Categories: featureNewsPolitics

ಸೋಶಿಯಲ್ ಡೆಮೊಕ್ರಾಟಿಕ್ ಪಾರ್ಟಿ ಆಫ್ ಇಂಡಿಯಾ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಸಮಿತಿ ಸಭೆಗೆ ರಾಜ್ಯ ನಾಯಕರ ಭೇಟಿ.ದಾವಣಗೆರೆ: ಎಸ್.ಡಿ.ಪಿ.ಐ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ ಸಮಿತಿಯ ಸಭೆಯು ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಚುನಾವಣಾ ಉಸ್ತುವಾರಿ ಅಪ್ಸರ್ ಕೊಡ್ಲಿಪೇಟೆ ರವರ ಸಮ್ಮುಖದಲ್ಲಿ ದಾವಣಗೆರೆಯಲ್ಲಿ ಜರುಗಿತು.ಪ್ರಾಸ್ತಾವಿಕವಾಗಿ ಮಾತನಾಡಿದ ಅಫ್ಸರ್ ಕೊಡ್ಲಿಪೇಟೆ ಹಾಲಿ ಕ್ಷೇತ್ರದ ಶಾಸಕರು ಚುನಾವಣೆ ಬಂದಾಗ ಮಾತ್ರ ಕ್ಷೇತ್ರಕ್ಕೆ ಭೇಟಿ ಕೊಡುತ್ತಾರೆ, ಕಳೆದ 25 ವರ್ಷಗಳಿಂದ ಶಾಸಕರಾಗಿ ಜನರ ಕಷ್ಟಗಳಿಗೆ ಸ್ಪಂದಿಸದೆ ಮತದಾರರಿಗೆ ಮೋಸ ಮಾಡಿದ್ದಾರೆ. ಕ್ಷೇತ್ರದ ಅಭಿವೃದ್ಧಿಗಾಗಿ ಇವರ ಕೂಡುಗೆಯೇನು? ಕ್ಷೇತ್ರದಲ್ಲಿ ಸರಿಯಾದ ಒಂದು ಸಾರ್ವಜನಿಕ ಆಸ್ಪತ್ರೆ ಇಲ್ಲದ ಕಾರಣ ಬಡತನ ರೇಖೆಗಿಂತ ಕೆಳಗೆ ಇರುವ ಇಲ್ಲಿನ ಜನರು ಚಿಕಿತ್ಸೆಗಾಗಿ ಪರಿದಾಡುವ ಪರಿಸ್ಥಿತಿ ಇದೆ. ಪ್ರತಿ ಬಾರಿ ಚುನಾವಣೆ ಬಂದಾಗ ವಸತಿಗೃಹ ನಿರ್ಮಾಣ ಮಾಡಿಕೊಡುವ ಭರವಸೆ ನೀಡಿ ಹೆಗಡೆ ನಗರ ನಿವಾಸಿಗಳನ್ನು ಕೇವಲ ಮತ ಬ್ಯಾಂಕ್ ಆಗಿ ಉಪಯೋಗಿಸಲಾಗುತ್ತಿದೆ, ಇವರಿಗೆ ಇಲ್ಲಿಯವರೆಗೆ ಶಾಶ್ವತ ವಸತಿಗೃಹ ನಿರ್ಮಾಣ ಮಾಡಿಕೊಡಲು ಇಲ್ಲಿನ ಶಾಸಕರಿಗೆ ಸಾಧ್ಯವಾಗಲಿಲ್ಲ. ಪೌರಕಾರ್ಮಿಕರನ್ನು ಖಾಯಂ ಗೊಳಿಸುವುದಾಗಲಿ, ಅವರಿಗೆ ಶಾಶ್ವತ ವಸತಿಗೃಹ ವ್ಯವಸ್ಥೆಯಾಗಲಿ ಹಾಗೂ ಕನಿಷ್ಟಪಕ್ಷ ಅವರ ಸಂಕಷ್ಟಗಳನ್ನು ಆಲಿಸಲೂ ಇಲ್ಲಿನ ಶಾಸಕರು ತಯಾರಿಲ್ಲ. ಇವರು ಚುನಾವಣೆಗಳಲ್ಲಿ ಆಶ್ವಾಸನೆ ನೀಡಿದಂತೆ ಮಂಡಕ್ಕಿ ಬಟ್ಟಿಗಳಿಗೆ ಆಧುನಿಕ ತಂತ್ರಜ್ಞಾನ ಅಳವಡಿಸಿ ಅಭಿವೃದ್ಧಿ ಮಾಡುವ ಮನಸ್ಸೇ ಮಾಡಲಿಲ್ಲ. ಮಂಡಕ್ಕಿ ಬಟ್ಟಿ ಕಾರ್ಮಿಕರಿಗೆ ಶಾಶ್ವತ ಮನೆ ಇಲ್ಲದ ಕಾರಣ ಬರುವ ಅಲ್ಪಸ್ವಲ್ಪ ಕೂಲಿಯಲ್ಲಿ ಜೀವನ ನಡೆಸುವುದು ಅವರಿಗೆ ಕಷ್ಟವಾಗಿದೆ ಮತ್ತು ಇವರ ಪರಿಸ್ಥಿತಿ ನಿಜಕ್ಕೂ ಶೋಚನೀಯವಾಗಿದೆ. ಕಾರ್ಮಿಕರಿಗಾಗಿ ಲೇವಟ್ ಮಾಡಿ ಮನೆ ನಿರ್ಮಿಸಿ ಕೊಡುವ ಆಶ್ವಾಸನೆ ನೀಡಿ ಅದು ಇಲ್ಲಿಯವರೆಗೆ ಈಡೇರಲಿಲ್ಲ, ಆಶ್ವಾಸನೆಗಳು ಕೇವಲ ಆಶ್ವಾಸನೆಗಳಾಗಿ ಮಾತ್ರ ಉಳಿದಿವೆ.ಕ್ಷೇತ್ರದಲ್ಲಿ ಇಂತಹ ಹತ್ತು ಹಲವು ಸಮಸ್ಯೆಗಳು ತಾಂಡವವಾಡುತ್ತಿವೆ ಈ ಬಗ್ಗೆ ಕಾರ್ಯಕರ್ತರು ಕ್ಷೇತ್ರದ ಜನತೆಗೆ ಎಳೆ ಎಳೆಯಾಗಿ ತಿಳಿಹೇಳಬೇಕು ಮತ್ತು ಪರ್ಯಾಯ ರಾಜಕೀಯ ವ್ಯವಸ್ಥೆಗೆ ಎಸ್.ಡಿ.ಪಿ.ಐ ಪಕ್ಷದ ಅನಿವಾರ್ಯತೆಯ ಕುರಿತು ಜನರಿಗೆ ಮನವರಿಕೆ ಮಾಡುವ ಮೂಲಕ ದಾವಣಗೆರೆಯಲ್ಲಿ ಈಗಾಗಲೇ ಘೋಷಣೆ ಮಾಡಿರುವ ನಮ್ಮ ಅಭ್ಯರ್ಥಿ ಇಸ್ಮಾಯಿಲ್ ಜಬಿವುಲ್ಲಾ ಅವರನ್ನು ಗೆಲ್ಲಿಸುವ ಪ್ರಯತ್ನವನ್ನು ಮಾಡಬೇಕು, ಬೂತ್ ಮಟ್ಟದಲ್ಲಿ ಪಕ್ಷವನ್ನು ಬಲಪಡಿಸಲು ಕಾರ್ಯಪ್ರವೃತ್ತರಾಗಬೇಕು ಎಂದು ಕರೆಕೊಟ್ಟರು.ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಲತೀಫ್ ಪುತ್ತೂರು, ಜಿಲ್ಲಾಧ್ಯಕ್ಷರು ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿಯಾದ ಇಸ್ಮಾಯಿಲ್ ಜಬಿವುಲ್ಲಾ , ಪ್ರಧಾನ ಕಾರ್ಯದರ್ಶಿ ಸೈಯದ್ ಅಶ್ಫಾಕ್ , ಉಪಾಧ್ಯಕ್ಷರಾದ ರಜ್ವೀ ರಿಯಾಜ್ ಅಹಮದ್ ಮತ್ತು ಜಿಲ್ಲಾ ಸಮಿತಿ ಸದಸ್ಯರು ಉಪಸ್ಥಿತರಿದ್ದರು.ಜನವರಿ 14.01.2023

admin

Recent Posts

ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ನಗರದಲ್ಲಿ Social Democratic Party of India (SDPI) ವತಿಯಿಂದ “ಎಸ್‌ಐಆರ್ ಭಯ ಬೇಡ, ಜಾಗೃತಿ ಇರಲಿ” ಎಂಬ ಘೋಷಣೆಯಡಿ ಜನಜಾಗೃತಿ ಸಭೆ ಯಶಸ್ವಿಯಾಗಿ ನಡೆಯಿತು.ಸಭೆಯನ್ನು ಉದ್ದೇಶಿಸಿ ಮಾತನಾಡಿದ SDPI ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್, ಒಕ್ಕೂಟ ಬಿಜೆಪಿ ಸರ್ಕಾರವು ಚುನಾವಣಾ ಆಯೋಗವನ್ನು ಬಳಸಿಕೊಂಡು ಎಸ್‌ಐಆರ್ ಪ್ರಕ್ರಿಯೆಯ ಮೂಲಕ ಭಾರತೀಯರ ನಾಗರಿಕತ್ವವನ್ನು ಪ್ರಶ್ನಿಸುವ ದುರಾಲೋಚನೆಗೆ ಮುಂದಾಗಿದೆ ಎಂದು ತೀವ್ರವಾಗಿ ಆರೋಪಿಸಿದರು. ನೈಜ ಭಾರತೀಯರನ್ನು ಅನುಮಾನಾಸ್ಪದವಾಗಿ ಕಾಣುವುದು ಹಾಗೂ ಅವರನ್ನು ನಾಗರಿಕತ್ವದ ಅಗ್ನಿಪರೀಕ್ಷೆಗೆ ಒಳಪಡಿಸುವುದು ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ವಿರುದ್ಧವಾಗಿದೆ ಎಂದು ಹೇಳಿದರು.ದೇಶದಲ್ಲಿ ಅಕ್ರಮ ವಲಸಿಗರ ಸಮಸ್ಯೆ ಇದ್ದಲ್ಲಿ, ಅದನ್ನು ಪತ್ತೆಹಚ್ಚಲು ಮತ್ತು ತಡೆಯಲು ಸರ್ಕಾರ ಪ್ರತ್ಯೇಕ ಹಾಗೂ ಪರಿಣಾಮಕಾರಿ ಕ್ರಮಗಳನ್ನು ಕೈಗೊಳ್ಳಬೇಕು. ಆದರೆ ಎಲ್ಲಾ ಭಾರತೀಯರ ಮೇಲೂ ಸಂಶಯದ ನೆರಳು ಬೀರಿ ನಾಗರಿಕತ್ವ ಸಾಬೀತುಪಡಿಸುವಂತೆ ಒತ್ತಾಯಿಸುವುದು ಅಸಂಗತ ಮತ್ತು ಅನ್ಯಾಯಕರ ಕ್ರಮವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.ಎಸ್‌ಐಆರ್ ಪ್ರಕ್ರಿಯೆಯ ಕುರಿತು SDPI ರಾಜ್ಯ ಕೋಶಾಧಿಕಾರಿ ಅಮ್ಜದ್ ಖಾನ್ ವಿವರವಾದ ಮಾಹಿತಿ ನೀಡಿದರು. ಸಭೆಯ ಅಧ್ಯಕ್ಷತೆಯನ್ನು ವಿಧಾನಸಭಾ ಕ್ಷೇತ್ರಾಧ್ಯಕ್ಷ ಸಲಾಹುದ್ದೀನ್ ವಹಿಸಿದ್ದರು. ಮಂಡ್ಯ ಜಿಲ್ಲಾ ಉಪಾಧ್ಯಕ್ಷ ಸಾದಾತ್ ಹಾಗೂ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅತಿಖ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.ವಿವಿಧ ಸಂಘ–ಸಂಸ್ಥೆಗಳ ಮುಖಂಡರು, ಮಹಿಳೆಯರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಜನಜಾಗೃತಿ ಸಂದೇಶವನ್ನು ಬಲಪಡಿಸಿದರು.

SDPIKarnataka #Mandya #SIR

3 days ago

Condolence and Condemnation Statement

We express our heartfelt condolences to the people of Iran as they remember the passing…

4 days ago

Condolences

Nasir Chandsha We are deeply saddened by the demise of Nasir, SDPI, Belgaum District Working…

5 days ago