Categories: featureNewsPolitics

ಮೈಸೂರು ಗ್ರಾಮಾಂತರ ಹುಣಸೂರು ನಲ್ಲಿ #ಎಸ್ಡಿಪಿಐ ಕಾರ್ಯಕರ್ತರಿಗೆ ಬೇಸಿಕ್ ಎಜುಕೇಶನ್ ಕೋರ್ಸ್ ತರಬೇತಿ ಶಿಬಿರ ಮತ್ತು ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ #ಎಸ್ಡಿಪಿಐ ರಾಜ್ಯ ಸಮಿತಿ ಸದಸ್ಯರಾದ ನೂರುದ್ದೀನ್ ರವರು ಮಾತನಾಡಿ ಎಸ್ ಡಿ ಪಿ ಐ ಪಕ್ಷದ ಉದ್ದೇಶವನ್ನು ವಿವರಿಸಿ ಹಸಿವು ಮುಕ್ತ ಸ್ವಾತಂತ್ರ್ಯ, ಭಯ ಮುಕ್ತ ಸ್ವಾತಂತ್ರ್ಯ,
ಮತ್ತು ಕಾರ್ಯಕರ್ತ ಯಾರು? ಕಾರ್ಯಕರ್ತರು ಯಾಕೆ ಬೇಕು? ಕಾರ್ಯಕರ್ತರ ಗುಣಲಕ್ಷಣಗಳು ಮತ್ತು ಕೇಡರಿನ ವಿಶೇಷತೆಗಳನ್ನು ಸವಿಸ್ತಾರವಾಗಿ ವಿವರಿಸಿದ್ದರು.
ಮೈಸೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಮಜಾಜ಼್ ಅಹಮದ್ ರವರು ಭಾರತದ ಸಾಮಾಜಿಕ ಪ್ರಜಾಪ್ರಭುತ್ವ ಸಿದ್ಧಾಂತ ಮತ್ತು ಪ್ರಾಯೋಗಿಕತೆ ಇದರ ಬಗ್ಗೆ ವಿವರಿಸಿದರು ಸಾಮಾಜಿಕ ನ್ಯಾಯ, ಭ್ರಷ್ಟಾಚಾರ ರಹಿತ ಆಡಳಿತ, ಮಾದರಿ ಜನನಾಯಕರು, ತಾರತಮ್ಯ ರಹಿತ ಸಮಾಜ ನಿರ್ಮಾಣ, ಮೊದಲಾದ ವೈಶಿಷ್ಟ್ಯಗಳ ಪಕ್ಷವಾದ ಎಸ್.ಡಿ.ಪಿ.ಐಯನ್ನು ಎಲ್ಲಾ ಧರ್ಮ-ಜಾತಿ-ಭಾಷೆಯ ಲಕ್ಷಾಂತರ ಜನರು ಬೆಂಬಲಿಸುತ್ತಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ನೂರಾರು ಕಾರ್ಯಕರ್ತರು ಪಕ್ಷಕ್ಕೆ ಸೇರ್ಪಡೆಗೊಂಡರು.
ಈ ತರಬೇತಿ ಶಿಬಿರದಲ್ಲಿ ಮೈಸೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಮಜಾಜ಼್ ಅಹ್ಮದ್, ರಾಜ್ಯ ಸಮಿತಿ ಸದಸ್ಯರಾದ ನೂರುದ್ದೀನ್ , ಜಿಲ್ಲಾ ಉಪಾಧ್ಯಕ್ಷರಾದ ಕಲಂದರ್ ಷರೀಫ್, ಜಿಲ್ಲಾ ಕಾರ್ಯದರ್ಶಿ ಸೈಯದ್ ಅಕ್ಬರ್, ಜಿಲ್ಲಾ ಕಾರ್ಯದರ್ಶಿಯಾದ ಸತೀಶ ಸಣ್ಣಹಳ್ಳಿ ಮತ್ತು ಜಿಲ್ಲಾ ಸಂಘಟನಾ ಕಾರ್ಯದರ್ಶಿ ಲಿಯಾಖತ್ ಅಲಿ ಹುಣಸೂರು ತಾಲೂಕು ಸಮಿತಿಯ ಅಧ್ಯಕ್ಷರಾದ ಮೊಹಮ್ಮದ್ ಅಬ್ರೇಸ್ ಪಿರಿಯಾಪಟ್ಟಣ ತಾಲೂಕು ಸಮಿತಿ ಅಧ್ಯಕ್ಷರಾದ ಮುಬೀರ್ ಹುಣಸೂರು ನಗರಸಭೆಯ ಸದಸ್ಯರಾದ ಸಯ್ಯದ್ ಯೂನುಸ್ ಮತ್ತು ಸಮೀನಾ ಇಮ್ರಾನ್ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಮೈಸೂರು ಗ್ರಾಮಾಂತರ
ಸೆಪ್ಟಂಬರ್ 2 2022

admin

Recent Posts

WORLD ENVIRONMENT DAY

ವಿಶ್ವ ಪರಿಸರ ದಿನಾಚರಣೆ 05 JUNE ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ! ಇಂದು ನಾವು ನೆಡುವ ಒಂದು ಸಣ್ಣಗಿಡ, ನಾಳಿನ…

21 hours ago

SDPI ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ಸದಸ್ಯರು, ಪುತ್ತೂರಿನ ಹಿರಿಯ ಉದ್ಯಮಿ, ಸಮಾಜಸೇವಕರು ಹಾಗೂ ವಿವಿಧ ಧಾರ್ಮಿಕ ಮತ್ತು ಸಾಮಾಜಿಕ ಸಂಘಟನೆಗಳಲ್ಲಿ ಮಹತ್ವದ ಜವಾಬ್ದಾರಿಗಳನ್ನು ನಿರ್ವಹಿಸಿದ್ದ ಸಾಗರ್ ಇಬ್ರಾಹಿಂ ಹಾಜಿ ಅವರ ನಿಧನದ ಸುದ್ದಿ ಅತ್ಯಂತ ದುಃಖವನ್ನುಂಟು ಮಾಡಿದೆ.ಅವರು ಸಮಾಜದ ಅಭಿವೃದ್ಧಿ, ಧಾರ್ಮಿಕ ಸೇವೆ ಹಾಗೂ ಜನಸಾಮಾನ್ಯರ ಕಲ್ಯಾಣಕ್ಕಾಗಿ ಸಲ್ಲಿಸಿದ ಕೊಡುಗೆಗಳು ಸದಾ ಸ್ಮರಣೀಯವಾಗಿರಲಿವೆ. ಅವರ ಅಗಲಿಕೆಯಿಂದ ಕುಟುಂಬಕ್ಕೆ ಮಾತ್ರವಲ್ಲ, ಪುತ್ತೂರು ಭಾಗದ ಸಮುದಾಯಕ್ಕೂ ಮತ್ತು SDPI ಪಕ್ಷಕ್ಕೂ ತುಂಬಲಾರದ ನಷ್ಟ ಉಂಟಾಗಿದೆ.ಅಲ್ಲಾಹು ತಆಲಾ ಮರ್ಹೂಮ್ ಸಾಗರ್ ಇಬ್ರಾಹಿಂ ಹಾಜಿಯವರ ಸಕಲ ಸತ್ಕರ್ಮಗಳನ್ನು ಸ್ವೀಕರಿಸಿ, ಅವರಿಗೆ ಜನ್ನತುಲ್ ಫಿರ್ದೌಸ್ ಅನುಗ್ರಹಿಸಲಿ. ಅವರ ಕುಟುಂಬಸ್ಥರು, ಬಂಧುಬಳಗ ಮತ್ತು ಅಭಿಮಾನಿಗಳಿಗೆ ಈ ದುಃಖವನ್ನು ಸಹಿಸುವ ಶಕ್ತಿ ಮತ್ತು ತಾಳ್ಮೆಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.

~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು, SDPI ಕರ್ನಾಟಕ SDPIKarnataka #Mangalore

1 day ago

ಜಿಲ್ಲಾ ಪ್ರತಿನಿಧಿ ಸಭೆ

DRC DISTRICT REPRESENTATIVE COUNCIL Heartly Welcome ABDUL HANNANState Vice President MAULANA AKRAMState Secretary ABDUL RAHEEM…

6 days ago

HAPPY Eid Al-Adha

Wishing you a beautiful and blessed Eid. Warm Wishes on Eid ul Adha May the…

1 week ago