Categories: featureNewsPolitics

ಮತದಾರರ ಹೆಸರು ಡಿಲೀಟ್ :ಚುನಾವಣಾ ಆಯೋಗದ ಆಸ್ತಿತ್ವವಕ್ಕೇ ಸವಾಲು ಒಡ್ಡಿದ ದೇಶದ ಅತಿ ದೊಡ್ಡ ಚುನಾವಣಾ ಅಕ್ರಮ- SDPI

2023 ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಕರ್ನಾಟಕ ಸರ್ಕಾರ ಸಮೀಕ್ಷೆಗಳ ನೆಪದಲ್ಲಿ ಕೆಲವು ಖಾಸಗಿ ಸಂಸ್ಥೆಗಳನ್ನು ಬಳಸಿಕೊಂಡು ಮತದಾರರ ವೈಯುಕ್ತಿಕ ಮಾಹಿತಿಯನ್ನು ಸಂಗ್ರಹಿಸಿ ಲಕ್ಷಾಂತರ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಿದೆ. ಬೆಂಗಳೂರು ಜಿಲ್ಲೆ ಒಂದರಲ್ಲೆ ಸುಮಾರು ಅರೂವರೆ ಲಕ್ಷ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಈ ಹಿನ್ನಲೆಯಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪಕ್ಷದ ನಿಯೋಗ ಇಂದು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ. ಆರ್. ಭಾಸ್ಕರ್ ಪ್ರಸಾದ್ ಅವರ ನೇತೃತ್ವದಲ್ಲಿ ರಾಜ್ಯ ಮುಖ್ಯ ಚುನಾವಣಾ ಆಯುಕ್ತರನ್ನು ಭೇಟಿ ಮಾಡಿ ದೂರು ದಾಖಲಿಸಿದೆ. ಅಕ್ರಮದಲ್ಲಿ ಪಾಲ್ಗೊಂಡಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಅಕ್ರಮವಾಗಿ ಮತದಾರರ ಪಟ್ಟಿಯಿಂದ ಹೆಸರು ಕಳೆದುಕೊಂಡಿರುವ ಲಕ್ಷಾಂತರ ಮತದಾರರಿಗೆ ನ್ಯಾಯ ಸಿಗುವವರೆಗೂ ಚುನಾವಣಾ ಪ್ರಕ್ರಿಯೆಗಳನ್ನು ಆರಂಭಿಸಬಾರದು ಎಂದು ದೂರು ನೀಡಿ ಮನವಿ ಪತ್ರ ಸಲ್ಲಿಸಲಾಯಿತು.
ನಿಯೋಗದಲ್ಲಿ ,ರಾಷ್ಟ್ರೀಯ ಸಮಿತಿ ಸದಸ್ಯಡಾ. ಮೆಹಬೂಬ್ ಅವದ್ ಷರೀಫ್, ಬೆಂಗಳೂರು ಜಿಲ್ಲಾಧ್ಯಕ್ಷ
ಮುಜಾಯಿದ್ ಪಾಷಾ, ರಾಜ್ಯ ಕೋಶಾಧಿಕಾರಿ ಖಾಲೀದ್ ಯಾದಗಿರಿ ಉಪಸ್ಥಿತರಿದ್ದರು.

admin

Recent Posts

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

6 days ago

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

1 week ago

ಸಂತಾಪಗಳು

ಶ್ರೀಮತಿ ಚೆನ್ನಮ್ಮ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ ಎಚ್. ಡಿ. ದೇವೇಗೌಡ ಅವರ ಧರ್ಮಪತ್ನಿ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ…

2 weeks ago

Condolences

Smt. Chennamma Ji wife of former Prime Minister Shri H.D. Deve Gowda Ji. Deeply pained…

2 weeks ago