Categories: featureNewsPolitics

ಮೈಸೂರು ಗ್ರಾಮಾಂತರ ಹುಣಸೂರು ನಲ್ಲಿ #ಎಸ್ಡಿಪಿಐ ಕಾರ್ಯಕರ್ತರಿಗೆ ಬೇಸಿಕ್ ಎಜುಕೇಶನ್ ಕೋರ್ಸ್ ತರಬೇತಿ ಶಿಬಿರ ಮತ್ತು ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ #ಎಸ್ಡಿಪಿಐ ರಾಜ್ಯ ಸಮಿತಿ ಸದಸ್ಯರಾದ ನೂರುದ್ದೀನ್ ರವರು ಮಾತನಾಡಿ ಎಸ್ ಡಿ ಪಿ ಐ ಪಕ್ಷದ ಉದ್ದೇಶವನ್ನು ವಿವರಿಸಿ ಹಸಿವು ಮುಕ್ತ ಸ್ವಾತಂತ್ರ್ಯ, ಭಯ ಮುಕ್ತ ಸ್ವಾತಂತ್ರ್ಯ,
ಮತ್ತು ಕಾರ್ಯಕರ್ತ ಯಾರು? ಕಾರ್ಯಕರ್ತರು ಯಾಕೆ ಬೇಕು? ಕಾರ್ಯಕರ್ತರ ಗುಣಲಕ್ಷಣಗಳು ಮತ್ತು ಕೇಡರಿನ ವಿಶೇಷತೆಗಳನ್ನು ಸವಿಸ್ತಾರವಾಗಿ ವಿವರಿಸಿದ್ದರು.
ಮೈಸೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಮಜಾಜ಼್ ಅಹಮದ್ ರವರು ಭಾರತದ ಸಾಮಾಜಿಕ ಪ್ರಜಾಪ್ರಭುತ್ವ ಸಿದ್ಧಾಂತ ಮತ್ತು ಪ್ರಾಯೋಗಿಕತೆ ಇದರ ಬಗ್ಗೆ ವಿವರಿಸಿದರು ಸಾಮಾಜಿಕ ನ್ಯಾಯ, ಭ್ರಷ್ಟಾಚಾರ ರಹಿತ ಆಡಳಿತ, ಮಾದರಿ ಜನನಾಯಕರು, ತಾರತಮ್ಯ ರಹಿತ ಸಮಾಜ ನಿರ್ಮಾಣ, ಮೊದಲಾದ ವೈಶಿಷ್ಟ್ಯಗಳ ಪಕ್ಷವಾದ ಎಸ್.ಡಿ.ಪಿ.ಐಯನ್ನು ಎಲ್ಲಾ ಧರ್ಮ-ಜಾತಿ-ಭಾಷೆಯ ಲಕ್ಷಾಂತರ ಜನರು ಬೆಂಬಲಿಸುತ್ತಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ನೂರಾರು ಕಾರ್ಯಕರ್ತರು ಪಕ್ಷಕ್ಕೆ ಸೇರ್ಪಡೆಗೊಂಡರು.
ಈ ತರಬೇತಿ ಶಿಬಿರದಲ್ಲಿ ಮೈಸೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಮಜಾಜ಼್ ಅಹ್ಮದ್, ರಾಜ್ಯ ಸಮಿತಿ ಸದಸ್ಯರಾದ ನೂರುದ್ದೀನ್ , ಜಿಲ್ಲಾ ಉಪಾಧ್ಯಕ್ಷರಾದ ಕಲಂದರ್ ಷರೀಫ್, ಜಿಲ್ಲಾ ಕಾರ್ಯದರ್ಶಿ ಸೈಯದ್ ಅಕ್ಬರ್, ಜಿಲ್ಲಾ ಕಾರ್ಯದರ್ಶಿಯಾದ ಸತೀಶ ಸಣ್ಣಹಳ್ಳಿ ಮತ್ತು ಜಿಲ್ಲಾ ಸಂಘಟನಾ ಕಾರ್ಯದರ್ಶಿ ಲಿಯಾಖತ್ ಅಲಿ ಹುಣಸೂರು ತಾಲೂಕು ಸಮಿತಿಯ ಅಧ್ಯಕ್ಷರಾದ ಮೊಹಮ್ಮದ್ ಅಬ್ರೇಸ್ ಪಿರಿಯಾಪಟ್ಟಣ ತಾಲೂಕು ಸಮಿತಿ ಅಧ್ಯಕ್ಷರಾದ ಮುಬೀರ್ ಹುಣಸೂರು ನಗರಸಭೆಯ ಸದಸ್ಯರಾದ ಸಯ್ಯದ್ ಯೂನುಸ್ ಮತ್ತು ಸಮೀನಾ ಇಮ್ರಾನ್ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಮೈಸೂರು ಗ್ರಾಮಾಂತರ
ಸೆಪ್ಟಂಬರ್ 2 2022

admin

Recent Posts

ಕಟಕ್‌ ದಂಗೆ ಆತಂಕಕಾರಿ – ನಿಷ್ಪಕ್ಷಪಾತ ತನಿಖೆ ಮತ್ತು ಆರೋಪಿಗಳ ವಿರುದ್ಧ ಕಠಿಣ ಕ್ರಮಕ್ಕೆ SDPI ಆಗ್ರಹ

ಒಡಿಶಾದ ಕಟಕ್‌ನಲ್ಲಿ ದುರ್ಗಾ ಪೂಜೆಯ ವಿಗ್ರಹ ಮೆರವಣಿಗೆ ಸಮಯದಲ್ಲಿ ಒಂದು ನಿರ್ದಿಷ್ಟ ಸಮುದಾಯವನ್ನು ಗುರಿಯಾಗಿಸಿ ಮಾಡಿದ ಹಿಂಸಾಚಾರ ಅತ್ಯಂತ ಆತಂಕಕಾರಿ…

22 hours ago

ಮುಖ್ಯ ನ್ಯಾಯಮೂರ್ತಿ ಗವಾಯಿ ಮೇಲೆ ದಾಳಿ ಎಸ್.ಡಿ.ಪಿ.ಐ ಖಂಡನೆ.

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಪ್ರಯತ್ನ ಪಟ್ಟ ಘಟನೆಯನ್ನು ಸೋಶಿಯಲ್ ಡೆಮಾಕ್ರಟಿಕ್…

2 days ago

انصاف کی جیت

کے․جی․ ہلّی اور ڈی․جی․ ہلّی مقدمے میں گرفتار دو افراد کوسپریم کورٹ نے ضمانت منظور…

2 days ago

ಮಹರ್ಷಿ ವಾಲ್ಮೀಕಿ ಜಯಂತಿಯ ಶುಭಾಶಯಗಳು

ನೀವು ಜ್ಞಾನ, ಹಣ, ಪ್ರತಿಷ್ಠೆ, ಶಕ್ತಿಯನ್ನು ಸಂಗ್ರಹಿಸಬಹುದು. ಆದರೆ ಇದೆಲ್ಲದರ ನಡುವೆ ಪ್ರೀತಿಯನ್ನು ಕಳೆದುಕೊಂಡಿದ್ದರೆ ನೀವು ನಿಜವಾದ ಬದುಕನ್ನೇ ಕಳೆದುಕೊಂಡಿದ್ದೀರಿ…

2 days ago

ನ್ಯಾಯದ ಜಯ

ಕೆ.ಜಿ.ಹಳ್ಳಿ ಮತ್ತು ಡಿ.ಜೆ.ಹಳ್ಳಿ ಪ್ರಕರಣದಲ್ಲಿ ಬಂಧಿತರಾದ ಇಬ್ಬರಿಗೆ ಸರ್ವೋಚ್ಚ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ ಇದು ನ್ಯಾಯ ಮತ್ತು ಸತ್ಯದ…

2 days ago

کے۔ جے، جارج کے استعفی کا ایس ڈی پی آئی کا مطالبہ

عبد الحنان ریاستی نائب صدر - ایس۔ ڈی۔ پی۔ آئی ہے بنگلور، 5 اکتوبر: توانائی…

4 days ago