ಕೊಪ್ಪಳದಲ್ಲಿ ದಲಿತ ಮಹಿಳೆಯ ಹಸು ತನ್ನ ತೋಟಕ್ಕೆ ಪ್ರವೇಶಿಸಿತು ಎಂದು ಆಕೆಯನ್ನು ಮೇಲ್ಟಾತಿಯ ವ್ಯಕ್ತಿ ಚಪ್ಪಲಿಯಿಂದ ಹೊಡೆದಿರುವುದು ಅತ್ಯಂತ ಅಮಾನವೀಯ ಕೃತ್ಯ. ಜಾತಿ ಪೋಷಿಸುವ ರಾಜಕೀಯ ಪಕ್ಷಗಳೇ ಇಂತಹ ಘಟನೆಗಳಿಗೆ ಹೊಣೆ: ಅಬ್ದುಲ್ ಮಜೀದ್ ಮೈಸೂರು, ರಾಜ್ಯಾಧ್ಯಕ್ಷರು, ಎಸ್‌ಡಿಪಿಐ

ಬೆಂಗಳೂರು, 10 ಫೆಬ್ರವರಿ 2023: ದೇಶಕ್ಕೆ ಸ್ವಾತಂತ್ರ್ಯ ದೊರೆತು 75 ವರ್ಷ ಕಳೆದಿದ್ದರು ಜಾತಿಯೆಂಬ ಅನಿಷ್ಠ ಮನಸ್ಥಿತಿ ಇನ್ನೂ ಹಾಗೆಯೇ ಉಳಿದಿರುವುದು ನಮ್ಮ ದೇಶದ ದುರಂತ. ಕೊಪ್ಪಳ ಜಿಲ್ಲೆಯಲ್ಲಿ ದಲಿತ ಮಹಿಳೆಯ ಹಸು ತನ್ನ ತೋಟಕ್ಕೆ ಪ್ರವೇಶಿಸಿತು ಎಂದು ಆಕೆಯನ್ನು ಜಾತಿ ಹೆಸರಿಸಿ ಅವಾಚ್ಯ ಶಬ್ದಗಳಿಂದ ನಿಂದಿಸಿ, ಚಪ್ಪಲಿಯಿಂದ ಹೊಡೆದಿರುವ ಘಟನೆ ಅತ್ಯಂತ ಖಂಡನೀಯ ಹಾಗೂ ನಾವೆಲ್ಲರೂ ತಲೆತಗ್ಗಿಸುವಂಥದ್ದು. ಜಾತಿ ವ್ಯವಸ್ಥೆಯನ್ನು ತಮ್ಮ ರಾಜಕೀಯ ಲಾಭಗಳಿಗೆ ಪೋಷಿಸಿಕೊಂಡು ಬಂದಿರುವ ರಾಜಕೀಯ ಪಕ್ಷಗಳು, ಅದರಲ್ಲೂ ಬಿಜೆಪಿಯಂತಹ ಮನುವಾದಿ ಪಕ್ಷಗಳೇ ಇಂತಹ ಘಟನೆಗಳಿಗೆ ಹೊಣೆ ಎಂದು ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (ಎಸ್‌ಡಿಪಿಐ) ಪಕ್ಷದ ರಾಜ್ಯಾಧ್ಯಕ್ಷರಾದ ಅಬ್ದುಲ್ ಮಜೀದ್ ಮೈಸೂರು ಅವರು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೊಪ್ಪಳ ಜಿಲ್ಲೆಯ ರಾಂಪುರ ಗ್ರಾಮದಲ್ಲಿ 30 ವರ್ಷದ ದಲಿತ ಮಹಿಳೆ ಶೋಭಮ್ಮ ಹರಿಜನ್ ಅವರ ಮೇಲೆ ಜಾತಿವಾದಿ ಅಮರೇಶ್ ಕುಂಬಾರ್ ಈ ಅಮಾನವೀಯ ಕ್ರೌರ್ಯ ಮೆರೆದಿದ್ದಾನೆ. ರಾಜ್ಯದಲ್ಲಿ ಸರ್ಕಾರ ಇದ್ದೂ ಇಲ್ಲದಂತ ಸ್ಥಿತಿ ನಿರ್ಮಾಣವಾಗಿದೆ. ಬೊಮ್ಮಾಯಿ ಅವರ ಸರ್ಕಾರ ಕಮಿಷನ್, ದ್ವೇಷ ಬಿತ್ತನೆ, ರಾಜಕೀಯ ವಿರೋಧಿಗಳ ವಿರುದ್ಧ ಷಡ್ಯಂತ್ರ ರೂಪಿಸುವದರಲ್ಲಿ ವ್ಯಸ್ಥವಾಗಿದ್ದು, ಎಲ್ಲೋ ಕೇಳಿದ್ದ ‘ಜಂಗಲ್ ರಾಜ್’ ನಮ್ಮ ರಾಜ್ಯದಲ್ಲಿ ನೋಡಬೇಕಾದ ದುರ್ವಿಧಿ ನಮಗೆಲ್ಲ ಒದಗಿ ಬಂದಿದೆ ಎಂದು ಅವರು ತಮ್ಮ ಪ್ರಕಟಣೆಯಲ್ಲಿ ಆರೋಪಿಸಿದ್ದಾರೆ. ಭಾರತದಲ್ಲಿ ಪ್ರತಿದಿನ ಸುಮಾರು 140 ದಲಿತ ದೌರ್ಜನ್ಯ ಪ್ರಕರಣಗಳು ಅಧಿಕೃತವಾಗಿಯೇ ದಾಖಲಾಗುತ್ತವೆ. ಮೋದಿ ನೇತೃತ್ವದ ಮನುವಾದಿ ಬಿಜೆಪಿ ಸರ್ಕಾರ ಅಡಳಿತ ಹಿಡಿದ ಮೇಲೆ ಆ ಸಂಖ್ಯೆ ದಿನದಿಂದ ದಿನಕ್ಕೆ ಏರುತ್ತಲೇ ಇದೆ. ಆದರೆ ಅವುಗಳಲ್ಲಿ ಶಿಕ್ಷೆಗೆ ಒಳಗಾಗುವ ಪ್ರಮಾಣ ಕೇವಲ 7% ಮಾತ್ರ. ಈ ಅಂಕಿಗಳೇ ಕ್ರೌರ್ಯ ಮೆರೆಯುವವರಿಗೆ ಧೈರ್ಯ ತುಂಬುತ್ತಿವೆ. ಈ ಪ್ರಕರಣವು ಕೂಡ ಅದೇ ಹಾದಿ ಹಿಡಿಯದೆ ನೊಂದ ಮಹಿಳೆಗೆ ಸೂಕ್ತ ನ್ಯಾಯ ಸಿಗಬೇಕು ಮತ್ತು ಇಂತಹ ನೀಚ ಕೃತ್ಯ ಎಸಗಿದ ವ್ಯಕ್ತಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಮಜೀದ್ ಅವರು ಪ್ರಕಟಣೆಯ ಮೂಲಕ ಅಗ್ರಹಿಸಿದ್ದಾರೆ.

ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ -ಕರ್ನಾಟಕ

admin

Recent Posts

ಪತ್ರಿಕಾ ಪ್ರಕಟಣೆ – SDPI, ಕರ್ನಾಟಕ.

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು, ಹಣದ ಬಲ ಮತ್ತು ರಾಜ್ಯ ಯಂತ್ರಾಂಗದ ಬಹಿರಂಗ ದುರುಪಯೋಗದ ಮೂಲಕ ಪಡೆದ…

6 days ago

ಶಹೀದ್ ಟಿಪ್ಪುಸುಲ್ತಾನ್

ಹುತಾತ್ಮ ದಿನ 04 ಮೇ "ನೂರು ವರ್ಷ ನರಿಯಾಗಿ ಬದುಕುವುದಕ್ಕಿಂತ ಒಂದು ದಿನ ಹುಲಿಯಾಗಿ ಬದುಕುವುದು ಉತ್ತಮ." ~ಅಬ್ದುಲ್ ಮಜೀದ್,ರಾಜ್ಯಾಧ್ಯಕ್ಷರು…

6 days ago

LPG ಗ್ಯಾಸಿನ ಬೆಲೆ ಏರಿಕೆ ಜನರ ಮೇಲೆ ಮತ್ತೊಂದು ಹೊರೆ!

ಕೇಂದ್ರ ಸರ್ಕಾರದ ನಿರಂತರ ಬೆಲೆ ಏರಿಕೆ ನೀತಿಯಿಂದ ಸಾಮಾನ್ಯ ಜನರು, ವಿಶೇಷವಾಗಿ ಬಡವರು ಮತ್ತು ಮಧ್ಯಮ ವರ್ಗದವರು ತೀವ್ರ ಸಂಕಷ್ಟಕ್ಕೆ…

1 week ago

ಬೋವರಿಂಗ್ ಆಸ್ಪತ್ರೆ ದುರಂತ ಸರ್ಕಾರದ ನಿರ್ಲಕ್ಷ್ಯ”

-7 ಜನರು ಮೃತಪಟ್ಟಿದ್ದಾರೆ – ಇವರಲ್ಲಿ 2 ಮಕ್ಕಳು ಸೇರಿದ್ದಾರೆ! ಹಳೆಯದು, ಬಿರುಕು ಬಿದ್ದ ಗೋಡೆ ಕುಸಿದು ಬಡ ಮತ್ತು…

1 week ago

يوم مزدور

01 MAY 2026 محنت کشوں کا احترام، عزت “ ! زندگی، اور حقوق کا انصاف…

1 week ago

HAPPY LABOUR DAY

01 MAY 2026 "Respect Labour. Restore Dignity. Ensure Justice. This Labour Day, let every worker…

1 week ago