Categories: featureNewsPolitics

ಕರ್ನಾಟಕ ವಿಧಾನಸಭಾ ಚುನಾವಣೆ 2023ರ ಹಿನ್ನೆಲೆಯಲ್ಲಿ ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರನ್ನು ಭೇಟಿ ಮಾಡಿದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಪುಲಿಕೇಶಿನಗರದ ಅಭ್ಯರ್ಥಿ ಬಿ.ಆರ್. ಭಾಸ್ಕರ್ ಪ್ರಸಾದ್ ನೇತೃತ್ವದ ನಿಯೋಗ ಜನವರಿ 27, 2023ರಂದು ಈ ಕೆಳಗಿನ ಎರಡು ಮನವಿಗಳನ್ನು ಮಾಡಿಕೊಂಡಿದ್ದಾರೆ.ಏಪ್ರಿಲ್ 14 ಅಂಬೇಡ್ಕರ್ ಜಯಂತಿ, ದೇಶದ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಅಂಬೇಡ್ಕ‌ ಅವರ ಜಯಂತಿ ಆಚರಣೆಗೆ ಯಾವುದೇ ನೀತಿ ಸಂಹಿತೆ ತೊಡಕಾಗದಂತೆ ಚುನಾವಣಾ ದಿನಾಂಕಗಳ ಘೋಷಣೆಯನ್ನು ಅಂಬೇಡ್ಕರ್ ಜಯಂತಿಯ ನಂತರ ಘೋಷಣೆ ಮಾಡಬೇಕು.ಚುನಾವಣೆ ಸಂದರ್ಭದಲ್ಲಿ ಸೂಕ್ತ ರಕ್ಷಣಾ ವ್ಯವಸ್ಥೆ ಒದಗಿಸಲು ಕರ್ನಾಟಕದಲ್ಲಿ ಚುನಾವಣೆಗಳನ್ನು ಎರಡು ಹಂತಗಳಲ್ಲಿ ನಡೆಸಬೇಕು.ಮನವಿ ಸ್ವೀಕರಿಸಿದ ಮೀನಾ ಅವರು, ಭಾರತದ ಮುಖ್ಯ ಚುನಾವಣಾಧಿಕಾರಿಗಳು ಚುನಾವಣೆಗೂ ಮುನ್ನ ರಾಜ್ಯದ ಎಲ್ಲ ರಾಜಕೀಯ ಪಕ್ಷಗಳು, ಸಂಘ ಸಂಸ್ಥೆಗಳೊಂದಿಗೆ ಚರ್ಚೆ ನಡೆಸುತ್ತೇವೆ. ಆ ಸಂದರ್ಭದಲ್ಲಿ ಎಲ್ಲರ ಕಡೆಯಿಂದ ಈ ಮನವಿ ಬಂದರೆ ಸೂಕ್ತ ಕ್ರಮ ಕೈಗೊಳ್ಳುತ್ತೇವೆ ಎಂದು ತಿಳಿಸಿದರು. ನಿಯೋಗದಲ್ಲಿ ಪಕ್ಷದ ಬೆಂಗಳೂರು ನಗರ ಜಿಲ್ಲಾಧ್ಯಕ್ಷರಾದ ಮುಜಾಹಿದ್ ಪಾಷಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಸಲೀಮ್, ಜಿಲ್ಲಾ ಕಾರ್ಯದರ್ಶಿ ಎಂ.ಕೆ. ಮೇತ್ರಿ ಅವರು ಉಪಸ್ಥಿತರಿದ್ದರು.ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಕರ್ನಾಟಕ

admin

Recent Posts

ಪತ್ರಿಕಾ ಪ್ರಕಟಣೆ

ಪೆರಿಯಾರ್ ಅವರ ಹೋರಾಟ ಮಾನವ ಘನತೆ, ಸಮಾನತೆ ಮತ್ತು ಸ್ವಾಭಿಮಾನದ ಪ್ರತೀಕ: ಅಪ್ಸರ್ ಕೊಡ್ಲಿಪೇಟೆ ಆನೇಕಲ್:ಸೆ. 17:ಸಾಮಾಜಿಕ ನ್ಯಾಯ, ಸಮಾನತೆ,…

2 days ago

ಫ್ಯಾಶಿಷ್ಟರು ಗೌರಿ ಲಂಕೇಶ್‌ ಅವರನ್ನು ಗುಂಡಿಕ್ಕಿ ಕೊಂದ ದಿನ.

5 ಸೆಪ್ಟೆಂಬರ್ 2017 ನಾವು ಮರೆಯುವುದಿಲ್ಲ SDPIKarnataka #GowriLankesh

2 weeks ago

Will fight for every citizen of this country

Prakash Raj, Abdul Majeed SDPI and several others detained by Bengaluru Police During Election Commission…

2 weeks ago

ಪ್ರೆಸ್ ರಿಲೀಸ್

ಜೈಪುರದಲ್ಲಿ ಸರ್ಕಾರಿ ಶಾಲಾ ತಪಾಸಣೆಗೆ ತೆರಳಿದ್ದ ತಂಡದ ಮೇಲೆ ದಾಳಿ ಖಂಡನೀಯ: ನ್ಯಾಯಾಂಗ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ…

4 weeks ago