Categories: featureNewsPolitics

ಮೈಸೂರು ಗ್ರಾಮಾಂತರ ಹುಣಸೂರು ನಲ್ಲಿ #ಎಸ್ಡಿಪಿಐ ಕಾರ್ಯಕರ್ತರಿಗೆ ಬೇಸಿಕ್ ಎಜುಕೇಶನ್ ಕೋರ್ಸ್ ತರಬೇತಿ ಶಿಬಿರ ಮತ್ತು ಪಕ್ಷ ಸೇರ್ಪಡೆ ಕಾರ್ಯಕ್ರಮ ನಡೆಯಿತು

ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ #ಎಸ್ಡಿಪಿಐ ರಾಜ್ಯ ಸಮಿತಿ ಸದಸ್ಯರಾದ ನೂರುದ್ದೀನ್ ರವರು ಮಾತನಾಡಿ ಎಸ್ ಡಿ ಪಿ ಐ ಪಕ್ಷದ ಉದ್ದೇಶವನ್ನು ವಿವರಿಸಿ ಹಸಿವು ಮುಕ್ತ ಸ್ವಾತಂತ್ರ್ಯ, ಭಯ ಮುಕ್ತ ಸ್ವಾತಂತ್ರ್ಯ,
ಮತ್ತು ಕಾರ್ಯಕರ್ತ ಯಾರು? ಕಾರ್ಯಕರ್ತರು ಯಾಕೆ ಬೇಕು? ಕಾರ್ಯಕರ್ತರ ಗುಣಲಕ್ಷಣಗಳು ಮತ್ತು ಕೇಡರಿನ ವಿಶೇಷತೆಗಳನ್ನು ಸವಿಸ್ತಾರವಾಗಿ ವಿವರಿಸಿದ್ದರು.
ಮೈಸೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಮಜಾಜ಼್ ಅಹಮದ್ ರವರು ಭಾರತದ ಸಾಮಾಜಿಕ ಪ್ರಜಾಪ್ರಭುತ್ವ ಸಿದ್ಧಾಂತ ಮತ್ತು ಪ್ರಾಯೋಗಿಕತೆ ಇದರ ಬಗ್ಗೆ ವಿವರಿಸಿದರು ಸಾಮಾಜಿಕ ನ್ಯಾಯ, ಭ್ರಷ್ಟಾಚಾರ ರಹಿತ ಆಡಳಿತ, ಮಾದರಿ ಜನನಾಯಕರು, ತಾರತಮ್ಯ ರಹಿತ ಸಮಾಜ ನಿರ್ಮಾಣ, ಮೊದಲಾದ ವೈಶಿಷ್ಟ್ಯಗಳ ಪಕ್ಷವಾದ ಎಸ್.ಡಿ.ಪಿ.ಐಯನ್ನು ಎಲ್ಲಾ ಧರ್ಮ-ಜಾತಿ-ಭಾಷೆಯ ಲಕ್ಷಾಂತರ ಜನರು ಬೆಂಬಲಿಸುತ್ತಿದ್ದಾರೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ನೂರಾರು ಕಾರ್ಯಕರ್ತರು ಪಕ್ಷಕ್ಕೆ ಸೇರ್ಪಡೆಗೊಂಡರು.
ಈ ತರಬೇತಿ ಶಿಬಿರದಲ್ಲಿ ಮೈಸೂರು ಗ್ರಾಮಾಂತರ ಜಿಲ್ಲಾಧ್ಯಕ್ಷರಾದ ಮಜಾಜ಼್ ಅಹ್ಮದ್, ರಾಜ್ಯ ಸಮಿತಿ ಸದಸ್ಯರಾದ ನೂರುದ್ದೀನ್ , ಜಿಲ್ಲಾ ಉಪಾಧ್ಯಕ್ಷರಾದ ಕಲಂದರ್ ಷರೀಫ್, ಜಿಲ್ಲಾ ಕಾರ್ಯದರ್ಶಿ ಸೈಯದ್ ಅಕ್ಬರ್, ಜಿಲ್ಲಾ ಕಾರ್ಯದರ್ಶಿಯಾದ ಸತೀಶ ಸಣ್ಣಹಳ್ಳಿ ಮತ್ತು ಜಿಲ್ಲಾ ಸಂಘಟನಾ ಕಾರ್ಯದರ್ಶಿ ಲಿಯಾಖತ್ ಅಲಿ ಹುಣಸೂರು ತಾಲೂಕು ಸಮಿತಿಯ ಅಧ್ಯಕ್ಷರಾದ ಮೊಹಮ್ಮದ್ ಅಬ್ರೇಸ್ ಪಿರಿಯಾಪಟ್ಟಣ ತಾಲೂಕು ಸಮಿತಿ ಅಧ್ಯಕ್ಷರಾದ ಮುಬೀರ್ ಹುಣಸೂರು ನಗರಸಭೆಯ ಸದಸ್ಯರಾದ ಸಯ್ಯದ್ ಯೂನುಸ್ ಮತ್ತು ಸಮೀನಾ ಇಮ್ರಾನ್ ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಮೈಸೂರು ಗ್ರಾಮಾಂತರ
ಸೆಪ್ಟಂಬರ್ 2 2022

admin

Recent Posts

ಫ್ಯಾಶಿಷ್ಟರು ಗೌರಿ ಲಂಕೇಶ್‌ ಅವರನ್ನು ಗುಂಡಿಕ್ಕಿ ಕೊಂದ ದಿನ.

5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh

1 week ago

Will fight for every citizen of this country

Prakash Raj, Abdul Majeed SDPI and several others detained by Bengaluru Police During Election Commission…

2 weeks ago

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

3 weeks ago