Categories: featureNewsPolitics

ಮೈಸೂರು ನಗರದ ಪ್ರಮುಖ ಸಾಮಾಜಿಕ ಕಾರ್ಯಕರ್ತರು ಎಸ್‌ಡಿಪಿಐ ಪಕ್ಷಕ್ಕೆ ಸೇರ್ಪಡೆಮೈಸೂರು, 03 ಜನವರಿ 2023: ಮೈಸೂರು ನಗರದ ಖ್ಯಾತ ಸಾಮಾಜಿಕ ಕಾರ್ಯಕರ್ತರಾದ ಫೈಸಲ್ ಅಹಮದ್‌, ಮನ್ಸೂರ್‌ ಖಾನ್, ಬಹುಜನ ಚಳವಳಿಯಲ್ಲಿ ತೊಡಗಿಸಿಕೊಂಡಿದ್ದ ಸಲ್ಮಾ ಬಾನು ಮತ್ತು ಸಾಮಾಜಿಕ ಕಾರ್ಯಕರ್ತೆ ಜ್ಯೋತಿ ಅವರು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಸದಸ್ಯತ್ವ ಪಡೆಯುವ ಮೂಲಕ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ರಾಜ್ಯದ ಅಧ್ಯಕ್ಷ ಅಬ್ದುಲ್‌ ಮಜೀದ್ ಅವರು ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಮಜೀದ್ ಅವರು, ಈ ನಾಲ್ವರೂ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಫೈಸಲ್ ಅಹಮದ್ ಅವರು ಈ ಹಿಂದೆ ಪಕ್ಷದಲ್ಲಿದ್ದರು ಆದರೆ ಕೆಲವು ವೈಯಕ್ತಿಕ ಕಾರಣಗಳಿಂದ ಪಕ್ಷದಿಂದ ದೂರವಿದ್ದರು. ಇದೀಗ ಮತ್ತೆ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಮನ್ಸೂ‌ರ್ ಖಾನ್ ಅವರು ಸಕ್ರಿಯ ಸಾಮಾಜಿಕ ಕಾರ್ಯಕರ್ತರು ಮತ್ತು ಸಲ್ಮಾ ಬಾನು ಅವರು ಬಹುಜನ ಚಳವಳಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವವರು. ಜ್ಯೋತಿ ಮೇಡಂ ಶಿಕ್ಷಕಿ ಮತ್ತು ಸಾಮಾಜಿಕ ಕಾರ್ಯಕರ್ತೆಯಾಗಿದ್ದಾರೆ. ಮೈಸೂರು ನಗರದ ಈ ನಾಲ್ವರು ಪ್ರಮುಖ ಸಮಾಜ ಸೇವಕರನ್ನು ನಾನು ಹೃತ್ತೂರ್ವಕವಾಗಿ ಪಕ್ಷಕ್ಕೆ ಸ್ವಾಗತಿಸುತ್ತೇನೆ ಎಂದರು. ಮೈಸೂರು ಜಿಲ್ಲೆಯ ಮೂಲೆ ಮೂಲೆಗಳಲ್ಲಿ ಎಸ್‌ಡಿಪಿಐ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಅವರೆಲ್ಲರೂ ಕಾರ್ಯ ನಿರ್ವಹಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಮಜೀದ್ ಅವರು ತಿಳಿಸಿದರು. ಈ ಸಂದರ್ಭದಲ್ಲಿ ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಲತೀಫ್, ಮೈಸೂರು ಜಿಲ್ಲಾಧ್ಯಕ್ಷ ರಫತ್‌ ಉಲ್ಲಾ ಖಾನ್, ಜಿಲ್ಲಾ ಸಮಿತಿ ಸದಸ್ಯ ಅಮ್ಮದ್‌ ಖಾನ್, ಜಿಲ್ಲಾ ಉಪಾಧ್ಯಕ್ಷ ಎಸ್‌.ಸ್ವಾಮಿ, ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಅಫ್ ಇಂಡಿಯಾ ಕರ್ನಾಟಕ

admin

Recent Posts

🗳️ POLLING DAY – 09.04.2026

This is your moment to decide the future of Davangere South.Vote for Afsar Kodlipete —…

1 day ago

ದಾವಣಗೆರೆ ಪಕ್ಷೇತರ ಅಭ್ಯರ್ಥಿಯಿಂದ ಅಫ್ಸರ್ ಕೊಡ್ಲಿಪೇಟೆಗೆ ಬೆಂಬಲ

ಕಾಂಗ್ರೆಸ್ಸಿನ ಹಿರಿಯ ಮುಖ೦ಡರು ದಾವಣಗೆರೆ ಉಪಚುನಾವಣೆಯ ಪಕ್ಷೇತರ ಅಭ್ಯರ್ಥಿಯೂ ಆದ ಎಚ್ ಸುಭಾನ್ ರವರು ಎಸ್ ಡಿ ಪಿ ಐ…

3 days ago

ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರ ಉಪ ಚುನಾವಣೆ -2026

ABHI NAHI ТОН КАВНІ NAHI SDPI ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ರವರ ಚುನಾವಣಾ ಪ್ರಚಾರಾರ್ಥವಾಗಿ ಬೃಹತ್ ర్యాలి ದಿನಾಂಕ…

3 days ago

ದಾವಣಗೆರೆ ದಕ್ಷಿಣ ವಿಧಾನ ಸಭಾ ಕ್ಷೇತ್ರ ಉಪ ಚುನಾವಣೆ -2026

Abhi Nahi tho kabhi nahiಸ್ವಾಭಿಮಾನಕ್ಕಾಗಿ ಮತ ನೀಡಿ SDPI ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಅವರಬೃಹತ್ ಪ್ರಚಾರ ಸಮಾವೇಶ PLACE…

5 days ago