Categories: featureNewsPolitics

ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್ಡಿಪಿಐ) ಪಕ್ಷದ ಚಿತ್ರದುರ್ಗ ಜಿಲ್ಲಾ ಕಚೇರಿಯ ಉದ್ಘಾಟನೆಯನ್ನು ಪಕ್ಷದ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು ಅವರು ಇಂದು ನೆರವೇರಿಸಿದರು.


ಈ ಕಾರ್ಯಕ್ರಮದಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ಬಿ. ಆರ್. ಭಾಸ್ಕರ್ ಪ್ರಸಾದ್, ಅಫ್ಸರ್  ಕೊಡ್ಲಿಪೇಟೆ ಅವರು ಉಪಸ್ಥಿತರಿದ್ದರು. ಇದಕ್ಕೂ ಮೊದಲು ಚಳ್ಳಕೆರೆ ಟೋಲ್ ಗೇಟ್ ನಿಂದ ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ ಜಿಲ್ಲಾ ಸಮಿತಿ ಮತ್ತು ಕ್ಷೇತ್ರ ಸಮಿತಿ ಹಾಗೂ ಎಲ್ಲಾ ಕಾರ್ಯಕರ್ತರ ವತಿಯಿಂದ ಮೆರವಣಿಗೆಯ ಮೂಲಕ ರಾಜ್ಯ ನಾಯಕರನ್ನು ಸ್ವಾಗತಿಸಲಾಯಿತು. ಮೆರವಣಿಗೆಯ ಸಮಯದಲ್ಲಿ ಮುಖ್ಯ ರಸ್ತೆಯಲ್ಲಿ ಬರುವಂತಹ ವೀರ ಮದಕರಿನಾಯಕ, ಬಾಬ ಸಾಹೇಬ್ ಅಂಬೇಡ್ಕರ್ ಮತ್ತು ಸಂಗೊಳ್ಳಿ ರಾಯಣ್ಣ ಅವರ ಪುತ್ತಳಿಗಳಿಗೆ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ. ಆರ್. ಭಾಸ್ಕರ್ ಪ್ರಸಾದ್ ಅವರು ಪುಷ್ಪಾರ್ಚನೆ ಮಾಡಿದರು.  ರಾಜ್ಯ ಅಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು ಅವರು ಹೈದರ್ ಷಾ ವಲಿ ದರ್ಗಾಗೆ ಭೇಟಿ ನೀಡಿದರು. ಆ ನಂತರ 12.30ಕ್ಕೆ ಸರಿಯಾಗಿ ಪಕ್ಷದ ಕಚೇರಿಯನ್ನು ಅವರು ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷರಾದ ಬಾಳೆಕಾಯಿ ಶ್ರೀನಿವಾಸ್, ರಾಜ್ಯ ಸಮಿತಿ ಸದಸ್ಯರಾದ ಅಕ್ಬರ್ ಅಲಿ ಗಯಾಸುದ್ದಿನ್, ಪ್ರಧಾನ ಕಾರ್ಯದರ್ಶಿಯಾದ ಸೈಯದ್ ಸಾದತ್, ಉಪಾಧ್ಯಕ್ಷರಾದ ಕಮ್ರಾನ್ ಅಲಿ, ಕ್ಷೇತ್ರ ಸಮಿತಿ ಅಧ್ಯಕ್ಷರಾದ ಜಾಕಿರ್ ಹುಸೇನ್, ಉಪಾಧ್ಯಕ್ಷರಾದ ಫಾಸಿಲ್ ಮತ್ತು ಪಕ್ಷದ ಎಲ್ಲಾ ಕಾರ್ಯಕರ್ತರು ಉಪಸ್ಥಿತರಿದ್ದರು.

admin

Recent Posts

Bantwal mein qatl kiye gaye Raheem ke ghar par SDPI ke riyasati sadar Abdul Majeed ki taʼziyati mulaqat.

Dakshin Kannada District, Bantwal taluka ke Kolatta Majluru mein Sangh Parivar ke Gundon ke haathon…

3 days ago

ಶಾ ಅವರ ಹೇಳಿಕೆ ವಿರೋಧಿಸಿ ಡಿಸೆಂಬರ್ 24ರ ಗುಲಬರ್ಗಾ ಬಂದ್ ಗೆ ಎಸ್‌ಡಿಪಿಐ ಸಂಪೂರ್ಣ ಬೆಂಬಲ

ಗುಲಬರ್ಗಾ: 22 ಡಿಸೆಂಬರ್ 2024. ಸೋಶಿಯಲ್ ಡೆಮೊಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಗುಲ್ಬರ್ಗ ಜಿಲ್ಲಾ ಸಮಿತಿ ಸಭೆಯು ಪಕ್ಷದ…

6 months ago

ನೆನಪು

ಕೆ.ಎಂ. ಶರೀಫ್ ಸಾಬ್ 01.09.1964-22.12.2020 25 ವರ್ಷಗಳ ಹಿಂದೆ ಕರಾವಳಿ ಕರ್ನಾಟಕದಲ್ಲಿ ಸಂಘಪರಿವಾರ ನಿರಂತರ ಕ್ರೌರ್ಯ ಮೆರೆಯುತ್ತಿದ್ದ ಕಾಲ. ಅದನ್ನು…

6 months ago