Categories: Uncategorized

ಒಳ ಮೀಸಲಾತಿ ಹೋರಾಟಗಾರರನ್ನು ಕೂಡಲೇ ಬಿಡುಗಡೆ ಗೊಳಿಸಲು SDPI ಆಗ್ರಹಬೆಂಗಳೂರು ಡಿಸೆಂಬರ್ -11;ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಒಳ ಮೀಸಲಾತಿಗಾಗಿ ಹೋರಾಟ ಮಾಡುತ್ತಿದ್ದ ಹೋರಾಟ ಗಾರರನ್ನು ಬಂಧಿಸಿದ ಬಿಜೆಪಿ ಸರಕಾರದ ಕ್ರಮ ಸಂವಿಧಾನಕ್ಕೆ ಎಸಗುವ ಅಪಚಾರವಾಗಿದೆ. ಹೋರಾಟಗಾರರ ಬೇಡಿಕೆಗೆ ಸ್ಪಂದಿಸಿ, ನ್ಯಾಯ ಕೊಡುವುದು ಬಿಟ್ಟು ಸರಕಾರ ಹೋರಾಟವನ್ನು ಹತ್ತಿಕ್ಕುವ ಪ್ರಯತ್ನಕ್ಕೆ ಇಳಿದಿರುವುದು ಖಂಡನಾರ್ಹ. ಮಾತ್ರವಲ್ಲ 62 ವರ್ಷ ಪ್ರಾಯದ ಹೋರಾಟಗಾರರೊಬ್ಬರ ತಲೆಗೆ ಪೊಲೀಸರು ಹಲ್ಲೆ ನಡೆಸಿ ಗಾಯಗೊಳಿಸಿರುವ ಕೃತ್ಯ ಪೊಲೀಸ್ ಇಲಾಖೆಯ ಮೂಲಕ ಸರಕಾರ ನಡೆಸುತ್ತಿರುವ ದರ್ಪವಾಗಿದೆ. ಸರಕಾರ ಕೂಡಲೇ ಹೋರಾಟಗಾರರ ಬೇಡಿಕೆಯನ್ನು ಪರಿಗಣಿಸಬೇಕು ಮತ್ತು ಈ ಕೂಡಲೇ ಬಂಧಿಸಿರುವವರನ್ನು ಬಿಡುಗಡೆಗೊಳಿಸ ಬೇಕೆಂದು SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಅವರು ಪತ್ರಿಕಾ ಪ್ರಕಟಣೆಯ ಮೂಲಕ ಆಗ್ರಹಿಸಿದ್ದಾರೆ.

admin

Recent Posts

ಸ್ವಾತಂತ್ರ್ಯ ಪ್ರಯುಕ್ತ ಸಭಾ ಕಾರ್ಯಕ್ರಮ

INDEPENDENCE DAY CELEBRATION 15.08.2025 | ಮಧ್ಯಾನ : 3:00 | ಡೈಮಂಡ್ ಹಾಲ್ ಹತ್ತಿರ ರೈಲ್ವೆ ಸ್ಟೇಷನ್ ರೋಡ್‌…

4 days ago

ಸ್ವಾತಂತ್ರ್ಯವನ್ನು ರಕ್ಷಿಸೋಣ, ರಾಷ್ಟ್ರವನ್ನು ಉಳಿಸೋಣ

Let's Protect the Freedom, Save the Nation آئیے آزادی کی حفاظت کرین ملک کو بچائیں…

4 days ago

79 Happy Independence Day

Let's Protect The Freedom, Save The Nation "Let us remember the sacrifices that brought us…

4 days ago