ದಿನಾಂಕ: 11.12.2022

ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲ್ಲೂಕಿನಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮ ಹಾಗೂ ಪದಗ್ರಹಣ ಸಮಾರಂಭ ಜಿಲ್ಲಾಧ್ಯಕ್ಷರಾದ ಬಾಳೇಕಾಯಿ ಶ್ರೀನಿವಾಸ್‌ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಹೊಳಲ್ಕೆರೆಯ ವಿಧಾನಸಭಾ ಕ್ಷೇತ್ರದ ನೂತನ ಅಧ್ಯಕ್ಷರಾಗಿ ಶಶಿಧರ ಹಾಗೂ ಉಪಾಧ್ಯಕ್ಷರಾಗಿ ಆರಿಫ್, ಕಾರ್ಯದರ್ಶಿಯಾಗಿ ಮುಜಾಯಿದ್, ಸಹಕಾರ್ಯದರ್ಶಿಯಾಗಿ ಗುರುಮೂರ್ತಿ, ಕೋಶಾಧಿಕಾರಿಯಾಗಿ ನಿಸಾರ್ ಅಹ್ಮದ್ ಆಯ್ಕೆಯಾದರು.

ಈ ಸಮಾರಂಭದಲ್ಲಿ 80ಕ್ಕೂ ಹೆಚ್ಚು ಯುವಕರು ಮತ್ತು ಹಿರಿಯರು ಎಸ್‌.ಡಿ.ಪಿ.ಐ ಪಕ್ಷಕ್ಕೆ ಸೇರ್ಪಡೆಗೊಂಡರು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿಯಾದ ಅಫ್ಸರ್ ಕೂಡ್ಲಿಪೇಟೆಯವರು ಮಾತನಾಡಿ, ಪಕ್ಷದ ಅಗತ್ಯತೆ ಮತ್ತು ತತ್ವ ಸಿದ್ಧಾಂತಗಳ ಬಗ್ಗೆ ವಿವರಿಸಿದರು. ಇನ್ನೋರ್ವ ಅತಿಥಿ ರಾಜ್ಯ ಸಮಿತಿ ಸದಸ್ಯರೂ ಆದ ಯಮನಪ್ಪ ಗುಣದಾಳ ಅವರು ಪಕ್ಷದ ನಿಲುವಿನ ಕುರಿತು ವಿವರಿಸಿದರು.

ಕಾರ್ಯಕ್ರಮದಲ್ಲಿ ಎಸ್‌.ಡಿ.ಪಿ.ಐ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾದ ಸೈಯದ್ ಸಾದತ್. ಜಿಲ್ಲಾ ಉಪಾಧ್ಯಕ್ಷರಾದ ಕಮ್ರಾನ್ ಅಲಿ ಉಪಸಿತರಿದ್ದರು. ಕಾರ್ಯಕ್ರಮದ ನಿರೂಪಣೆಯನ್ನು ಜಿಲ್ಲಾ ಕಾರ್ಯದರ್ಶಿಯಾದ ಜಾಕಿರ್ ಹುಸೇನ್ ಅವರು ನೆರವೇರಿಸಿದರು.

admin

Recent Posts

ಕಾನೂನಿನ ಮುಂದೆ ಎಲ್ಲರೂ ಸಮಾನರು.

ಪೊಲೀಸರು CT ರವಿಯ ಮೇಲೆ FIR ಆಗಿರುವ ಕಾರಣ ಕಾನೂನಿನ ಪ್ರಕ್ರಿಯೆಯ ಭಾಗವಾಗಿ ನೋಟಿಸ್ ನೀಡಲು ತೆರಳಿದಾಗ, ಅವರ ಕರ್ತವ್ಯಕ್ಕೆ…

6 days ago

ಬಿಡದಿ ಟೌನ್‌ಶಿಪ್ ಯೋಜನೆ: ರೈತರ ಹಿತಾಸಕ್ತಿ ಮತ್ತು ಪಾರದರ್ಶಕತೆಯನ್ನು ಸರ್ಕಾರ ಎತ್ತಿಹಿಡಿಯಲಿ : SDPI

ಬೆಂಗಳೂರು, ಜುಲೈ 21-2026ಬಿಡದಿ ಪ್ರದೇಶದಲ್ಲಿ ಪ್ರಸ್ತಾಪಿತ ಗ್ರೇಟರ್ ಬೆಂಗಳೂರು ಇಂಟಿಗ್ರೇಟೆಡ್ ಟೌನ್‌ಶಿಪ್ ಯೋಜನೆಯ ಸುತ್ತ ಜೆಡಿಎಸ್ ಮತ್ತು ಕಾಂಗ್ರೆಸ್ ನಾಯಕರ…

1 week ago

ಸಂತಾಪಗಳು

ಶ್ರೀಮತಿ ಚೆನ್ನಮ್ಮ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ ಎಚ್. ಡಿ. ದೇವೇಗೌಡ ಅವರ ಧರ್ಮಪತ್ನಿ ಭಾರತದ ಮಾಜಿ ಪ್ರಧಾನಮಂತ್ರಿ ಶ್ರೀ…

2 weeks ago

Condolences

Smt. Chennamma Ji wife of former Prime Minister Shri H.D. Deve Gowda Ji. Deeply pained…

2 weeks ago