ವೈಯಕ್ತಿಕ ಗಲಾಟೆಗಳಿಗೂ ಕೋಮು ಸಂಘರ್ಷದ ಬಣ್ಣ ಹಚ್ಚಲು ಹವಣಿಸುತ್ತಿರುವ ಬಿಜೆಪಿ ಮತ್ತು ಸಂಘಪರಿವಾರ‌ದ ನೀಚತನಕ್ಕೆ ಸಾಗರದ ಘಟನೆಯೇ ಸಾಕ್ಷಿ: ಎಸ್‌.ಡಿ.ಪಿ.ಐ.

ಪತ್ರಿಕಾ ಪ್ರಕಟಣೆ

ವೈಯಕ್ತಿಕ ಗಲಾಟೆಗಳಿಗೂ ಕೋಮು ಸಂಘರ್ಷದ ಬಣ್ಣ ಹಚ್ಚಲು ಹವಣಿಸುತ್ತಿರುವ ಬಿಜೆಪಿ ಮತ್ತು ಸಂಘಪರಿವಾರ‌ದ ನೀಚತನಕ್ಕೆ ಸಾಗರದ ಘಟನೆಯೇ ಸಾಕ್ಷಿ: ಎಸ್‌.ಡಿ.ಪಿ.ಐ.

ಬೆಂಗಳೂರು, 10 ಜನವರಿ 2023: ಕೋಮು ದ್ವೇಷವನ್ನೇ ಉಸಿರಾಡುವ ಭ್ರಷ್ಟ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಗಲಭೆ ಸೃಷ್ಟಿಸಲು ತುದಿಗಾಲಲ್ಲಿ ನಿಂತಿದೆ. ವೈಯಕ್ತಿಕ ಗಲಾಟೆಗಳಿಗೂ ಸಹ ಕೋಮು ಸಂಘರ್ಷದ ಬಣ್ಣ ನೀಡಲು ಸಂಘಪರಿವಾರದ ಗೂಂಡಾಗಳ ಮೂಲಕ ಹವಣಿಸುತ್ತಿದೆ ಎನ್ನುವುದಕ್ಕೆ ಸಾಗರದಲ್ಲಿ ನಡೆದ ‘ಸಂಘಪರಿವಾರದ ಕಾರ್ಯಕರ್ತನ ಕೊಲೆ ಯತ್ನ’ ಎಂಬ ಅರ್ದಸತ್ಯ ಘಟನೆಯೇ ಸಾಕ್ಷಿ. ಚುನಾವಣೆಯ ಹೊಸ್ತಿಲಲ್ಲಿ, ಸೋಲು ನಿಶ್ಚಿತವಾಗಿರುವ ಭಯದಲ್ಲಿ ಬಿಜೆಪಿ ಇಂತಹ ನೀಚತನಕ್ಕೆ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಮಟ್ಟದಲ್ಲಿ ತೊಡಗಿಸಿಕೊಳ್ಳಲಿದೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಲತೀಫ್ ಪುತ್ತೂರು ಅವರು ಹೇಳಿದ್ದಾರೆ.

ಸುನಿಲ್ ಎಂಬ ಬಜರಂಗದಳದ ಕಾರ್ಯಕರ್ತ ಸುಮಾರು ನಾಲ್ಕೈದು ತಿಂಗಳುಗಳಿಂದ ಸಮೀರ್ ಎಂಬವನ ಸಹೋದರಿಯನ್ನು ಚುಡಾಯಿಸುವ ನೀಚ ಕೆಲಸ ಮಾಡುತ್ತಿದ್ದ. ಇದೇ ವಿಚಾರವಾಗಿ ಈ ಹಿಂದೆಯೂ ಸಮೀರ್ ಮತ್ತು ಸುನಿಲ್ ನಡುವೆ ಸಂಘರ್ಷ ಏರ್ಪಟ್ಟಿತ್ತು. ನಿನ್ನೆ ಇದೇ ವಿಚಾರವಾಗಿ ಸುನಿಲ್ ಮೇಲೆ ಹಲ್ಲೆಯಾಗಿದೆ. ಸುನಿಲ್ ಆಕೆಯನ್ನು ಚುಡಾಯಿಸುವ ಕಾಲ್ ರೆಕಾರ್ಡ್ಸ್ ಕೂಡ ಲಭ್ಯವಿದೆ ಎಂದು ಪೋಲೀಸ್ ಎಸ್‌ಪಿ ಜಿ.ಕೆ. ಮಿಥುನ್ ಅವರು ಹೇಳಿದ್ದಾರೆ. ವಿಷಯ ಹೀಗಿರಬೇಕಾದರೆ ಇದಕ್ಕೆ ಕೋಮು ದ್ವೇಷದ ಬಣ್ಣ ಹಚ್ಚಿ ಸಾಗರ ಬಂದ್ ಗೆ ಕರೆ ಕೊಡುವ ಮೂಲಕ ಬಿಜೆಪಿ ಮತ್ತು ಸಂಘಪರಿವಾರ ಶಾಂತಿ ಕದಡುವ ಪ್ರಯತ್ನ ಮಾಡುತ್ತಿದೆ ಎಂದು ಲತೀಫ್ ಅವರು ತಮ್ಮ ಪ್ರಕಟಣೆಯಲ್ಲಿ ಹೇಳಿದ್ದಾರೆ.

ಎಲ್ಲಾ ರಂಗದಲ್ಲೂ ಹೀನಾಯವಾಗಿ ಸೋತಿರುವ ಕೋಮುವಾದಿ ಬಿಜೆಪಿ ಸರ್ಕಾರಕ್ಕೆ ಜನರ ಮುಂದೆ ಹೋಗುವ ಮುಖ ಉಳಿದಿಲ್ಲ. ಹಾಗಾಗಿ ಕೋಮು ದ್ವೇಷದ ಮೂಲಕ ಅಧಿಕಾರವನ್ನು ಉಳಿಸಿಕೊಳ್ಳುವ ದುಷ್ಟ ಯೋಜನೆಗಳನ್ನು ರೂಪಿಸಿಕೊಳ್ಳುತ್ತಿದೆ ಎಂದು ಅವರು ಆರೋಪಿಸಿದರು. ಇತ್ತೀಚೆಗೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅಭಿವೃದ್ಧಿ, ಕಾಮಗಾರಿ ಕೇಳಬೇಡಿ, ಲವ್ ಜಿಹಾದ್ ರೀತಿಯ ಕೋಮು ದ್ವೇಷದ ವಿಚಾರಗಳ ಬಗ್ಗೆ ಮಾತನಾಡಿ ಎಂದಿರುವುದು ಬಿಜೆಪಿಯ ಚುನಾವಣಾ ಅಜಂಡಾವನ್ನು ಸ್ಪಷ್ಟ ಪಡಿಸುತ್ತದೆ. ಅದರ ಭಾಗವಾಗಿ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿ ನಿರಂತರವಾಗಿ ಕೋಮು ದ್ವೇಷದ ವಾತಾವರಣವನ್ನು ಸೃಷ್ಟಿ ಮಾಡಲಾಗುತ್ತಿದೆ.
ಈ ದುಷ್ಟ ಸರ್ಕಾರಕ್ಕೆ ಶಾಂತಿ ಬೇಕಾಗಿಲ್ಲ ಎಂದ ಅವರು, ಇಂತಹ ಪರಿಸ್ಥಿತಿಯಲ್ಲಿ ಪೋಲಿಸ್ ಇಲಾಖೆ ಎಚ್ಚೆತ್ತುಕೊಂಡು ಶಾಂತಿ ಕಾಪಾಡುವ ನಿಟ್ಟಿನಲ್ಲಿ ತನ್ನ ಸಾಂವಿಧಾನಿಕ ಜವಾಬ್ದಾರಿಯನ್ನು ನಿಭಾಯಿಸಬೇಕು ಎಂದು ತಮ್ಮ ಪ್ರಕಟಣೆಯಲ್ಲಿ ಅವರು ಆಗ್ರಹಿಸಿದ್ದಾರೆ.

ಪ್ರಕಟಣೆ:
ರಿಯಾಝ್ ಕಡಂಬು
ರಾಜ್ಯ ಮಾಧ್ಯಮ ಉಸ್ತುವಾರಿ
SDPI ಕರ್ನಾಟಕ
8073344640

admin

Recent Posts

ಜಿಲ್ಲಾ ಪ್ರತಿನಿಧಿ ಸಭೆDISTRICT REPRESENTATIVE COUNCIL

Hearty Welcome MUJAHID PASHAState General Secretary RIYAZ KADAMBUState Secretary SALEEM AHMEDDistrict President DR. SHAIK TABREZDistrict…

2 hours ago

WORLD ENVIRONMENT DAY

ವಿಶ್ವ ಪರಿಸರ ದಿನಾಚರಣೆ 05 JUNE ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ! ಇಂದು ನಾವು ನೆಡುವ ಒಂದು ಸಣ್ಣಗಿಡ, ನಾಳಿನ…

1 day ago

SDPI ಮಂಗಳೂರು ಗ್ರಾಮಾಂತರ ಜಿಲ್ಲಾ ಸಮಿತಿಯ ಸದಸ್ಯರು, ಪುತ್ತೂರಿನ ಹಿರಿಯ ಉದ್ಯಮಿ, ಸಮಾಜಸೇವಕರು ಹಾಗೂ ವಿವಿಧ ಧಾರ್ಮಿಕ ಮತ್ತು ಸಾಮಾಜಿಕ ಸಂಘಟನೆಗಳಲ್ಲಿ ಮಹತ್ವದ ಜವಾಬ್ದಾರಿಗಳನ್ನು ನಿರ್ವಹಿಸಿದ್ದ ಸಾಗರ್ ಇಬ್ರಾಹಿಂ ಹಾಜಿ ಅವರ ನಿಧನದ ಸುದ್ದಿ ಅತ್ಯಂತ ದುಃಖವನ್ನುಂಟು ಮಾಡಿದೆ.ಅವರು ಸಮಾಜದ ಅಭಿವೃದ್ಧಿ, ಧಾರ್ಮಿಕ ಸೇವೆ ಹಾಗೂ ಜನಸಾಮಾನ್ಯರ ಕಲ್ಯಾಣಕ್ಕಾಗಿ ಸಲ್ಲಿಸಿದ ಕೊಡುಗೆಗಳು ಸದಾ ಸ್ಮರಣೀಯವಾಗಿರಲಿವೆ. ಅವರ ಅಗಲಿಕೆಯಿಂದ ಕುಟುಂಬಕ್ಕೆ ಮಾತ್ರವಲ್ಲ, ಪುತ್ತೂರು ಭಾಗದ ಸಮುದಾಯಕ್ಕೂ ಮತ್ತು SDPI ಪಕ್ಷಕ್ಕೂ ತುಂಬಲಾರದ ನಷ್ಟ ಉಂಟಾಗಿದೆ.ಅಲ್ಲಾಹು ತಆಲಾ ಮರ್ಹೂಮ್ ಸಾಗರ್ ಇಬ್ರಾಹಿಂ ಹಾಜಿಯವರ ಸಕಲ ಸತ್ಕರ್ಮಗಳನ್ನು ಸ್ವೀಕರಿಸಿ, ಅವರಿಗೆ ಜನ್ನತುಲ್ ಫಿರ್ದೌಸ್ ಅನುಗ್ರಹಿಸಲಿ. ಅವರ ಕುಟುಂಬಸ್ಥರು, ಬಂಧುಬಳಗ ಮತ್ತು ಅಭಿಮಾನಿಗಳಿಗೆ ಈ ದುಃಖವನ್ನು ಸಹಿಸುವ ಶಕ್ತಿ ಮತ್ತು ತಾಳ್ಮೆಯನ್ನು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ.

~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು, SDPI ಕರ್ನಾಟಕ SDPIKarnataka #Mangalore

2 days ago

ಜಿಲ್ಲಾ ಪ್ರತಿನಿಧಿ ಸಭೆ

DRC DISTRICT REPRESENTATIVE COUNCIL Heartly Welcome ABDUL HANNANState Vice President MAULANA AKRAMState Secretary ABDUL RAHEEM…

7 days ago

HAPPY Eid Al-Adha

Wishing you a beautiful and blessed Eid. Warm Wishes on Eid ul Adha May the…

1 week ago