Categories: featureNewsPolitics

ವಿಧಾನಸಭಾ ಚುನಾವಣೆ 2023 – ಕ್ಷೇತ್ರ ಸಮೀಕ್ಷೆ ನಡೆಸಿದ SDPI ರಾಷ್ಟ್ರೀಯ ಪ್ರಧಾನರಾಯಚೂರು ಅ 27: ರಾಯಚೂರು ಜಿಲ್ಲೆಗೆ ಭೇಟಿ ನೀಡಿ ಕ್ಷೇತ್ರ ಸಮೀಕ್ಷೆ ನಡೆಸಿದ ಎಸ್‌ಡಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ಮೊಹಮ್ಮದ್ ತುಂಬೆ ಹಾಗೂ ರಾಜ್ಯ ಸಮಿತಿ ಸದಸ್ಯ ನೂರುದ್ದೀನ್ ಮೌಲಾನ ರವರನ್ನೊಳಗೊಂಡ ತಂಡ ಆ ಬಳಿಕ ನಗರದ ಸ್ವಾಗತ ಫಂಕ್ಷನ್ ಹಾಲ್ ನಲ್ಲಿ ಆಯೋಜಿಸಿದ್ದ ಒಳಾಂಗಣ ಕಾರ್ಯಕ್ರಮದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.ಪ್ರಸ್ತುತ ರಾಜಕೀಯ ಪರಿಸ್ಥಿತಿಯಲ್ಲಿ ಭ್ರಷ್ಟ ರಾಜಕಾರಣಿಗಳಿಂದ ಮುಸ್ಲಿಮರು, ದಲಿತರು, ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ಪ್ರಮುಖ ಸಮಸ್ಯೆಗಳು ಸಂಪೂರ್ಣವಾಗಿ ನಿರ್ಲಕ್ಷಿಸಲ್ಪಟ್ಟಿದ್ದು ನೈಜ ಜಾತ್ಯತೀತತೆಯೊಂದಿಗೆ ಪರ್ಯಾಯ ರಾಜಕಾರಣ ಅಗತ್ಯವಿದ್ದು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪರ್ಯಾಯ ರಾಜಕೀಯ ಶಕ್ತಿಯಾಗಿ ಎಸ್‌ಡಿಪಿಐ ಯನ್ನು ಗೆಲ್ಲಿಸಬೇಕಾಗಿದೆ ಎಂದು ಇಲ್ಯಾಸ್ ಮಹಮ್ಮದ್ ತುಂಬೆ ಯವರು ಅಭಿಪ್ರಾಯಪಟ್ಟರು.ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ತೌಸೀಫ್ ಅಹಮದ್, ಪ್ರಧಾನ ಕಾರ್ಯದರ್ಶಿ ಜಿಲಾನಿ ಪಾಷಾ, ಜಿಲ್ಲಾ ಸಮಿತಿ ಸದಸ್ಯರು ಹಾಗೂ ಪಕ್ಷದ ನೂರಾರು ಕಾರ್ಯಕರ್ತರು ಉಪಸ್ಥಿತರಿದ್ದರು.

admin

Recent Posts

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

6 days ago

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

2 weeks ago

ಸಂತಾಪಗಳು

ಶ್ರೀಮತಿ ಚೆನ್ನಮ್ಮ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ ಎಚ್. ಡಿ. ದೇವೇಗೌಡ ಅವರ ಧರ್ಮಪತ್ನಿ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ…

2 weeks ago

Condolences

Smt. Chennamma Ji wife of former Prime Minister Shri H.D. Deve Gowda Ji. Deeply pained…

2 weeks ago