Categories: featureNewsPolitics

ಕರ್ನಾಟಕ ವಿಧಾನಸಭಾ ಚುನಾವಣೆ – 2023ಹಾಸನ ಜಿಲ್ಲಾ ಚುನಾವಣಾ ಪೂರ್ವಭಾವಿ ಸಭೆರಾಜ್ಯ ಚುನಾವಣಾ ಉಸ್ತುವಾರಿ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ಅಫ್ಸರ್ ಕೊಡ್ಲಿಪೇಟೆ ಅವರ ನೇತೃತ್ವದಲ್ಲಿ ಹಾಸನ ಜಿಲ್ಲೆಯಲ್ಲಿ ವಿಧಾನಸಭಾ ಚುನಾವಣೆಯ ಪೂರ್ವಭಾವಿ ಸಭೆ ನಡೆಸಲಾಯಿತು. ಈ ಸಂದರ್ಭದಲ್ಲಿ ಅಫ್ಸರ್ ಕೊಡ್ಲಿಪೇಟೆ ಅವರು ಈ ಕೆಳಗಿನ ಪ್ರಶ್ನೆಗಳನ್ನು ಸಭೆಯ ಮುಂದಿಟ್ಟು ಚರ್ಚೆ ನಡೆಸಿದರು.2023 ಹಾಸನ ವಿಧಾನಸಭಾ ಕ್ಷೇತ್ರ ಚುನಾವಣೆಯಲ್ಲಿ ವಿವಿಧ ಪಕ್ಷಗಳ ಅಭ್ಯರ್ಥಿಗಳ ರೇಸ್ ನಲ್ಲಿ ಒಬ್ಬೇ ಒಬ್ಬ ಅಲ್ಪಸಂಖ್ಯಾತ ಅಥವಾ ದಲಿತ ಅಭ್ಯರ್ಥಿಯ ಹೆಸರಿದೆಯೇ? ಈ ಕ್ಷೇತ್ರದಲ್ಲಿ ಸ್ವಾತಂತ್ರ್ಯ ಬಂದ ನಂತರ ಅಲ್ಪಸಂಖ್ಯಾತರು ಕೇವಲ ಓಟ್ ಬ್ಯಾಂಕ್ ಆಗಿ ಮಾತ್ರ ಬಳಕೆಯಾಗಿರುವುದು ನಿಜವಲ್ಲವೇ? ಸ್ವಾಭಿಮಾನದ ರಾಜಕಾರಣಕ್ಕಾಗಿ ಎಸ್.ಡಿ.ಪಿ.ಐ ಪಕ್ಷ ಈ ಬಾರಿ ಒಬ್ಬ ಅಲ್ಪಸಂಖ್ಯಾತ ಅಥವಾ ದಲಿತ ಸಮುದಾಯದ ಜನಪರ ಕಾಳಜಿ ಹೊಂದಿರುವ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎಂಬ ಕೂಗು ಕೇಳಿ ಬರುತ್ತಿದೆ ಇದು ಸರಿಯೇ? ಹಾಗೇನಾದರೂ ಆದಲ್ಲಿ ಈ ಬಾರಿ ಹಾಸನ ಕ್ಷೇತ್ರದಲ್ಲಿ ಸಕಾರಾತ್ಮಕ ರಾಜಕಾರಣದ ಬದಲಾವಣೆಯ ಗಾಳಿ ಬೀಸುವ ಸಾಧ್ಯತೆ ಇದೆಯೇ? ಅಲ್ಪಸಂಖ್ಯಾತ, ದಲಿತ ಮತದಾರರು ಎಚ್ಚರಗೊಳ್ಳುವರೇ?

Recent Posts

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI) ಕರ್ನಾಟಕ ರಾಜ್ಯ ಸಮಿತಿಯ ರಾಜ್ಯ ಪ್ರತಿನಿಧಿಗಳ ಸಭೆ (SRC) ರಾಯಚೂರಿನಲ್ಲಿ ಅದ್ದೂರಿಯಾಗಿ ಆರಂಭವಾಯಿತು.

ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಅವರು ರಾಜ್ಯ ಸಮಿತಿ ಸದಸ್ಯರು ಹಾಗೂ ವಿವಿಧ ಜಿಲ್ಲೆಗಳ ಮುಖಂಡರೊಂದಿಗೆ ಪಕ್ಷದ ಧ್ವಜಾರೋಹಣ ನೆರವೇರಿಸುವ ಮೂಲಕ…

14 hours ago