Categories: Uncategorized

ಎಸ್ಡಿಪಿಐ ಕರ್ನಾಟಕ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಕೈಗೊಂಡ ನಿರ್ಣಯಗಳು

ದಿನಾಂಕ 11 ಅಕ್ಟೋಬರ್ 2022

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ರಾಜ್ಯ ಕಾರ್ಯಕಾರಿ ಸಮಿತಿ ಸಭೆಯನ್ನು ಅಕ್ಟೋಬರ್ 11, 2022 ರಂದು ಬೆಂಗಳೂರಿನಲ್ಲಿ ನಡೆಸಲಾಯಿತು. ಈ ಸಭೆಯಲ್ಲಿ ಮೀಸಲಾತಿ, ನಿರುದ್ಯೋಗ, ಚುನಾವಣಾ ತಯಾರಿಗಳ ಬಗ್ಗೆ ಚರ್ಚಿಸಿ ಈ ಕೆಳಕಂಡ ನಿರ್ಣಯಗಳನ್ನು ಅಂಗೀಕರಿಸಲಾಯಿತು.

ಎಸ್ಸಿ / ಎಸ್ಟಿ ಮೀಸಲಾತಿ ಪ್ರಮಾಣವನ್ನು ಏರಿಸುವ ಬಗ್ಗೆ ರಾಜ್ಯ ಸರ್ಕಾರದ ಘೋಷಣೆ ಕೇವಲ ಬೂಟಾಟಿಕೆ. 50% ಮೀಸಲಾತಿ ಪ್ರಮಾಣ ಮೀರಬಾರದು ಎಂದು ಸುಪ್ರೀಂ ಕೋರ್ಟ್ ಮೇಲಿಂದ ಮೇಲೆ ಹೇಳುತ್ತಲೇ ಬರುತ್ತಿದೆ. ಆದರೂ ಸಹ ಸರ್ಕಾರ ಜನರನ್ನು ಮೂರ್ಖರನ್ನಾಗಿಸಿ ಮತ ಸೆಳೆಯಲು ಇಂತಹ ಒಂದು ಆಗು ಹೋಗದ ಘೋಷಣೆ ಮಾಡಿದೆ.

ಸದ್ಯ ಅಸ್ತಿತ್ವದಲ್ಲಿರುವ ಮೀಸಲಾತಿಯೂ ಸಹ ವೇಗವಾಗಿ ತನ್ನ ಅರ್ಥ ಕಳೆದುಕೊಳ್ಳುತ್ತಿದೆ. ಏಕೆಂದರೆ, ಸರ್ಕಾರಿ ಸೌಮ್ಯದ ಸಂಸ್ಥೆ, ಉದ್ಯಮಗಳನ್ನು ಸರ್ಕಾರ ಒಂದೊAದಾಗಿ ಮುಚ್ಚುತ್ತಿದೆ, ಇಲ್ಲವೇ ಖಾಸಗಿಕರಣ ಮಾಡುತ್ತಿದೆ. ಸರ್ಕಾರಿ ಹುದ್ದೆಗಳೇ ಇಲ್ಲದಂತಾದ ಮೇಲೆ ಮೀಸಲಾತಿ ಅನುಕೂಲ ಸಿಗುವುದಾದರೂ ಹೇಗೆ? ಖಾಸಗಿಯಲ್ಲಿ ಮೀಸಲಾತಿಗೆ ಅವಕಾಶ ಇಲ್ಲ. ಮೀಸಲಾತಿಯನ್ನು ಪರೋಕ್ಷವಾಗಿ ತೊಡೆದು ಹಾಕುವುದೇ ಖಾಸಗೀಕರಣದ ಮೂಲ ಉದ್ದೇಶ. SಆPI ಕಾರ್ಯಕಾರಿ ಸಮಿತಿ ಖಾಸಗಿ ವಲಯದ ಮೀಸಲಾತಿ ನೀಡಲು ಸರ್ಕಾರವು ಅಗತ್ಯ ಕ್ರಮ ಕೈಗೊಳ್ಳುವುದು.

ಪಿ.ಎಫ್.ಐ ಬ್ಯಾನ್ ಸಂದರ್ಭದಲ್ಲಿ ಎಸ್‌ಡಿಪಿಐ ನಾಯಕರ ಮೇಲೆ ಸೆಕ್ಷನ್ 107ರ ದುರುಪಯೋಗ ನಡೆದಿದೆ. ಎಸ್‌ಡಿಪಿಐ ನಾಯಕರನ್ನು ಈ ಸೆಕ್ಷನ್ ಅಡಿಯಲ್ಲಿ ಮುಂಜಾಗೃತಾ ಕ್ರಮ ಎಂದು ಹೇಳಿ ಬಂಧಿಸಲಾಯಿತು. ಈ ಸೆಕ್ಷನ್ ಅಡಿಯಲ್ಲಿ ಬಂಧಿತರಿಗೆ ತಹಸೀಲ್ದಾರ್ ಮಟ್ಟದಲ್ಲಿ ಸ್ಟೇಷನ್ ಬೇಲ್ ಸಿಗುವ ಅವಕಾಶ ಇದ್ದರೂ ಅದನ್ನು ಉದ್ದೇಶಪೂರ್ವಕವಾಗಿ ನಿರಾಕರಿಸಿ ಪಕ್ಷದ ನಾಯಕರನ್ನು ಜೈಲಿಗೆ ಕಳುಹಿಸಿದ ಬಗ್ಗೆ ಕಾನೂನಾತ್ಮಕ ಹೋರಾಟ ಮಾಡುವುದಾಗಿ ನಿರ್ಧರಿಸಲಾಯಿತು.

ಎಸ್‌ಡಿಪಿಐ ಪಕ್ಷದ ಮೇಲೆ ಯಾವುದೇ ನಿರ್ಬಂಧ ಇಲ್ಲದೇ ಇದ್ದರೂ ಸಹ ಪಕ್ಷ ನಡೆಸುತ್ತಿದ್ದ ಜನ ಸಂಪರ್ಕ ಕೇಂದ್ರಗಳನ್ನು ಮುಚ್ಚಲಾಗಿದೆ. ಅದರ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಮನವಿ ಮಾಡಿದ್ದರು ಸಹ ಇನ್ನೂ ಅವರಿಂದ ಸಕಾರಾತ್ಮಕ ಪ್ರತಿಕ್ರಿಯೆ ಬಂದಿಲ್ಲ. ಇದರಿಂದ ಸಾಮಾನ್ಯ ಜನರಿಗೆ ಸಿಗುತ್ತಿದ್ದ ಬಹುಮುಖ್ಯ ಸೇವೆಯೊಂದು ಇಲ್ಲದಂತಾಗಿದೆ. ಈ ಬಗ್ಗೆ ಕಾನೂನಾತ್ಮಕ ಹೋರಾಟವನ್ನು ಮಾಡುವುದಾಗಿ ನಿರ್ಧರಿಸಲಾಯಿತು.

ಬಿಜಾಪುರ ನಗರಸಭೆ ಚುನಾವಣೆಯಲ್ಲಿ ಹತ್ತು ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಕಣಕ್ಕೆ ಇಳಿಸಬೇಕು. ಕೊಳ್ಳೇಗಾಲದ ನಗರ ಸಭೆ ಉಪಚುನಾವಣೆಗಳನ್ನು ಸಮರ್ಥವಾಗಿ ಎದುರಿಸಬೇಕು. ಮುಂಬರುವ ಬಿಬಿಎಂಪಿ ಚುನಾವಣೆಗೆ ಎಲ್ಲ ರೀತಿ ಇಂದಲೂ ಸಜ್ಜಾಗಬೇಕು.

2023ರ ವಿಧಾನಸಭೆ ಚುನಾವಣೆಗಳಲ್ಲಿ ಕನಿಷ್ಠ ನೂರು ಕ್ಷೇತ್ರಗಳಲ್ಲಿ ಪಕ್ಷ ಸ್ಪರ್ಧೆ ಮಾಡಬೇಕು. ಎಸ್‌ಡಿಪಿಐ ಪಕ್ಷ ಈ ಬಾರಿ ಕರ್ನಾಟಕದ ಚುನಾವಣೆಯಲ್ಲಿ ನಿರ್ಣಾಯಕ ಪಾತ್ರ ವಹಿಸಬೇಕು.

admin

Recent Posts

Hiriyur By-Election: SDPI ke Muqablay Mein Utarne Ki Sifarish Riyasati Qiyadat Ko Bhej Di Gayi

Hiriyur, 9 June Hiriyur Assembly Halqe mein mutawaqqa by-election ko madde nazar rakhte hue SDPI…

6 days ago

ಹಿರಿಯೂರು ಉಪಚುನಾವಣೆ: ಎಸ್‌ಡಿಪಿಐ

ಸ್ಪರ್ಧೆಗೆ ರಾಜ್ಯ ನಾಯಕತ್ವಕ್ಕೆ ಶಿಫಾರಸು ಹಿರಿಯೂರು : 9 ಜೂನ್ ಹಿರಿಯೂರು ವಿಧಾನಸಭಾ ಕ್ಷೇತ್ರದ ಸಂಭವನೀಯ ಉಪಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಎಸ್‌ಡಿಪಿಐ…

6 days ago

ಮೈಸೂರು ಜಿಲ್ಲಾ ನಾಯಕರ ಸಭೆ ಯಶಸ್ವಿಯಾಗಿ ನೆರವೇರಿತುಮೈಸೂರಿನಲ್ಲಿ ಎಸ್‌ಡಿಪಿಐ ಜಿಲ್ಲಾ ನಾಯಕರ ಮಹತ್ವದ ಸಭೆ ನಡೆಯಿತು.ಸಭೆಯಲ್ಲಿ ಜಿಲ್ಲೆಯ ಪ್ರಸ್ತುತ ರಾಜಕೀಯ ಪರಿಸ್ಥಿತಿ, ಜನಸಾಮಾನ್ಯರು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳು, ಸ್ಥಳೀಯ ಜನರ ಅಗತ್ಯಗಳು ಹಾಗೂ ಮುಂಬರುವ ಚುನಾವಣಾ ಸವಾಲುಗಳ ಕುರಿತು ಸಮಗ್ರ ಚರ್ಚೆ ನಡೆಸಲಾಯಿತು. ಅಲ್ಲದೆ, ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ ನೀಡುವ ಹಾಗೂ ಮತದಾರರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಅವರ ಹಕ್ಕುಗಳಿಗಾಗಿ ಹೋರಾಡುವ ಕಾರ್ಯಯೋಜನೆ ರೂಪಿಸಲಾಯಿತು.ಸಭೆಯಲ್ಲಿ ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ರಾಜ್ಯ ಉಪಾಧ್ಯಕ್ಷ ಅಬ್ದುಲ್ ಹನ್ನಾನ್, ರಾಜ್ಯ ಕಾರ್ಯದರ್ಶಿ ಅಕ್ರಮ್ ಮೌಲಾನ ಹಾಗೂ ರಾಜ್ಯ ಖಜಾಂಚಿ ಅಮ್ಜದ್ ಖಾನ್ ಪ್ರಮುಖ ವಿಷಯಗಳ ಕುರಿತು ಮಾರ್ಗದರ್ಶನ ನೀಡಿದರು.ಜಿಲ್ಲಾ ಕಾರ್ಯಧ್ಯಕ್ಷ ಶಫಿವುಲ್ಲಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಳಾದ ಫಿರ್ದೋಸ್, ಅಝೀಮ್ ಸಭೆಯ ನೇತ್ರತ್ವ ವಹಿಸಿದ್ದರು.ಜನಪರ ಹೋರಾಟಗಳನ್ನು ಮತ್ತಷ್ಟು ಬಲಪಡಿಸಿ, ಸಮಾಜದ ಎಲ್ಲ ವರ್ಗಗಳ ಧ್ವನಿಯಾಗುವ ಸಂಕಲ್ಪದೊಂದಿಗೆ ಸಭೆ ಯಶಸ್ವಿಯಾಗಿ ಸಂಪನ್ನಗೊಂಡಿತು.

ಮೈಸೂರು ಜಿಲ್ಲಾ ನಾಯಕರ ಸಭೆ ಯಶಸ್ವಿಯಾಗಿ ನೆರವೇರಿತುಮೈಸೂರಿನಲ್ಲಿ ಎಸ್‌ಡಿಪಿಐ ಜಿಲ್ಲಾ ನಾಯಕರ ಮಹತ್ವದ ಸಭೆ ನಡೆಯಿತು.ಸಭೆಯಲ್ಲಿ ಜಿಲ್ಲೆಯ ಪ್ರಸ್ತುತ ರಾಜಕೀಯ…

7 days ago

ಜಿಲ್ಲಾ ಪ್ರತಿನಿಧಿ ಸಭೆDISTRICT REPRESENTATIVE COUNCIL

Hearty Welcome MUJAHID PASHAState General Secretary RIYAZ KADAMBUState Secretary SALEEM AHMEDDistrict President DR. SHAIK TABREZDistrict…

1 week ago

WORLD ENVIRONMENT DAY

ವಿಶ್ವ ಪರಿಸರ ದಿನಾಚರಣೆ 05 JUNE ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ! ಇಂದು ನಾವು ನೆಡುವ ಒಂದು ಸಣ್ಣಗಿಡ, ನಾಳಿನ…

1 week ago