Categories: featureNewsPolitics

ಮಾಜಿ ಸಚಿವೆ, ಖ್ಯಾತ ಹೋರಾಟಗಾರ್ತಿ ಬಿ.ಟಿ. ಲಲಿತಾ ನಾಯ್ಕ್ ಅವರಿಗೆ ಕೊಲೆ ಬೆದರಿಕೆ ಖಂಡನೀಯಉನ್ನತ ಮಟ್ಟದ ಭದ್ರತೆ ಒದಗಿಸಿ : SDPI

ಜುಲೈ 4: ಮಾಜಿ ಸಚಿವೆ, ಹೋರಾಟಗಾರ್ತಿ ಬಿ.ಟಿ. ಲಲಿತಾ ನಾಯ್ಕ್ ಅವರಿಗೆ ಕೊಲೆ ಬೆದರಿಕೆ ಬಂದಿರುವುದು ಆತಂಕಕಾರಿ ವಿಷಯ.
ಕರ್ನಾಟಕದಲ್ಲಿ ಹಿರಿಯ ಸಾಹಿತಿ ಎಂ.ಎಂ. ಕಲಬುರ್ಗಿ, ಖ್ಯಾತ ಹೋರಾಟಗಾರ್ತಿ, ಲೇಖಕಿ ಗೌರಿ ಲಂಕೇಶ್ ಹತ್ಯೆಗಳು ನಡೆಯುವ ಮುಂಚೆ ಹಲವಾರು ಸಂದರ್ಭದಲ್ಲಿ ಅವರಿಗೂ ಜೀವ ಬೆದರಿಕೆ ಕರೆಗಳು, ಬೆದರಿಕೆ ಪತ್ರಗಳು ಬಂದಿದ್ದವು. ಆದರೆ ಅಂದಿನ ಸರ್ಕಾರ ಅವರಿಗೆ ಸೂಕ್ತ ರಕ್ಷಣೆ ಕೊಡಲಿಲ್ಲ ಮತ್ತು ಆ ಬಗ್ಗೆ ನಿರ್ಲಕ್ಷ್ಯ ವಹಿಸಿತು. ಈ ಕಾರಣದಿಂದಾಗಿ ನಾಡಿನ ಘನ ವ್ಯಕ್ತಿತ್ವಗಳನ್ನು ನಾವು ಕಳೆದುಕೊಳ್ಳಬೇಕಾಯಿತು. ಇಂದು ಅದೇ ಸ್ವರೂಪದ ಜೀವ ಬೆದರಿಕೆ ಕರೆಗಳು, ಪತ್ರಗಳು ಬಿ.ಟಿ ಲಲಿತಾ ನಾಯ್ಕ್ ಅವರಿಗೆ ಬಂದಿವೆ. ಸರಕಾರ ಮತ್ತು ಸಂಬಂಧ ಪಟ್ಟ ಇಲಾಖೆ ಕೂಡಲೇ ಎಚ್ಚೆತ್ತು ಕೊಂಡು ಇದರ ಹಿಂದಿನ ಕೈಗಳನ್ನು ಪತ್ತೆ ಹಚ್ಚಿ ಕ್ರಮ ಕೈಗೊಳ್ಳಬೇಕು ಮತ್ತು ಬಿ.ಟಿ ಲಲಿತಾ ನಾಯ್ಕ್ ಅವರಿಗೆ ಉನ್ನತ ಮಟ್ಟದ ಭದ್ರತೆಯನ್ನು ಒದಗಿಸಿ ಅವರ ಸುರಕ್ಷತೆಯನ್ನು ಖಾತರಿ ಪಡಿಸಬೇಕೆಂದು ಎಸ್.ಡಿ.ಪಿ.ಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಅವರು ಆಗ್ರಹಿಸಿದ್ದಾರೆ.

admin

Recent Posts

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

1 week ago

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

2 weeks ago