Categories: featureNewsPolitics

ಮೈಸೂರು ನಗರದ ಪ್ರಮುಖ ಸಾಮಾಜಿಕ ಕಾರ್ಯಕರ್ತರು ಎಸ್‌ಡಿಪಿಐ ಪಕ್ಷಕ್ಕೆ ಸೇರ್ಪಡೆಮೈಸೂರು, 03 ಜನವರಿ 2023: ಮೈಸೂರು ನಗರದ ಖ್ಯಾತ ಸಾಮಾಜಿಕ ಕಾರ್ಯಕರ್ತರಾದ ಫೈಸಲ್ ಅಹಮದ್‌, ಮನ್ಸೂರ್‌ ಖಾನ್, ಬಹುಜನ ಚಳವಳಿಯಲ್ಲಿ ತೊಡಗಿಸಿಕೊಂಡಿದ್ದ ಸಲ್ಮಾ ಬಾನು ಮತ್ತು ಸಾಮಾಜಿಕ ಕಾರ್ಯಕರ್ತೆ ಜ್ಯೋತಿ ಅವರು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಸದಸ್ಯತ್ವ ಪಡೆಯುವ ಮೂಲಕ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ರಾಜ್ಯದ ಅಧ್ಯಕ್ಷ ಅಬ್ದುಲ್‌ ಮಜೀದ್ ಅವರು ಅವರನ್ನು ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಮಜೀದ್ ಅವರು, ಈ ನಾಲ್ವರೂ ಸಮಾಜದ ವಿವಿಧ ಕ್ಷೇತ್ರಗಳಲ್ಲಿ ಹಲವಾರು ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದಾರೆ. ಫೈಸಲ್ ಅಹಮದ್ ಅವರು ಈ ಹಿಂದೆ ಪಕ್ಷದಲ್ಲಿದ್ದರು ಆದರೆ ಕೆಲವು ವೈಯಕ್ತಿಕ ಕಾರಣಗಳಿಂದ ಪಕ್ಷದಿಂದ ದೂರವಿದ್ದರು. ಇದೀಗ ಮತ್ತೆ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಮನ್ಸೂ‌ರ್ ಖಾನ್ ಅವರು ಸಕ್ರಿಯ ಸಾಮಾಜಿಕ ಕಾರ್ಯಕರ್ತರು ಮತ್ತು ಸಲ್ಮಾ ಬಾನು ಅವರು ಬಹುಜನ ಚಳವಳಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವವರು. ಜ್ಯೋತಿ ಮೇಡಂ ಶಿಕ್ಷಕಿ ಮತ್ತು ಸಾಮಾಜಿಕ ಕಾರ್ಯಕರ್ತೆಯಾಗಿದ್ದಾರೆ. ಮೈಸೂರು ನಗರದ ಈ ನಾಲ್ವರು ಪ್ರಮುಖ ಸಮಾಜ ಸೇವಕರನ್ನು ನಾನು ಹೃತ್ತೂರ್ವಕವಾಗಿ ಪಕ್ಷಕ್ಕೆ ಸ್ವಾಗತಿಸುತ್ತೇನೆ ಎಂದರು. ಮೈಸೂರು ಜಿಲ್ಲೆಯ ಮೂಲೆ ಮೂಲೆಗಳಲ್ಲಿ ಎಸ್‌ಡಿಪಿಐ ಪಕ್ಷವನ್ನು ಬಲಪಡಿಸುವ ನಿಟ್ಟಿನಲ್ಲಿ ಅವರೆಲ್ಲರೂ ಕಾರ್ಯ ನಿರ್ವಹಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ಮಜೀದ್ ಅವರು ತಿಳಿಸಿದರು. ಈ ಸಂದರ್ಭದಲ್ಲಿ ಎಸ್‌ಡಿಪಿಐ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಲತೀಫ್, ಮೈಸೂರು ಜಿಲ್ಲಾಧ್ಯಕ್ಷ ರಫತ್‌ ಉಲ್ಲಾ ಖಾನ್, ಜಿಲ್ಲಾ ಸಮಿತಿ ಸದಸ್ಯ ಅಮ್ಮದ್‌ ಖಾನ್, ಜಿಲ್ಲಾ ಉಪಾಧ್ಯಕ್ಷ ಎಸ್‌.ಸ್ವಾಮಿ, ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಅಫ್ ಇಂಡಿಯಾ ಕರ್ನಾಟಕ

admin

Recent Posts

ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ

ಚಲೋ ಬೆಂಗಳೂರು 19 August 2026 CHALO BENGALURU SDPIKarnataka #ChaloBengaluru

4 hours ago

“ಸ್ವಾತಂತ್ರ್ಯ ಎಲ್ಲರ ಹಕ್ಕು-ವಿಚಾರಣಾಧೀನರಿಗೂ ಅದೇ ಹಕ್ಕು!”

ಸ್ವಾತಂತ್ರ್ಯವೆಂದರೆ ಕೇವಲ ಧ್ವಜಾರೋಹಣ ಮತ್ತು ಸಂಭ್ರಮವಲ್ಲ. ಅದು ಪ್ರತಿಯೊಬ್ಬ ನಾಗರಿಕನಿಗೂ ಸಮಾನ ಹಕ್ಕು, ಗೌರವ, ನ್ಯಾಯ ಮತ್ತು ಘನತೆಯ ಬದುಕು.…

15 hours ago

ಸ್ವಾತಂತ್ರೋತ್ಸವ ಸಂದೇಶ

ಸ್ವಾತಂತ್ರ್ಯವೆಂದರೆ ಕೇವಲ ಧ್ವಜಾರೋಹಣ, ರಾಷ್ಟ್ರಗೀತೆ ಮತ್ತು ಸಂಭ್ರಮಾಚರಣೆಗೆ ಸೀಮಿತವಾದುದಲ್ಲ. ಸ್ವಾತಂತ್ರ್ಯವೆಂದರೆ ಪ್ರತಿಯೊಬ್ಬ ನಾಗರಿಕನಿಗೂ ಸಮಾನವಾಗಿ ದೊರೆಯಬೇಕಾದ ಹಕ್ಕು, ಗೌರವ, ನ್ಯಾಯ…

15 hours ago

Independence Day Message

Independence is not merely about hoisting the national flag, singing the national anthem, or celebrating…

15 hours ago

ಸ್ವಾತಂತ್ರ್ಯ ಎಲ್ಲರ ಹಕ್ಕು, ವಿಚಾರಣಾಧೀನರಿಗೂ ಅದೇ ಹಕ್ಕು..

CELEBRATING 80th Independence Day 15th August 2026 ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ಕಾರ್ಯಕ್ರಮಗಳು ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸುವ ಕಾರ್ಯಕ್ರಮಗಳು…

23 hours ago

15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಉರ್ದು ಶಿಕ್ಷಕರನ್ನು ಕಡೆಗಣಿಸಲಾಗಿದೆ: ಖಾಲಿ ಹುದ್ದೆಗಳನ್ನು ಮರುಪರಿಶೀಲಿಸಿ ಭರ್ತಿ ಮಾಡಲು ಅಪ್ಸರ್ ಕೊಡ್ಲಿಪೇಟೆ ಆಗ್ರಹ

ಬೆಂಗಳೂರು, ಆ. 14 : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವ ಉದ್ದೇಶದಿಂದ ರಾಜ್ಯ…

1 day ago