ಬೆಂಗಳೂರು ಏ.18: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಅಶಾಂತಿ ಸೃಷ್ಟಿಸುವ ಮತ್ತು ಕೋಮು ಗಲಭೆ ನಡೆಸುವ ಏಕೈಕ ಉದ್ದೇಶದೊಂದಿಗೆ ಸಂಘಪರಿವಾರದ ಕಿಡಿಗೇಡಿಯೊಬ್ಬ ಕೋಮುಪ್ರಚೋದನಕಾರಿ ಪೋಸ್ಟನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಯ ಬಿಟ್ಟು, ಇನ್ನೊಂದು ಸಮುದಾಯ ಕೆರಳುವಂತೆ ಮಾಡಿದ ಪೈಶಾಚಿಕ ಕೃತ್ಯವನ್ನು ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಬಲವಾಗಿ ಖಂಡಿಸುತ್ತದೆ ಎಂದು ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಹೇಳಿದ್ದಾರೆ
ಪ್ರಚೋದನಾಕಾರಿ ಪೋಸ್ಟನ್ನು ಹರಿಯಬಿಟ್ಟ ಕಿಡಿಗೇಡಿಯನ್ನು ಮತ್ತು ಆ ಕೃತ್ಯವನ್ನು ಮಾಡಲು ಪ್ರಚೋದಿಸಿದ ಕಾಣದ ಕೈಗಳಿಗೆ ಕಾನೂನಿನ ಬೇಡಿಯನ್ನು ಹಾಕುವಂತೆ ಒತ್ತಾಯಿಸಿ ಅಲ್ಲಿನ ಸ್ಥಳೀಯರು ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯ ಎದುರು ನಡೆಸಿದ ಶಾಂತಿಯುತ ಪ್ರತಿಭಟನೆಯ ಸಂದರ್ಭದಲ್ಲಿ ಯಾರೋ ದುಷ್ಕರ್ಮಿಗಳು ಕಲ್ಲುಗಳನ್ನು ಎಸೆದಿದ್ದು ಪ್ರತಿಭಟನೆಯ ದಿಕ್ಕು ತಪ್ಪಿಸಲಾಗಿದೆ. ಈ ಘಟನೆಯನ್ನು ನೆಪವಾಗಿಟ್ಟುಕೊಂಡು ಸಂಪೂರ್ಣ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿ ಪೊಲೀಸರು ನಡೆಸುತ್ತಿರುವ ದಾಳಿ ಖಂಡನಾರ್ಹ. ಹಾಗೂ ಕೆಲ ಮಾಧ್ಯಮಗಳಲ್ಲಿ ಪ್ರತಿಭಟನಕಾರರನ್ನು ವಿಲನ್ ಗಳಾಗಿ ಬಿಂಬಿಸುತ್ತಿರುವುದು ಅತ್ಯಂತ ಖೇದಕರ ಎಂದು ಅಬ್ದುಲ್ ಮಜೀದ್ ಅಭಿಪ್ರಾಪಟ್ಟಿದ್ದಾರೆ.
ಪೊಲೀಸ್ ಇಲಾಖೆ ಘಟನೆಗೆ ಕಾರಣಕರ್ತರಾದ ನೈಜ ಕಿಡಿಗೇಡಿಗಳನ್ನು ಬಂಧಿಸದೆ ಮುಸ್ಲಿಂ ಸಮುದಾಯದ ಅಮಾಯಕ ಯುವಕರನ್ನು ಬಂಧಿಸುತ್ತಿರುವುದು ಗಮನಿಸಿದರೆ, ಇದು ಎಂದಿನಂತೆ ಪೊಲೀಸ್ ಇಲಾಖೆಯ ಪೂರ್ವಗ್ರಹ ಪೀಡಿತ ಕ್ರಮದ ಮುಂದುವರಿದ ಭಾಗವಾಗಿದೆ. ಘಟನೆಯ ನೆಪವೊಡ್ಡಿಕೊಂಡು ರಾತ್ರಿ ಹೊತ್ತು ಅಮಾಯಕರ ಮನೆಗಳಿಗೆ ಪೊಲೀಸರು ನುಗ್ಗಿ ವೃದ್ಧರು, ಮಹಿಳೆಯರು, ಮಕ್ಕಳಿಗೆ ಅನಗತ್ಯ ತೊಂದರೆ ನೀಡುತ್ತಿರುವುದನ್ನು ನಿಲ್ಲಿಸಬೇಕು. ಸಮಾಜದಲ್ಲಿ ಸ್ವಾಸ್ಥ್ಯ ಕದಡುತ್ತಿರುವ ಮತ್ತು ಅದಕ್ಕೆ ಪ್ರೇರಣೆ ನೀಡುತ್ತಿರುವ ನೈಜ ಕಿಡಿಗೇಡಿಗಳನ್ನು ಹುಡುಕಿ ಅವರ ವಿರುದ್ಧ ಕಠಿಣ ಕ್ರಮ ಜರುಗಿಸಿದರೆ ಮಾತ್ರ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ. ಆದ್ದರಿಂದ ಈ ನಿಟ್ಟಿನಲ್ಲಿ ಹುಬ್ಬಳ್ಳಿ ಪೊಲೀಸ್ ಅಧಿಕಾರಿಗಳು ಕಾರ್ಯ ನಿರ್ವಹಿಸಬೇಕು ಎಂದು ಅಬ್ದುಲ್ ಮಜೀದ್ ಆಗ್ರಹಿಸಿದ್ದಾರೆ.
Press Release Gulbarga, Sept 11:At the SDPI leaders’ meeting held in Gulbarga today, the party’s…
پریس ریلیز بنگلورو : 10 ستمبر : کرناٹک میں کانگریس حکومت تقریباً 95% مسلم برادری…
BAAR BAAR RSS KE JAAL MEIN PHANS'TI HUI RIYAASTI CONGRESS HUKUMAT -QURBANI KE BAKRAY BAN…
ಮತ್ತೆ ಮತ್ತೆ ಆರ್ ಎಸ್ಎಸ್ ಖೇಡ್ದಾಕ್ಕೆ ಬೀಳುತ್ತಿರುವ ರಾಜ್ಯ ಕಾಂಗ್ರೇಸ್ ಸರ್ಕಾರ - ಬಲಿ ಪಶುಗಳಾಗುತ್ತಿರುವ ಮುಸ್ಲಿಮರು ಬೆಂಗಳೂರು :…
ರಾಯಚೂರಿನಲ್ಲಿ ನಡೆದ ನಾಯಕರ ಸಭೆಯಲ್ಲಿ ರಾಜ್ಯ ಉಪಾಧ್ಯಕ್ಷರಾದ ಅಬ್ದುಲ್ ಹನ್ನಾನ್, ರಾಜ್ಯ ನಾಯಕರು ಅಬ್ದುಲ್ ರಹೀಮ್ ಪಟೇಲ್ ಹಾಗೂ ಅಕ್ಟರ್…