Categories: featureNewsPolitics

ಮತದಾರರ ಹೆಸರು ಡಿಲೀಟ್ :ಚುನಾವಣಾ ಆಯೋಗದ ಆಸ್ತಿತ್ವವಕ್ಕೇ ಸವಾಲು ಒಡ್ಡಿದ ದೇಶದ ಅತಿ ದೊಡ್ಡ ಚುನಾವಣಾ ಅಕ್ರಮ- SDPI

2023 ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿ ಕರ್ನಾಟಕ ಸರ್ಕಾರ ಸಮೀಕ್ಷೆಗಳ ನೆಪದಲ್ಲಿ ಕೆಲವು ಖಾಸಗಿ ಸಂಸ್ಥೆಗಳನ್ನು ಬಳಸಿಕೊಂಡು ಮತದಾರರ ವೈಯುಕ್ತಿಕ ಮಾಹಿತಿಯನ್ನು ಸಂಗ್ರಹಿಸಿ ಲಕ್ಷಾಂತರ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದು ಹಾಕಿದೆ. ಬೆಂಗಳೂರು ಜಿಲ್ಲೆ ಒಂದರಲ್ಲೆ ಸುಮಾರು ಅರೂವರೆ ಲಕ್ಷ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಈ ಹಿನ್ನಲೆಯಲ್ಲಿ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪಕ್ಷದ ನಿಯೋಗ ಇಂದು ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಬಿ. ಆರ್. ಭಾಸ್ಕರ್ ಪ್ರಸಾದ್ ಅವರ ನೇತೃತ್ವದಲ್ಲಿ ರಾಜ್ಯ ಮುಖ್ಯ ಚುನಾವಣಾ ಆಯುಕ್ತರನ್ನು ಭೇಟಿ ಮಾಡಿ ದೂರು ದಾಖಲಿಸಿದೆ. ಅಕ್ರಮದಲ್ಲಿ ಪಾಲ್ಗೊಂಡಿರುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಮತ್ತು ಅಕ್ರಮವಾಗಿ ಮತದಾರರ ಪಟ್ಟಿಯಿಂದ ಹೆಸರು ಕಳೆದುಕೊಂಡಿರುವ ಲಕ್ಷಾಂತರ ಮತದಾರರಿಗೆ ನ್ಯಾಯ ಸಿಗುವವರೆಗೂ ಚುನಾವಣಾ ಪ್ರಕ್ರಿಯೆಗಳನ್ನು ಆರಂಭಿಸಬಾರದು ಎಂದು ದೂರು ನೀಡಿ ಮನವಿ ಪತ್ರ ಸಲ್ಲಿಸಲಾಯಿತು.
ನಿಯೋಗದಲ್ಲಿ ,ರಾಷ್ಟ್ರೀಯ ಸಮಿತಿ ಸದಸ್ಯಡಾ. ಮೆಹಬೂಬ್ ಅವದ್ ಷರೀಫ್, ಬೆಂಗಳೂರು ಜಿಲ್ಲಾಧ್ಯಕ್ಷ
ಮುಜಾಯಿದ್ ಪಾಷಾ, ರಾಜ್ಯ ಕೋಶಾಧಿಕಾರಿ ಖಾಲೀದ್ ಯಾದಗಿರಿ ಉಪಸ್ಥಿತರಿದ್ದರು.

admin

Recent Posts

Leaders Conclave

ಲೀಡರ್ಸ್‌ ಕಾನ್ ಕ್ಲೇವ್ Programs in North Karnataka July 2026 09th - Mandya 11th - Bijapur…

6 hours ago

ಪತ್ರಿಕಾ ಪ್ರಕಟಣೆ

ಪತ್ರಿಕಾ ಪ್ರಕಟಣೆ 03.07.2026 ಬೀದಿ ಬದಿ ವ್ಯಾಪಾರಿಗಳ ತೆರವು ಕಾರ್ಯಾಚರಣೆ ತಕ್ಷಣ ನಿಲ್ಲಿಸಬೇಕು; 2014ರ ಕೇಂದ್ರ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು:…

1 week ago

Press Release

03.07.2026 Stop the Eviction Drive Against Street Vendors; Strictly Implement the Street Vendors Act, 2014:…

1 week ago

Warm Welcome to the SDPI National Working Committee!

The SDPI Karnataka proudly welcomes the esteemed members of the National Working Committee from across…

1 week ago

05 ನಿರ್ಣಯ

ಕಲ್ಯಾಣ ಕರ್ನಾಟಕ ಸಮಗ್ರ ಅಭಿವೃದ್ಧಿಗೆ ಆಗ್ರಹಿಸುವ ನಿರ್ಣಯ ಕಲ್ಯಾಣ ‌ ಕರ್ನಾಟಕ ‌ ಪ್ರದೇಶವು ಶಿಕ್ಷಣ, ಆರೋಗ್ಯ, ಉದ್ಯೋಗ, ಮೂಲಸೌಕರ್ಯ…

1 week ago

1 July

ವೈದ್ಯರ ದಿನ ಹಾರ್ದಿಕ ಶುಭಾಶಯಗಳು ವೈದ್ಯರ ದಿನವಾದ ಇಂದು, ಪ್ರತೀ ವೈದ್ಯರ ಅಚಲ ಉತ್ಸಾಹ, ಕರುಣೆ ಮತ್ತು ಮಾನವೀಯ ನಿಸ್ವಾರ್ಥ…

1 week ago