ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮತ್ತು ನಂಜುಡಪ್ಪ ವರದಿಯ ಅನುಷ್ಠಾನ ವಿಚಾರದಲ್ಲಿ ಈವರೆಗಿನ ಯಾವ ಸರ್ಕಾರವೂ ಬದ್ಧತೆಯಿಂದ ಕಾರ್ಯನಿರ್ವಹಿಸಿಲ್ಲ: ಅಫರ್ ಕೊಡ್ಲಿಪೇಟೆ ಆರೋಪ

ಇಲ್ಲಿಯವರೆಗೆ ಅಡಳಿತ ನಡೆಸಿದ ಯಾವುದೇ ಪಕ್ಷದ ಸರ್ಕಾರ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ಯಾವುದೇ ರೀತಿಯಾದ ಪ್ರಾಧಾನ್ಯತೆ ಕೊಟ್ಟಿಲ್ಲ. ಕಲ್ಯಾಣ ಕರ್ನಾಟಕದ ಜನರ ಅಭಿವೃದ್ಧಿಗೆ ಜಾರಿಗೆ ಬಂದ 371ಜೆ ಕಲಂನಡಿ ಈ ವರೆಗೆ ಶೈಕ್ಷಣಿಕವಾಗಿ ಉತ್ತಮ ಅವಕಾಶ ದೊರೆತಿದ್ದರೂ ಉದ್ಯೋಗ ಅವಕಾಶ, ಮುಂಬಡ್ತಿ ವಿಷಯದಲ್ಲಿ ಅನ್ಯಾಯವಾಗುತ್ತಿದ್ದು ಸರಕಾರ ಸಮರ್ಪಕವಾಗಿ ಕಲಂ ಜಾರಿಗೆ ತಂದಿಲ್ಲ ಎಂದು ಆರೋಪಿಸಿದರು. ನಂಜುಡಪ್ಪ ವರದಿಯ ಅನುಷ್ಠಾನ ವಿಚಾರದಲ್ಲಿ ಈವರೆಗಿನ ಯಾವುದೇ ಸರ್ಕಾರ ಬದ್ಧತೆಯಿಂದ ಕಾರ್ಯನಿರ್ವಹಿಸಿಲ್ಲ. ಹೀಗಾಗಿ, ರಾಜ್ಯದಲ್ಲಿ 39ರಷ್ಟಿದ್ದ ಅತ್ಯಂತ ಹಿಂದುಳಿದ ತಾಲೂಕುಗಳ ಸಂಖ್ಯೆ ಈಗ 40ಕ್ಕೆ ಹಾಗೂ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ 21 ರಷ್ಟಿದ್ದ ಅತ್ಯಂತ ಹಿಂದುಳಿದ ತಾಲೂಕುಗಳ ಸಂಖ್ಯೆ 24ಕ್ಕೆ ಏರಿಕೆಯಾಗಿದೆ ಎಂದು ಸಿಎಂಡಿಆರ್ ಸಂಸ್ಥೆ ನಡೆಸಿದ ಸಮೀಕ್ಷೆಯಿಂದ ತಿಳಿದು ಬಂದಿದೆ ಎಂದು ಅಪ್ಪ‌ ಕೊಡ್ಲಿಪೇಟೆ ಹೇಳಿದರು. ರಾಜ್ಯದ ಮೂರೂ ಪ್ರಮುಖ ಪಕ್ಷಗಳಿಂದ ಬೇಸತ್ತಿರುವ ಜನ ಈ ಬಾರಿ ಅಭಿವೃದ್ಧಿಗಾಗಿ ಎಸ್‌ಡಿಪಿಐ ಪಕ್ಷದ ಕಡೆ ಒಲವು ತೋರಲಿದ್ದಾರೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದರು. ಕಲ್ಯಾಣ ಕರ್ನಾಟಕದ ಅಭಿವೃದ್ಧಿಗಾಗಿ ಮತ್ತು ಸದೃಢ, ಸಮೃದ್ಧ, ಸೌಹಾರ್ದಯುತ ಕರ್ನಾಟಕಕ್ಕಾಗಿ ಮುಂಬರುವ ಚುನಾವಣೆಯಲ್ಲಿ ಮತದಾರರು ಎಸ್ಟಿಪಿಐ ಯನ್ನು ಬೆಂಬಲಿಸಬೇಕೆಂದು ಕರೆ ನೀಡಿದರು.

admin

Recent Posts

🌟 Tribute to Dr. A.P.J. Abdul Kalam 🌟

Remembering Dr. A.P.J. Abdul Kalam, former President of India and the Missile Man of India,…

5 days ago

ಭಾರತ ಅಫ್ಘಾನಿಸ್ತಾನದೊಂದಿಗೆ ಸೌಹಾರ್ದಯುತ ಸಂಬಂಧವನ್ನು ಕಾಪಾಡಿಕೊಳ್ಳಬೇಕು.

ಆಫ್ಘಾನಿಸ್ತಾನದ ತಾಲಿಬಾನ್ ಸರ್ಕಾರದ ವಿದೇಶಾಂಗ ಸಚಿವ ಮೌಲವಿ ಆಮಿರ್ ಖಾನ್ ಮುತ್ತಾಕಿ ಅವರ ಭಾರತ ಭೇಟಿಯು ಒಂದು ಉತ್ತಮ ಬೆಳವಣಿಗೆ.…

6 days ago

ಚುನಾವಣಾ ಸ್ವಾತಂತ್ರ್ಯವನ್ನು ಪ್ರತಿಪಾದಿಸುವಲ್ಲಿ ಬಿಹಾರ ಜನತೆ ಮುಂದಾಳತ್ವ ವಹಿಸಬೇಕು

~ಮೊಹಮ್ಮದ್ ಇಲ್ಯಾಸ್ ತುಂಬೆ,ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ

7 days ago

ಪ್ಯಾಲೆಸ್ತೀನ್ ಪ್ರತಿರೋಧಕ್ಕೆ ಎಸ್‌ಡಿಪಿಐ ನಮನ ಯುದ್ಧ ವಿರಾಮಕ್ಕೆ ಸ್ವಾಗತ.

ಗಾಜಾದಲ್ಲಿ ಯುದ್ಧ ವಿರಾಮದ ಪ್ರಾರಂಭಿಕ ಹಂತಗಳನ್ನು ವಿಶ್ವವು ಕಣ್ತುಂಬಿಕೊಳ್ಳುತ್ತಿರುವ ಈ ಮಹತ್ವದ ಮುನ್ನಡೆಯ ಸಾಧನೆಗೆ ಕಾರಣರಾದ ಎಲ್ಲರಿಗೂ ಹೃತೂರ್ವಕ ಕೃತಜ್ಞತೆಯನ್ನು…

1 week ago