ಎಸ್ ಈಶ್ವರಪ್ಪನವರೇ ನನ್ನ ಸಾವಿಗೆ ನೇರ ಕಾರಣ’ ಎಂಬುದಾಗಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಪ್ರೇರಣೆ ಕೇಸನ್ನು ದಾಖಲಿಸಿ ಸಚಿವ ಕೆ.ಎಸ್ ಈಶ್ವರಪ್ಪರನ್ನು ಕೂಡಲೇ ಬಂಧಿಸಬೇಕೆಂದು ಸೋಶಿಯಲ್ ಡೆಮಾಕ್ರೆಟಿಕ್ ಪರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಒತ್ತಾಯಿಸಿದ್ದಾರೆ.
ಸಂತೋಷ್ ಪಾಟೀಲ್ ಕಳೆದ ಒಂದು ರ್ಷದಿಂದ ೪೦% ಕಮಿಷನ್ ಬಗ್ಗೆ ಪೀಡಿಸುತ್ತಿರುವ ವಿಚಾರವಾಗಿ ನಿರಂತರ ಹೋರಾಟ ನಡೆಸುತ್ತಿದ್ದು ಪ್ರಧಾನಮಂತ್ರಿ ನರೇಂದ್ರ ಮೋದಿಗೂ ಪತ್ರವನ್ನು ಬರೆದಿದ್ದರು, ಮಾತ್ರವಲ್ಲ ಬಿಜೆಪಿಯ ಹಿರಿಯ ಮುಖಂಡರುಗಳನ್ನು ಭೇಟಿಯಾಗಿ ನ್ಯಾಯಕ್ಕಾಗಿ ಆಗ್ರಹಿಸಿದ್ದರು. ಆದರೆ ಇದುವರೆಗೆ ಬಿಜೆಪಿಯದೇ ಕರ್ಯರ್ತನಾದ ಸಂತೋಷ್ ಗೆ ಯಾವುದೇ ನ್ಯಾಯ ದೊರಕಿಲ್ಲ ಬದಲಾಗಿ ಆತ್ಮಹತ್ಯೆಗೆ ಪ್ರೇರಣೆ ಲಭಿಸಿತ್ತು ಎಂದು ಅವರ ಡೆತ್ ನೋಟಿನಿಂದ ಬಹಿರಂಗವಾಗುತ್ತದೆ.
‘ಹಿಂದೂ ನಾವೆಲ್ಲರೂ ಒಂದು’ ಎನ್ನುತ್ತಾ ನಿರಂತರ ಕೋಮುದ್ವೇಷವನ್ನು ಬಿತ್ತುತ್ತಿರುವ ಸಂಘಪರಿವಾರಿಗಳಿಗೆ, ತಾಕತ್ತಿದ್ದರೆ ನಿಮ್ಮದೇ ಬಿಜೆಪಿ ಕರ್ಯರ್ತ ಸಂತೋಷ್ ಪಾಟೀಲ್ ಸಾವಿನ ನ್ಯಾಯಕ್ಕಾಗಿ, ಕೆ.ಎಸ್ ಈಶ್ವರಪ್ಪರನ್ನು ಬಂಧಿಸಬೇಕೆಂದು ಆಗ್ರಹಿಸಿ ಬೀದಿಗಿಳಿದು ಪ್ರತಿಭಟನೆಗಳನ್ನು ನಡೆಸಿ ಎಂದು ಅಬ್ದುಲ್ ಮಜೀದ್ ನೇರ ಸವಾಲನ್ನು ಹಾಕಿದ್ದಾರೆ.
ریاست کے عوام کی جانب سے ہمارے مطالبات: ایس آئی ٹی (خصوصی تحقیقاتی ٹیم) کی…
SIT ತನಿಖೆಯ ಮೇಲುಸ್ತುವಾರಿ ಹೈಕೋರ್ಟ್ ನ್ಯಾಯಾಧೀಶರಿಂದ ನಡೆಯಬೇಕು ಈ ಕೇಸ್ ಗೆ ವಿಶೇಷ ಸರ್ಕಾರಿ ಅಭಿಯೋಜಕರನ್ನು ನೇಮಿಸಬೇಕು ಈ ಕೇಸನ್ನು…
(20/07/2025) ಟ್ವಿಟ್ಟರ್ ಅಭಿಯಾನವನ್ನು ಮುಂದೂಡಲಾಗಿದೆ ಧರ್ಮಸ್ಥಳ ಪ್ರಕರಣ – ಎಸ್ಡಿಪಿಐ ಪ್ರತಿಕ್ರಿಯೆ ಧರ್ಮಸ್ಥಳದಲ್ಲಿ ನೂರಾರು ಹೆಣ್ಣುಮಕ್ಕಳ ಅಸಹಜ ಸಾವುಗಳು, ಅತ್ಯಾಚಾರ…
ಮೌನವನ್ನು ಮುರಿಯೋಣ ಸತ್ಯಕ್ಕೆ ಧ್ವನಿಯಾಗೋಣಆತ್ಮೀಯರೇ, ಧರ್ಮಸ್ಥಳದಲ್ಲಿ ಬೆಳಕಿಗೆ ಬಂದಿರುವ ಹೃದಯವಿದ್ರಾವಕ ಘಟನೆಗಳು ಅನೇಕ ಯುವತಿಯರು ಮತ್ತು ಮಹಿಳೆಯರ ಮೇಲೆ ನಡೆದ…