ಆತ್ಮಹತ್ಯೆಗೆ ಪ್ರೇರಣೆ’ ಕ್ರಿಮಿನಲ್ ಕೇಸು ದಾಖಲಿಸಿ ಕೆ.ಎಸ್ ಈಶ್ವರಪ್ಪರನ್ನು ಕೂಡಲೇ ಬಂಧಿಸಿ: ಎಸ್.ಡಿ.ಪಿ.ಐ


ಬೆಂಗಳೂರು ಏ.೧೨: ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ಧ ೪೦% ಕಮಿಷನ್ ಆರೋಪ ಮಾಡಿದ್ದ ಬಿಜೆಪಿ ಕರ‍್ಯರ‍್ತ ಹಾಗೂ ಗುತ್ತಿಗೆದಾರ ಬೆಳಗಾವಿಯ ಸಂತೋಷ್ ಪಾಟೀಲ್ ‘ಕೆ.ಎಸ್ ಈಶ್ವರಪ್ಪನವರೇ ನನ್ನ ಸಾವಿಗೆ ನೇರ ಕಾರಣ’ ಎಂಬುದಾಗಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದು, ಆತ್ಮಹತ್ಯೆಗೆ ಪ್ರೇರಣೆ ಕೇಸನ್ನು ದಾಖಲಿಸಿ ಸಚಿವ ಕೆ.ಎಸ್ ಈಶ್ವರಪ್ಪರನ್ನು ಕೂಡಲೇ ಬಂಧಿಸಬೇಕೆಂದು ಸೋಶಿಯಲ್ ಡೆಮಾಕ್ರೆಟಿಕ್ ಪರ‍್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಒತ್ತಾಯಿಸಿದ್ದಾರೆ.
ಸಂತೋಷ್ ಪಾಟೀಲ್ ಕಳೆದ ಒಂದು ರ‍್ಷದಿಂದ ೪೦% ಕಮಿಷನ್ ಬಗ್ಗೆ ಪೀಡಿಸುತ್ತಿರುವ ವಿಚಾರವಾಗಿ ನಿರಂತರ ಹೋರಾಟ ನಡೆಸುತ್ತಿದ್ದು ಪ್ರಧಾನಮಂತ್ರಿ ನರೇಂದ್ರ ಮೋದಿಗೂ ಪತ್ರವನ್ನು ಬರೆದಿದ್ದರು, ಮಾತ್ರವಲ್ಲ ಬಿಜೆಪಿಯ ಹಿರಿಯ ಮುಖಂಡರುಗಳನ್ನು ಭೇಟಿಯಾಗಿ ನ್ಯಾಯಕ್ಕಾಗಿ ಆಗ್ರಹಿಸಿದ್ದರು. ಆದರೆ ಇದುವರೆಗೆ ಬಿಜೆಪಿಯದೇ ಕರ‍್ಯರ‍್ತನಾದ ಸಂತೋಷ್ ಗೆ ಯಾವುದೇ ನ್ಯಾಯ ದೊರಕಿಲ್ಲ ಬದಲಾಗಿ ಆತ್ಮಹತ್ಯೆಗೆ ಪ್ರೇರಣೆ ಲಭಿಸಿತ್ತು ಎಂದು ಅವರ ಡೆತ್ ನೋಟಿನಿಂದ ಬಹಿರಂಗವಾಗುತ್ತದೆ.
‘ಹಿಂದೂ ನಾವೆಲ್ಲರೂ ಒಂದು’ ಎನ್ನುತ್ತಾ ನಿರಂತರ ಕೋಮುದ್ವೇಷವನ್ನು ಬಿತ್ತುತ್ತಿರುವ ಸಂಘಪರಿವಾರಿಗಳಿಗೆ, ತಾಕತ್ತಿದ್ದರೆ ನಿಮ್ಮದೇ ಬಿಜೆಪಿ ಕರ‍್ಯರ‍್ತ ಸಂತೋಷ್ ಪಾಟೀಲ್ ಸಾವಿನ ನ್ಯಾಯಕ್ಕಾಗಿ, ಕೆ.ಎಸ್ ಈಶ್ವರಪ್ಪರನ್ನು ಬಂಧಿಸಬೇಕೆಂದು ಆಗ್ರಹಿಸಿ ಬೀದಿಗಿಳಿದು ಪ್ರತಿಭಟನೆಗಳನ್ನು ನಡೆಸಿ ಎಂದು ಅಬ್ದುಲ್ ಮಜೀದ್ ನೇರ ಸವಾಲನ್ನು ಹಾಕಿದ್ದಾರೆ.

admin

Recent Posts

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ -…

9 hours ago

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ

ಬೆಂಗಳೂರಿನಲ್ಲಿ ನಡೆದ ಎರಡು ದಿನಗಳ 03 & 04 ಆಗಸ್ಟ್ 2026 ರಾಜ್ಯ ಕಾರ್ಯಕಾರಿಣಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯ -…

9 hours ago

ರಾಜ್ಯ ಸರ್ಕಾರದವಾರಂಟ್ ಮುಗಿಸಿದ ಗ್ಯಾರಂಟಿ ಸ್ಕೀಮ್‌ಗಳುSDPI ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ನೇತೃತ್ವದಲ್ಲಿ ಪತ್ರಿಕಾಗೋಷ್ಠಿ

ಗ್ಯಾರೆಂಟಿ ಸ್ಕೀಮ್‌ ಗಳ ಹೆಸರಲ್ಲಿ ಜನರನ್ನು ಕಚೇರಿಗಳ ಮುಂದೆ ನಿಲ್ಲಿಸಿ ರಾಜ್ಯ ಸರ್ಕಾರ ಅಮಾನವೀಯವಾಗಿ ವರ್ತಿಸುತ್ತಿದೆ; ಸರ್ಕಾರಗಳು ಬರೀ ಡಾಕ್ಯುಮೆಂಟ್…

15 hours ago