Categories: Uncategorized

ಎಸ್.ಡಿ.ಪಿ.ಐ ಪಕ್ಷಕ್ಕೆ 50ಕ್ಕೂ ಹೆಚ್ಚು ಯುವ ಹೋರಾಟಗಾರರ ಸೇರ್ಪಡೆ

12 ಆಗಸ್ಟ್ 2021: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡ ಬಳ್ಳಾಪುರದಲ್ಲಿ ಎಸ್.ಡಿ.ಪಿ.ಐ ಪಕ್ಷದ ವತಿಯಿಂದ ಆಯೋಜಿಸಿದ ರಾಜಕೀಯ ಚಿಂತನ ಮಂಥನ ಸಭೆಯಲ್ಲಿ ಭಾಗವಹಿಸಿದ್ದ ಯುವ ಹೋರಾಟಗಾರರು ಹಾಗೂ ಸಮುದಾಯದ ಮುಖಂಡರು ಸೇರಿದಂತೆ 50ಕ್ಕೂ ಹೆಚ್ಚು ಮಂದಿ ಪಕ್ಷದ ತತ್ವ ಸಿದ್ದಾಂತಗಳನ್ನು ಒಪ್ಪಿಕೊಂಡು ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಗೊಂಡರು. ರಾಜ್ಯ ಕಾರ್ಯದರ್ಶಿಯಾದ ಅಬ್ರಾರ್ ಅಹ್ಮದ್ ಪಕ್ಷದ ತತ್ವಸಿದ್ದಾಂತ ಮತ್ತು ಜನಪರ ರಾಜಕೀಯ ಚಳುವಳಿ ಕುರಿತು ವಿಚಾರ ಮಂಡಿಸಿದರು. ಪಕ್ಷದ ಶಾಲು ಹೊದಿಸಿ ನೂತನವಾಗಿ ಪಕ್ಷಕ್ಕೆ ಸೇರ್ಪಡೆಗೊಂಡ ಸದಸ್ಯರನ್ನು ಬರಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಸಮಿತಿ ಸದಸ್ಯರಾದ ಫಯಾಜ್ ಅಹ್ಮದ್, ಬೆಂಗಳೂರು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಲೀಮ್ ಅಹ್ಮದ್, ಜಿಲ್ಲಾ ಸಮಿತಿ ಸದಸ್ಯರಾದ ಉಮ್ಮರ್ ಫಾರೂಕ್ ಹಾಗೂ ದೊಡ್ಡ ಬಳ್ಳಾಪುರದ ಸ್ಥಳೀಯ ನಾಯಕ ಇಸ್ಮಾಯಿಲ್ ಉಪಸ್ಥಿತರಿದ್ದರು.
#JoinSDPI #SDPIKarnataka

admin

Recent Posts

ಜ್ಞಾನವಾಪಿ ಮಸೀದಿ – ರಾಜ್ಯದಾದ್ಯಂತ ಪ್ರತಿಭಟನೆ

ಜ್ಞಾನವಾಪಿ ಮಸೀದಿ ರಾಜ್ಯದಾದ್ಯಂತ ಪ್ರತಿಭಟನೆಫೆಬ್ರವರಿ 2024 ಒಳನುಸುಳುವಿಕೆ ಮತ್ತು ಅತಿಕ್ರಮಣ ಅಪಾಯಕಾರಿಪೂಜಾ ಸ್ಥಳಗಳ ಕಾಯಿದೆಯನ್ನು ಜಾರಿಗೊಳಿಸಿ

9 months ago

ಹುತಾತ್ಮರ ದಿನ – 2024

1948 ರ ಈ ದಿನ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಕೃತ್ಯಕ್ಕೆ ಗಾಂಧೀಜಿ ಬಲಿಯಾದ ದಿನ ಇಂದು. ತಮ್ಮ ಅಹಿಂಸಾ ಮಾರ್ಗದ…

9 months ago

ಹುತಾತ್ಮರ ದಿನ – 2024

1948 ರ ಈ ದಿನ ಸ್ವತಂತ್ರ ಭಾರತದ ಮೊದಲ ಭಯೋತ್ಪಾದಕ ಕೃತ್ಯಕ್ಕೆ ಗಾಂಧೀಜಿ ಬಲಿಯಾದ ದಿನ ಇಂದು. ತಮ್ಮ ಅಹಿಂಸಾ…

9 months ago