Categories: featureNewsPolitics

ಮೈಸೂರು ನಗರದ ಪ್ರಮುಖ ಸಾಮಾಜಿಕ ಕಾರ್ಯಕರ್ತರು ಎಸ್‌ಡಿಪಿಐ ಪಕ್ಷಕ್ಕೆ ಸೇರ್ಪಡೆಮೈಸೂರು, 03 ಜನವರಿ 2023: ಮೈಸೂರು ನಗರದ ಖ್ಯಾತ ಸಾಮಾಜಿಕ ಕಾರ್ಯಕರ್ತರಾದ ಫೈಸಲ್ ಅಹಮದ್‌, ಮನ್ಸೂರ್‌ ಖಾನ್, ಬಹುಜನ ಚಳವಳಿಯಲ್ಲಿ ತೊಡಗಿಸಿಕೊಂಡಿದ್ದ ಸಲ್ಮಾ ಬಾನು ಮತ್ತು ಸಾಮಾಜಿಕ ಕಾರ್ಯಕರ್ತೆ ಜ್ಯೋತಿ ಅವರು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಸದಸ್ಯತ್ವ ಪಡೆಯುವ ಮೂಲಕ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ರಾಜ್ಯದ ಅಧ್ಯಕ್ಷ ಅಬ್ದುಲ್‌ ಮಜೀದ್ ಅವರು ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಮಜೀದ್ ಅವರು, ಈ ನಾಲ್ವರೂ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಫೈಸಲ್ ಅಹಮದ್ ಅವರು ಈ ಹಿಂದೆ ಪಕ್ಷದಲ್ಲಿದ್ದರು ಆದರೆ ಕೆಲವು ವೈಯಕ್ತಿಕ ಕಾರಣಗಳಿಂದ ಪಕ್ಷದಿಂದ ದೂರವಿದ್ದರು. ಇದೀಗ ಮತ್ತೆ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಮನ್ಸೂ‌ರ್ ಖಾನ್ ಅವರು ಸಕ್ರಿಯ ಸಾಮಾಜಿಕ ಕಾರ್ಯಕರ್ತರು ಮತ್ತು ಸಲ್ಮಾ ಬಾನು ಅವರು ಬಹುಜನ ಚಳವಳಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವವರು. ಜ್ಯೋತಿ ಮೇಡಂ ಶಿಕ್ಷಕಿ ಮತ್ತು ಸಾಮಾಜಿಕ ಕಾರ್ಯಕರ್ತೆಯಾಗಿದ್ದಾರೆ. ಮೈಸೂರು ನಗರದ ಈ ನಾಲ್ವರು ಪ್ರಮುಖ ಸಮಾಜ ಸೇವಕರನ್ನು ನಾನು ಹೃತ್ತೂರ್ವಕವಾಗಿ ಪಕ್ಷಕ್ಕೆ ಸ್ವಾಗತಿಸುತ್ತೇನೆ ಎಂದರು. ಮೈಸೂರು ಜಿಲ್ಲೆಯ ಮೂಲೆ ಮೂಲೆಗಳಲ್ಲಿ ಎಸ್‌ಡಿಪಿಐ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಅವರೆಲ್ಲರೂ ಕಾರ್ಯ ನಿರ್ವಹಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಮಜೀದ್ ಅವರು ತಿಳಿಸಿದರು. ಈ ಸಂದರ್ಭದಲ್ಲಿ ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಲತೀಫ್, ಮೈಸೂರು ಜಿಲ್ಲಾಧ್ಯಕ್ಷ ರಫತ್‌ ಉಲ್ಲಾ ಖಾನ್, ಜಿಲ್ಲಾ ಸಮಿತಿ ಸದಸ್ಯ ಅಮ್ಮದ್‌ ಖಾನ್, ಜಿಲ್ಲಾ ಉಪಾಧ್ಯಕ್ಷ ಎಸ್‌.ಸ್ವಾಮಿ, ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಅಫ್ ಇಂಡಿಯಾ ಕರ್ನಾಟಕ

admin

Recent Posts

Hiriyur By-Election: SDPI ke Muqablay Mein Utarne Ki Sifarish Riyasati Qiyadat Ko Bhej Di Gayi

Hiriyur, 9 June Hiriyur Assembly Halqe mein mutawaqqa by-election ko madde nazar rakhte hue SDPI…

4 days ago

ಹಿರಿಯೂರು ಉಪಚುನಾವಣೆ: ಎಸ್‌ಡಿಪಿಐ

ಸ್ಪರ್ಧೆಗೆ ರಾಜ್ಯ ನಾಯಕತ್ವಕ್ಕೆ ಶಿಫಾರಸು ಹಿರಿಯೂರು : 9 ಜೂನ್ ಹಿರಿಯೂರು ವಿಧಾನಸಭಾ ಕ್ಷೇತ್ರದ ಸಂಭವನೀಯ ಉಪಚುನಾವಣೆಯನ್ನು ಗಮನದಲ್ಲಿಟ್ಟುಕೊಂಡು ಎಸ್‌ಡಿಪಿಐ…

4 days ago

ಮೈಸೂರು ಜಿಲ್ಲಾ ನಾಯಕರ ಸಭೆ ಯಶಸ್ವಿಯಾಗಿ ನೆರವೇರಿತುಮೈಸೂರಿನಲ್ಲಿ ಎಸ್‌ಡಿಪಿಐ ಜಿಲ್ಲಾ ನಾಯಕರ ಮಹತ್ವದ ಸಭೆ ನಡೆಯಿತು.ಸಭೆಯಲ್ಲಿ ಜಿಲ್ಲೆಯ ಪ್ರಸ್ತುತ ರಾಜಕೀಯ ಪರಿಸ್ಥಿತಿ, ಜನಸಾಮಾನ್ಯರು ಎದುರಿಸುತ್ತಿರುವ ಪ್ರಮುಖ ಸಮಸ್ಯೆಗಳು, ಸ್ಥಳೀಯ ಜನರ ಅಗತ್ಯಗಳು ಹಾಗೂ ಮುಂಬರುವ ಚುನಾವಣಾ ಸವಾಲುಗಳ ಕುರಿತು ಸಮಗ್ರ ಚರ್ಚೆ ನಡೆಸಲಾಯಿತು. ಅಲ್ಲದೆ, ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ ನೀಡುವ ಹಾಗೂ ಮತದಾರರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಅವರ ಹಕ್ಕುಗಳಿಗಾಗಿ ಹೋರಾಡುವ ಕಾರ್ಯಯೋಜನೆ ರೂಪಿಸಲಾಯಿತು.ಸಭೆಯಲ್ಲಿ ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ರಾಜ್ಯ ಉಪಾಧ್ಯಕ್ಷ ಅಬ್ದುಲ್ ಹನ್ನಾನ್, ರಾಜ್ಯ ಕಾರ್ಯದರ್ಶಿ ಅಕ್ರಮ್ ಮೌಲಾನ ಹಾಗೂ ರಾಜ್ಯ ಖಜಾಂಚಿ ಅಮ್ಜದ್ ಖಾನ್ ಪ್ರಮುಖ ವಿಷಯಗಳ ಕುರಿತು ಮಾರ್ಗದರ್ಶನ ನೀಡಿದರು.ಜಿಲ್ಲಾ ಕಾರ್ಯಧ್ಯಕ್ಷ ಶಫಿವುಲ್ಲಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಳಾದ ಫಿರ್ದೋಸ್, ಅಝೀಮ್ ಸಭೆಯ ನೇತ್ರತ್ವ ವಹಿಸಿದ್ದರು.ಜನಪರ ಹೋರಾಟಗಳನ್ನು ಮತ್ತಷ್ಟು ಬಲಪಡಿಸಿ, ಸಮಾಜದ ಎಲ್ಲ ವರ್ಗಗಳ ಧ್ವನಿಯಾಗುವ ಸಂಕಲ್ಪದೊಂದಿಗೆ ಸಭೆ ಯಶಸ್ವಿಯಾಗಿ ಸಂಪನ್ನಗೊಂಡಿತು.

ಮೈಸೂರು ಜಿಲ್ಲಾ ನಾಯಕರ ಸಭೆ ಯಶಸ್ವಿಯಾಗಿ ನೆರವೇರಿತುಮೈಸೂರಿನಲ್ಲಿ ಎಸ್‌ಡಿಪಿಐ ಜಿಲ್ಲಾ ನಾಯಕರ ಮಹತ್ವದ ಸಭೆ ನಡೆಯಿತು.ಸಭೆಯಲ್ಲಿ ಜಿಲ್ಲೆಯ ಪ್ರಸ್ತುತ ರಾಜಕೀಯ…

5 days ago

ಜಿಲ್ಲಾ ಪ್ರತಿನಿಧಿ ಸಭೆDISTRICT REPRESENTATIVE COUNCIL

Hearty Welcome MUJAHID PASHAState General Secretary RIYAZ KADAMBUState Secretary SALEEM AHMEDDistrict President DR. SHAIK TABREZDistrict…

1 week ago

WORLD ENVIRONMENT DAY

ವಿಶ್ವ ಪರಿಸರ ದಿನಾಚರಣೆ 05 JUNE ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ! ಇಂದು ನಾವು ನೆಡುವ ಒಂದು ಸಣ್ಣಗಿಡ, ನಾಳಿನ…

1 week ago