Categories: featureNewsPolitics

ಎಸ್.ಡಿ.ಪಿ.ಐ ಮೈಸೂರು ಜಿಲ್ಲೆ, ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಬೂತ್ ಉಸ್ತುವಾರಿಗಳ ಸಭೆ – 2023ಸೋಶಿಯಲ್ ಡೆಮಾಕ್ರಟಕ್ ಪಾರ್ಟಿ ಆಫ್ ಇಂಡಿಯಾ (ಎಸ್.ಡಿ.ಪಿ.ಐ) ಪಕ್ಷದ ವತಿಯಿಂದ 2023ರ ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯ ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಬೂತ್ ಉಸ್ತುವಾರಿಗಳ ಸಭೆಯನ್ನು ಪಕ್ಷದ ಸಂಘಟನಾ ಪ್ರಧಾನ ಕಾರ್ಯದರ್ಶಿ ಮಜೀದ್ ತುಂಬೆ ಅವರ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು. ಸಭೆಯಲ್ಲಿ ಚುನಾವಣಾ ತಂತ್ರ ಮತ್ತು ಬೂತ್ ಮಟ್ಟದಲ್ಲಿ ನಡೆಸಬೇಕಾದ ಯೋಜನೆಗಳ ಬಗ್ಗೆ ಚರ್ಚಿಸಲಾಯಿತು.ಕ್ಷೇತ್ರದ ಅಭ್ಯರ್ಥಿ ಹಾಗೂ ಪಕ್ಷದ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್‌ ಮೈಸೂರು ಅವರು ಸಮಾರೋಪ ಮಾತುಗಳನ್ನು ಆಡಿದರು. ಈ ಸಭೆಯಲ್ಲಿ ಮೈಸೂರು ಜಿಲ್ಲಾ ಅಧ್ಯಕ್ಷ ರಫತ್ ಉಲ್ಲಾ ಖಾನ್, ಜಿಲ್ಲಾ ಪಕ್ಷ ಸಂಘಟನಾ ಕಾರ್ಯದರ್ಶಿ ಆಕ್ರಂ, ಸಂಪನ್ಮೂಲ ವ್ಯಕ್ತಿಯಾಗಿ ಅಪ್ಸರ್ ಹುಣಸೂರು ಹಾಗೂ ಎಲ್ಲ ಬೂತ್ ಸಮಿತಿ ಉಸ್ತುವಾರಿಗಳು ಭಾಗವಹಿಸಿದ್ದರು.ಸೋಶಿಯಲ್ ಡೆಮಾಕ್ರಟಿಕ್ ಪಾಟಿ ಆಫ್ ಇಂಡಿಯಾ ಮೈಸೂರು

admin

Recent Posts

Condolences

It is with deep sorrow that I have learned the news of the demise of…

23 hours ago