ಈ ಕಾರ್ಯಕ್ರಮದಲ್ಲಿ ಪಕ್ಷದ ಪ್ರಧಾನ ಕಾರ್ಯದರ್ಶಿಗಳಾದ ಬಿ. ಆರ್. ಭಾಸ್ಕರ್ ಪ್ರಸಾದ್, ಅಫ್ಸರ್ ಕೊಡ್ಲಿಪೇಟೆ ಅವರು ಉಪಸ್ಥಿತರಿದ್ದರು. ಇದಕ್ಕೂ ಮೊದಲು ಚಳ್ಳಕೆರೆ ಟೋಲ್ ಗೇಟ್ ನಿಂದ ಸಂಗೊಳ್ಳಿ ರಾಯಣ್ಣ ವೃತ್ತದವರೆಗೆ ಜಿಲ್ಲಾ ಸಮಿತಿ ಮತ್ತು ಕ್ಷೇತ್ರ ಸಮಿತಿ ಹಾಗೂ ಎಲ್ಲಾ ಕಾರ್ಯಕರ್ತರ ವತಿಯಿಂದ ಮೆರವಣಿಗೆಯ ಮೂಲಕ ರಾಜ್ಯ ನಾಯಕರನ್ನು ಸ್ವಾಗತಿಸಲಾಯಿತು. ಮೆರವಣಿಗೆಯ ಸಮಯದಲ್ಲಿ ಮುಖ್ಯ ರಸ್ತೆಯಲ್ಲಿ ಬರುವಂತಹ ವೀರ ಮದಕರಿನಾಯಕ, ಬಾಬ ಸಾಹೇಬ್ ಅಂಬೇಡ್ಕರ್ ಮತ್ತು ಸಂಗೊಳ್ಳಿ ರಾಯಣ್ಣ ಅವರ ಪುತ್ತಳಿಗಳಿಗೆ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ. ಆರ್. ಭಾಸ್ಕರ್ ಪ್ರಸಾದ್ ಅವರು ಪುಷ್ಪಾರ್ಚನೆ ಮಾಡಿದರು. ರಾಜ್ಯ ಅಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು ಅವರು ಹೈದರ್ ಷಾ ವಲಿ ದರ್ಗಾಗೆ ಭೇಟಿ ನೀಡಿದರು. ಆ ನಂತರ 12.30ಕ್ಕೆ ಸರಿಯಾಗಿ ಪಕ್ಷದ ಕಚೇರಿಯನ್ನು ಅವರು ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ ಜಿಲ್ಲಾಧ್ಯಕ್ಷರಾದ ಬಾಳೆಕಾಯಿ ಶ್ರೀನಿವಾಸ್, ರಾಜ್ಯ ಸಮಿತಿ ಸದಸ್ಯರಾದ ಅಕ್ಬರ್ ಅಲಿ ಗಯಾಸುದ್ದಿನ್, ಪ್ರಧಾನ ಕಾರ್ಯದರ್ಶಿಯಾದ ಸೈಯದ್ ಸಾದತ್, ಉಪಾಧ್ಯಕ್ಷರಾದ ಕಮ್ರಾನ್ ಅಲಿ, ಕ್ಷೇತ್ರ ಸಮಿತಿ ಅಧ್ಯಕ್ಷರಾದ ಜಾಕಿರ್ ಹುಸೇನ್, ಉಪಾಧ್ಯಕ್ಷರಾದ ಫಾಸಿಲ್ ಮತ್ತು ಪಕ್ಷದ ಎಲ್ಲಾ ಕಾರ್ಯಕರ್ತರು ಉಪಸ್ಥಿತರಿದ್ದರು.
Justice for Iqbal ಕಾಶ್ಮೀರದ ಬಗ್ಗೆ ಮಾಧ್ಯಮಗಳ ಮತೀಯವಾದೀ ಪಕ್ಷಪಾತೀಯ ವರದಿಗೆ ಇಲ್ಯಾಸ್ ತುಂಬೆ ಖಂಡನೆ SDPIKarnataka
NRC ಯನ್ನು ಹಿಂಬಾಗಿಲ ಮೂಲಕ ತರುವ ಪಿತೂರಿ ~ಮುಹಮ್ಮದ್ ಶಫಿ,ರಾಷ್ಟ್ರೀಯ ಉಪಾಧ್ಯಕ್ಷರು
ಹುಬ್ಬಳ್ಳಿ: ಜೂನ್ 29, ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಬಾಂಬೆ ಕರ್ನಾಟಕ ಭಾಗದ ಜಿಲ್ಲಾಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳ ವಿಶೇಷ…
ಗದಗ, 26 ಜೂನ್ 2025: ಎಸ್ಡಿಪಿಐ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಪ್ಪರ್ ಕೊಡ್ಲಿಪೇಟೆ ಮತ್ತು ರಾಜ್ಯ ಕಾರ್ಯದರ್ಶಿ ಹಾಗೂ…